Give reservation to 3A, 3B categories also: Nikhil Kumaraswamy demands

3A, 3B ವರ್ಗದವರಿಗೂ ಮೀಸಲಾತಿ ನೀಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: 134 ಶಾಸಕರನ್ನ ಹೊಂದಿರುವ ರಾಜ್ಯ ಕಾಂಗ್ರೆಸ್ ಮೀಸಲಾತಿ ವಿಚಾರದಲ್ಲಿ ತಾರತಮ್ಯ ಮಾಡ್ತಿದೆ. 3A, 3B ಬಿ ವರ್ಗದವರು ಏನು ದ್ರೋಹ ಮಾಡಿದ್ದಾರೆ. ಚುನಾವಣೆಯಲ್ಲಿ ಉಳಿದ ಸಮುದಾಯಗಳು ನಿಮ್ಮ ಜತೆ ನಿಲ್ಲಲಿಲ್ಲವೇ.? ನಿಮ್ಮಲ್ಲಿರುವ ಅಜೆಂಡಾ ಹೇಳಿ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗ್ರಹಿಸಿದರು.

ಈ ಬಗ್ಗೆ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಗುತ್ತಿಗೆಯಲ್ಲಿ 4% ಮೀಸಲಾತಿಯನ್ನ 2B ವರ್ಗದವರಿಗೆ ಕೊಟ್ಟಿದ್ದಿರಲ್ಲಾ. ಆರ್ಥಿಕವಾಗಿ ಎಲ್ಲರಿಗೂ ಸಮಾನ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

ನಿಮ್ಮ ನಾಯಕರು ಸಂವಿಧಾನದವನ್ನ ಉಳಿಸುತ್ತೇವೆ ಎಂದು ಸಂವಿಧಾನದ ಪುಸ್ತಕವನ್ನ ಕೈಯಲ್ಲಿ ಇಡಿದು ಗಂಟೆ ಅಲ್ಲಾಡಿಸಿದಂಗೆ ಅಲ್ಲಾಡಿಸುವುದನ್ನ ನೋಡಿದ್ದೇವೆ. ಈ ರೀತಿ ಓಲೈಕೆ ರಾಜಕೀಯ ಮಾಡಿ ಏಕ ಸಮುದಾಯವನ್ನ ಮೆಚ್ಚಿಸುವುದಕ್ಕೆ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ನಿಮ್ಮ ಅಜೆಂಡ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುತ್ತಿಗೆಯಲ್ಲಿ 4% ಮೀಸಲಾತಿಯನ್ನು ಒಂದು ಸಮುದಾಯಕ್ಕೆ ಕೊಡಬೇಡಿ ಎಂದು ನಾವು ವಿರೋಧ ಮಾಡ್ತಿಲ್ಲ. 3A, 3B ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಎಲ್ಲರಿಗೂ ಸಮಾನತೆಯಿಂದ ಮೀಸಲಾತಿ ನೀಡಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಆಗ್ರಹ ಮಾಡಿದರು.

JDS-ಬಿಜೆಪಿ ಮಧ್ಯೆ ಯಾವುದೇ ಗೊಂದಲವಿಲ್ಲ

ಬಿಜೆಪಿ ಪ್ರತಿಭಟನೆಗೆ ಜೆಡಿಎಸ್ ಬೆಂಬಲ ವಿಚಾರಕ್ಕೆ ಮಾತನಾಡಿದ ಅವರು, ನಾಳೆ ಫ್ರೀಡಂ ಪಾರ್ಕ್ ನಲ್ಲಿ ಆಹೋರಾತ್ರಿ ಪ್ರತಿಭಟನೆ ಮಾಡ್ತಿದ್ದಾರೆ.

ಮಿತ್ರ ಪಕ್ಷವಾಗಿ ಸದನದ ಒಳಗಡೆ ಮತ್ತು ಹೊರಗೆ ಸರ್ಕಾರವನ್ನ ಎಚ್ಚರಿಸುವ ಜವಾಬ್ದಾರಿ ಇದೆ. ಆಗಾಗಿ ಬಿಜೆಪಿ ಹೋರಾಟಕ್ಕೆ ಘೋಷಣೆ ಕೊಟ್ಟಿದ್ದಾರೆ. ಅದೇ ರೀತಿ ಬೆಲೆ ಏರಿಕೆ ವಿಚಾರಕ್ಕೆ ಜೆಡಿಎಸ್ ಪಕ್ಷವು ಕೂಡ ಹೋರಾಟ ಹೇಗೆ ಇರುತ್ತೆ ಅಂತ ಅತೀ ಶೀಘ್ರದಲ್ಲಿ ತಿಳಿಸುತ್ತೇನೆ. ನಮ್ಮಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ ಎಂದು ತಿಳಿಸಿದರು.

