Cmsiddaramaiah| ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಶಕ್ತಿ ಬರುವುದಿಲ್ಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಸಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ನುಡಿದರು.

537 ನೇ ಕನಕ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ ಏಳೆಗೆಗಾಗಿ ಶ್ರಮಿಸಿ ದಾಸ ಶ್ರೇಷ್ಠರಾದರು ಎಂದರು.

ಶರಣ ಸಾಹಿತ್ಯದಲ್ಲಿ ಅಣ್ಣ ಬಸವಣ್ಣ, ದಾಸ ಸಾಹಿತ್ಯದಲ್ಲಿ ಕನಕದಾಸರು ಅತ್ಯಂತ ಪ್ರಮುಖರು. ಬುದ್ದನಿಂದ ಕನಕದಾಸರವರೆಗೂ, ಆ ನಂತರವೂ ಬಹಳ ಪುಣ್ಯಾತ್ಮರು ಜಾತಿರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್, ನಾರಾಯಣಗುರು ಮತ್ತು ಕನಕದಾಸರು ಕೂಡ ಜಾತಿ ವ್ಯವಸ್ಥೆ, ವರ್ಣ ವ್ಯವಸ್ಥೆಯ ಕಾರಣಕ್ಕೆ ಅವಮಾನಿತರಾಗಿದ್ದರು. ಯಾರೂ ಜನ್ಮತಃ ದಡ್ಡರಾಗಿರಲು ಸಾಧ್ಯವಿಲ್ಲ. ಕಾಳಿದಾಸರು ಶಾಕುಂತಲಾ ಬರೆದದ್ದು, ವ್ಯಾಸರು ಮಹಾಭಾರತ ಬರೆದದ್ದು, ವಾಲ್ಮೀಕಿ ರಾಮಾಯಣ ಬರೆದದ್ದೇ ಹುಟ್ಟಿನಿಂದ ಯಾರೂ ದಡ್ಡರಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದೆ ಎಂದರು.

ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಕಾರಣದಿಂದ ನನಗೆ ಮುಖ್ಯಮಂತ್ರಿ ಅಗುವ ಅವಕಾಶ ಸಿಕ್ಕಿತು ಎಂದರು.

ಒಬ್ಬರಿಗೆ ಒಂದೇ ಮತ. ಎಲ್ಲಾ ಜಾತಿ, ಧರ್ಮ, ಅಂತಸ್ತಿವರಿಗೂ ಒಂದೇ ಮತ. ಈ ಸಮಾನತೆ ಆರ್ಥಿಕವಾಗಿ, ಸಾಮಾಜಿಕವಾಗಿಯೂ ಜಾರಿ ಆಗಬೇಕು. ಆಗ ಮಾತ್ರ ಸಮಾನತೆ ದಿಕ್ಕಿನಲ್ಲಿ ನಾವು ಮುನ್ನಡೆಯಲು ಸಾಧ್ಯ ಎಂದರು.

ಯಾವ ಧರ್ಮದಲ್ಲೂ ಮನುಷ್ಯ ತಾರತಮ್ಯ ಇಲ್ಕ. ಧರ್ಮವನ್ನು ರಾಜಕೀಯವಾಗಿ ಬಳಸಿಕೊಳ್ಳುವವರು ತಮ್ಮ ಲಾಭಕ್ಕಾಗಿ ತಾರತಮ್ಯ, ದ್ವೇಷ ಸೃಷ್ಟಿಸುತ್ತಾರೆ ಎಂದರು.

ಶೋಷಿತ ಸಮುದಾಯಗಳು ಜಾತಿ ಸಮ್ಮೇಳನ ಮಾಡುವುದು ತಪ್ಪಲ್ಲ. ಆದರೆ ಮುಂದುವರೆದ ಜಾತಿಗಳು ಜಾತಿ ಹೆಸರಲ್ಲಿ ಸಮ್ಮೇಳನ ನಡೆಸುವುದು ಸಾಮಾಜಕವಾಗಿ ತಪ್ಪಾಗುತ್ತದೆ. ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಶಕ್ತಿ ಬರುವುದಿಲ್ಲ ಎಂದರು.

ಮನುಷ್ಯ ಧರ್ಮ ಸ್ಥಾಪನೆ ಆಗುವವರೆಗೂ ನಾವೆಲ್ಲರೂ ಶ್ರಮಿಸುತ್ತಲೇ ಇರಬೇಕು.

ನಾನು ಎಲ್ಲಾ ಜಾತಿಯವರನ್ನೂ ಪ್ರೀತಿಸುತ್ತೇನೆ. ಆದರೆ ಜಾತಿ ಮಾಡುವವರನ್ನು ನಾನು ವಿರೋಧಿಸುತ್ತೇನೆಯೇ ಹೊರತು ಅವರನ್ನೂ ದ್ವೇಷಿಸುವುದಿಲ್ಲ. ಜಾತಿ ಕಾರಣದಿಂದ ಕನಕದಾಸರನ್ನು ಉಡುಪಿ ಮಠದ ಒಳಗೆ ಬಿಡಲಿಲ್ಲ ಎನ್ನುತ್ತಾ ಕನಕನ‌ ಕಿಂಡಿ ಸೃಷ್ಟಿಯಾದ ಪ್ರಸಂಗವನ್ನು ವಿವರಿಸಿದರು.

ಕನಕದಾಸರ 500 ನೇ ಜಯಂತಿಯನ್ನು ನಾನು ಸಾರಿಗೆ ಸಚಿವನಾಗಿದ್ದಾಗ ಆಗಿನ ಎಸ್.ಆರ್.ಬೊಮ್ಮಾಯಿ ಸರ್ಕಾರದಲ್ಲಿ ಆರಂಭಿಸಿದೆವು. ಬಳಿಕ ಇಡೀ ರಾಜ್ಯ ಪ್ರವಾಸ ಮಾಡಿ ಕಾಗಿನೆಲೆ ಗುರುಪೀಠವನ್ನು , ಮಠವನ್ನು ರೂಪಿಸಿದ್ದು ಕೂಡ ನಾನೇ. ಆದ್ದರಿಂದ ಇಡೀ ಸಮುದಾಯ ಒಟ್ಟಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು ಎಂದರು.

ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ

ನಾನು ಜಾತಿ ಜನಗಣತಿ ಪರವಾಗಿ ಇದ್ದೇವೆ. ಕಾಂತರಾಜ ಅವರ ವರದಿಯನ್ನು ಮುಂದಿನ ಕ್ಯಾಬಿನೆಟ್ ನಲ್ಲಿ ಇಟ್ಟು ಚರ್ಚಿಸುವ ಉದ್ದೇಶ ಕೂಡ ಇದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!