Three drown in reservoir to save boy's life

ಬಾಲಕನ ಜೀವ ಉಳಿಸಲು ಹೋಗಿ ಜಲಾಶಯದಲ್ಲಿ ಮುಳುಗಿ ಮೂವರು ಜಲಸಮಾಧಿ

ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ 6 ವರ್ಷದ ಬಾಲಕನ ಉಳಿಸಲು ಹೋದ ಮೂವರು ಸಂಬಂಧಿಕರು ನೀರುಪಾಲಾಗಿ ಜಲಸಮಾಧಿಯಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ.

ಅಂದಹಾಗೆ ಬೆಂಗಳೂರು ಮೂಲದ 35 ವರ್ಷದ ಫರ್ಹೀನಾ, ಚಿಕ್ಕಬಳ್ಳಾಪುರ ನಿವಾಸಿ 35 ವರ್ಷದ ಬಷೀರಾ, ಹಾಗೂ 45 ವರ್ಷದ ಬೆಂಗಳೂರಿನ ಇಮ್ರಾನ್ ಮೃತರು.

ಅಂದಹಾಗೆ ರಂಜಾನ್ ಹಬ್ಬದ ಮುಗಿದ ಕಾರಣ ಮೃತರ ಸಂಬಂಧಿಕರೆಲ್ಲಾ ಸೇರಿ 10 ಮಂದಿ ಮಕ್ಕಳೊಡನೆ ಎರಡು ಕಾರುಗಳ ಮೂಲಕ ಚಿಕ್ಕಬಳ್ಳಾಪುರದ ಸುತ್ತಮುತ್ತಲ ಪ್ರವಾಸಿತಾಣಗಳಿಗೆ ಪಿಕ್ನಿಕ್ ಗೆ ಅಂತ ಹೋಗಿದ್ರು, ಬೆಳಿಗ್ಗೆ ನಂದಿಬೆಟ್ಟಕ್ಕೆ ಹೋಗಿದ್ದು ರಸ್ತೆ ಬಂದ್ ಹಿನ್ನೆಲೆಯಲ್ಲಿ ಶ್ರೀನಿವಾಸ ಸಾಗರದತ್ತ ಹೋಗಿದ್ದಾರೆ.

ಮಧ್ಯಾಹ್ನ ಊಟ ಮಾಡೋಣ ಅಂತ ಜಲಾಶಯದ ಬಂಡೆ ಮೇಲೆ ಕೂತು ಊಟ ಮಾಡೋಕೆ ಮುಂದಾಗಿದ್ರು. ಅಷ್ಟರಲ್ಲಿ ಫರ್ ಹೀನಾರ 6 ವರ್ಷದ ಗಂಡು ಮಗು ಅನಂ ನೀರಿನಲ್ಲಿ ಇಳಿದು ಆಟವಾಡುತ್ತಿದ್ದು.

ಆಕಸ್ಮಿಕವಾಗಿ ಕಾಲು ಜಾರಿ ನೀರಿನೊಳಗೆ ಮುಳುಗಿದ್ದಾನೆ. ಕೂಡಲೇ ಫರಹೀನಾ ಮಗನ ರಕ್ಷಣೆಗೆ ನೀರಿಗೆ ಇಳಿದಿದ್ದು, ನಂತರ ಇಮ್ರಾನ್ ಹಾಗೂ ಬಷೀರಾ ಸಹ ಒಬ್ಬೊಬ್ಬರಾಗಿ ನೀರಿಗೆ ಧುಮುಕಿದ್ದಾರೆ. ಆದ್ರೆ ಅನಂನ ರಕ್ಷಣೆ ಮಾಡಿ ಮೂವರು ಸಹ ಮರಳಿ ಮೃಏಲೆ ಬರಲಾಗದೆ ನೀರಿನಲ್ಲೇ ಮುಳುಗಿದ್ದಾರೆ.

ಅಲ್ಲೇ ಇದ್ದ ಸ್ಥಳೀಯರು ಮೂವರನ್ನ ಮೇಲೆ ತಂದಿದ್ದಾರೆ.. ಅರೆ ಉಸಿರಾಡುತ್ತಿದ್ದವರ ಜೀವ ಉಳಿಸಲು ಮಕ್ಕಳು ಸಿಪಿಆರ್ ಮಾಡಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಗೆ ಸೇರಿದ ಅಮ್ಮ ಅಂಬ್ಯುಲೆನ್ಸ್ ಬಂದು ಮೂವರನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ.. ಆದ್ರೆ ಅರ್ಧಂಬರ್ಧ ಉಸಿರಾಡುತ್ತಿದ್ದ ಮಹಿಳೆ ಸೇರಿ ಮೂವವರು ಸಹ ಮೃತಪಟ್ಟಿದ್ದಾರೆ.

ಮೃತರನ್ನ ಕಳೆದುಕೊಂಡು ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜಕೀಯ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಇಲಾಖೆಗಳಲ್ಲಿಯೂ ಐವತ್ತು ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಂಸದ Basavaraj Bommai

[ccc_my_favorite_select_button post_id="105001"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

ಗುಂಪುಗಳ ನಡುವಿನ ಕಂಡು ಬೆಚ್ಚಿ ಬಿದ್ದ ಜನರು. ದೊಡ್ಡಬಳ್ಳಾಪುರ ನಗರದಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಮೀತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Doddaballapura

[ccc_my_favorite_select_button post_id="105003"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!