JDS-ಬಿಜೆಪಿ ಮಧ್ಯೆ ಯಾವುದೇ ಗೊಂದಲವಿಲ್ಲ

ಬಿಜೆಪಿ ಪ್ರತಿಭಟನೆಗೆ ಜೆಡಿಎಸ್ ಬೆಂಬಲ ವಿಚಾರಕ್ಕೆ ಮಾತನಾಡಿದ ಅವರು, ನಾಳೆ ಫ್ರೀಡಂ ಪಾರ್ಕ್ ನಲ್ಲಿ ಆಹೋರಾತ್ರಿ ಪ್ರತಿಭಟನೆ ಮಾಡ್ತಿದ್ದಾರೆ. ಮಿತ್ರ ಪಕ್ಷವಾಗಿ ಸದನದ ಒಳಗಡೆ ಮತ್ತು ಹೊರಗೆ ಸರ್ಕಾರವನ್ನ ಎಚ್ಚರಿಸುವ ಜವಾಬ್ದಾರಿ ಇದೆ. ಆಗಾಗಿ ಬಿಜೆಪಿ ಹೋರಾಟಕ್ಕೆ ಘೋಷಣೆ ಕೊಟ್ಟಿದ್ದಾರೆ. ಅದೇ ರೀತಿ ಬೆಲೆ ಏರಿಕೆ ವಿಚಾರಕ್ಕೆ ಜೆಡಿಎಸ್ ಪಕ್ಷವು ಕೂಡ ಹೋರಾಟ ಹೇಗೆ ಇರುತ್ತೆ ಅಂತ ಅತೀ ಶೀಘ್ರದಲ್ಲಿ ತಿಳಿಸುತ್ತೇನೆ. ನಮ್ಮಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ ಎಂದು ತಿಳಿಸಿದರು.

ಸಿನಿಮಾ ತೋರಿಸಿದ್ದೆ ಬೇರೆ, ಟೀಸರ್ ನೋಡ್ತಿರೋದೆ ಬೇರೆ

ಹನಿಟ್ರ್ಯಾಪ್ ವಿಚಾರಕ್ಕೆ ಮಾತನಾಡಿದ ಅವರು, ಸದನದ ಒಳಗೆ ಅವರ ಪಕ್ಷದ ಪ್ರಭಾವಿ ಸಚಿವರೇ ಹೇಳಿದ್ದಾರೆ ಇದರ ಹಿಂದೆ ಯಾರೇ ಇರಲಿ ತನಿಖೆ ಮಾಡಿಸಿ ಅಂತ ಹೇಳಿದ್ರು, ಆದರೆ ಸಿನಿಮಾ ತೋರಿಸಿದ್ದೆ ಬೇರೆ, ಟೀಸರ್ ನೋಡ್ತಿರೋದೆ ಬೇರೆ.

ಈ ಪ್ರಕರಣವನ್ನ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ ಕಳೆದ ಎರಡು ವರ್ಷಗಳಲ್ಲಿ ನಡೆದ ಪ್ರಕರಣಗಳಲ್ಲಿ ಹೇಗೆ ತನಿಖೆಯಾಯ್ತು..? ಆದರೆ ಈ ಪ್ರಕರಣದಲ್ಲಿ ಯಾಕೆ ತನಿಖೆಗೆ ಆ ವೇಗ ಸಿಗುತ್ತಿಲ್ಲ ಸರ್ಕಾರ ಪಾರದರ್ಶಕ ತನಿಖೆ ನಡೆಸಿ ಹನಿಟ್ರ್ಯಾಪ್, ಕೊಲೆ ಸುಫಾರಿ ಯಾರು ಎಂಬುದನ್ನ ಜನತೆಯ ಮುಂದಿಡಬೇಕು ರಾಜ್ಯ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.

ರಾಜಕೀಯ

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Bjp

[ccc_my_favorite_select_button post_id="105018"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

ಗುಂಪುಗಳ ನಡುವಿನ ಕಂಡು ಬೆಚ್ಚಿ ಬಿದ್ದ ಜನರು. ದೊಡ್ಡಬಳ್ಳಾಪುರ ನಗರದಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಮೀತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Doddaballapura

[ccc_my_favorite_select_button post_id="105003"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!