Sri Siddarameshwar created a miracle through Kayak

ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು: ಬಸವರಾಜ ಬೊಮ್ಮಾಯಿ

ಬೆಂಗಳೂರು: ಶರಣ ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು. ಕಾಯಕ ಮಾಡುವವರಿಗೆ ಯಾವತ್ತೂ ಬಡತನ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನೊಳಂಬ ಲಿಂಗಾಯತ ಸಂಘ ಏರ್ಪಡಿಸಿದ್ದ ಶ್ರೀ ಗುರು ಸಿದ್ದರಾಮೇಶ್ವರರ 852ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಾಹಿತ್ಯಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ನಮ್ಮದು ದಿವ್ಯ ಪರಂಪರೆ ಹೊಂದಿರುವ ಸಮಾಜ, 12ನೇ ಶತಮಾನದಲ್ಲಿ ಹಲವಾರು ಶರಣರನ್ನು ಸೃಷ್ಟಿಸಿದ ಶ್ರೇಷ್ಠ ಕ್ರಾಂತಿಯಲ್ಲಿ ವಿಭಿನ್ನರಾದವರು ಶ್ರೀ ಸಿದ್ದರಾಮೇಶ್ವರ ಶರಣರು, ಬಸವಣ್ಣನವರ ಕಾಯಕ ತತ್ಬವನ್ನು ಪಾಲಿಸಿದ್ದರು ಎಂದು ಹೇಳಿದರು.

ಶ್ರೀ ಸಿದ್ದರಾಮೇಶ್ವರರು ಬಾಲ್ಯದಲ್ಲಿಯೇ ವಯಸ್ಸಿಗೆ ಮೀರಿ ಜ್ಞಾನ ಮತ್ತು ನಡವಳಿಕೆ ಮೂಲಕ ಪವಾಡಪುರುಷರಾಗುವ ಎಲ್ಲ ಗುಣ ಹೊಂದಿದ್ಸರು. ಅವರು ಶ್ರೀಶೈಲ ಮಲ್ಲಿಮಾರ್ಜುನನ ಆಶೀರ್ವಾದ ಪಡೆದವರು.

ಮಲ್ಲಿಕಾರ್ಜುನ ಭಿಕ್ಷೆಗೆ ಬಂದಾಗ ಇವರು ಭಿಕ್ಷೆ ನೀಡದಿದ್ದಾಗ ಮಲ್ಲಿಕಾರ್ಜುನ ಕಾಣೆಯಾದಾಗ ಶ್ರೀಶೈಲಕ್ಕೆ ತೆರಳಿ ಅಲ್ಲಿಯೇ ತಪಸ್ಸು ಮಾಡಿ ಶ್ರಿಶೈಲ ಮಲ್ಲಿಕಾರ್ಜುನನ್ನು ಒಲಿಸಿಕೊಳ್ಳುತ್ತಾರೆ. ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು ಶ್ರೀ ಸಿದ್ದರಾಮೇಶ್ವರರು ಎಂದರು.

ಬಸವಣ್ಣನವರು ಕಾಯಕೇ ಕೈಲಾಸ ಎಂದರು. ಕಾಯಕ ಪೂಜೆಗಿಂತ ದೊಡ್ಡದು. ಭಗವಂತ ಎದುರು ಬಂದರೂ ನಿಮ್ಮ ಕಾಯಕ ನಿಲ್ಲಿಸಬೇಡ ಎಂದು ಬಸವಣ್ಣನರು ಹೇಳಿದ್ದರು.

ಅಂತಹ ಅದಮ್ಯ ಕಾಯಕದ ಮೂಲಕ ಪವಾಡ ಮಾಡಿದವರು ಶ್ರೀ ಸಿದ್ದರಾಮೇಶ್ವರರು. ಸೊಲ್ಲಾಪುರದಲ್ಲಿ ಬರಗಾಲ ಬಂದಾಗ ನಾಲ್ಕು ಸಾವಿರ ಶರಣರನ್ನು ಸೇರಿಸಿ ಕೆರೆ ಕಟ್ಟಿಸಿದರು. ಅದರಲ್ಲಿ ಇಂದಿಗೂ ನೀರಿದೆ ಎಂದು ಹೇಳಿದರು.

ಕಾಯಕ ಎಂದರೆ ಹೊಟ್ಟೆಪಾಡಿಗಾಗಿ ಅಲ್ಲ. ಕಾಯಕ ಅಂದರೆ ಪರಿಪೂರ್ಣತೆ. ಆ ಸಂದರ್ಭದಲ್ಲಿ ರೈತರಿಗೆ ನೀರು, ನೀರಾವರಿ ಮಹತ್ವ ಹೇಳಿಕೊಟ್ಟವರು, ಮಣ್ಣಿನ ಮಹತ್ವ, ಬದುಕಿನ ಜೀವಾಳ ಎನ್ನುವುದನ್ನು ತೋರಿಸಿದರು ಶ್ರೀ ಸಿದ್ದರಾಮೇಶ್ವರರು. ನೊಳಂಬ ಸಮಾಜದಲ್ಲಿ ಕಾಯಕ ಎನ್ನುವುದು ರಕ್ತಗತವಾಗಿ ಬಂದಿದೆ.

ಕಾಯಕ ಸಮಾಜಕ್ಕೆ ಎಂದೂ ಬಡತನ, ದುಖ ಬರುವುದಿಲ್ಲ. ಕಷ್ಟಗಳನ್ನು ಮೆಟ್ಟಿ ನಿಲ್ಲುವ ಶಕ್ತಿ ನೊಳಂಬ ಸಮುದಾಯಕ್ಕೆ ಇದೆ ಎಂದು ಹೇಳಿದರು.

ಮಾಧುಸ್ವಾಮಿ ಕಾರ್ಯ ಶ್ಲಾಘನೆ

ನಾನು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಮಾಜಿ ಸಂಸದ ಬಸವರಾಜು ಅವರ ಜೊತೆ ಎರಡು ದಶಕಗಳ ಕಾಲ ಕೆಲಸ ಮಾಡುವ ಅವಕಾಶ ಪಡೆದಿದ್ದೆ. ಸಣ್ಣ ನಿರಾವರಿ ಇಲಾಖೆಯಲ್ಲಿ ದೊಡ್ಡ ಸಾಧನೆ ಮಾಡಿರುವುದು ಮಾಧುಸ್ವಾಮಿಯವರು. ಅವರು ಬಹಳ ಅದ್ಬುತವಾದ ಕೆಲಸಗಳನ್ನು ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ‌ ಜಿಲ್ಲೆಗಳಲ್ಲಿ ಅವರು ಮಾಡಿರುವ ಕಾರ್ಯಗಳು ಶ್ಲಾಘನೀಯ.

ಚಿಕ್ಕನಾಯಕನಹಳ್ಳಿಯ ದೊಡ್ಡ ನಾಯಕ ಮಾಧುಸ್ವಾಮಿಯವರು, ಮಾಜಿ ಸಂಸದ ಬಸವರಾಜು ಅವರು ಹೇಮಾವತಿ ನೀರಿಗಾಗಿ ನಿರಂತರ ಹೋರಾಟ ಮಾಡಿದ್ದಾರೆ‌. ನೊಳಂಬರ ನಾಡಿನಲ್ಲಿ ನೀರಾವರಿ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಕೆರೆ ತುಂಬಿಸುವ ಕೆಲಸ ಮಾಡಿದೆ.

ಗೋರೂರು ಹೆಬ್ಬೂರು ಏತ ನೀರಾವರಿ ಯೋಜನೆ 30 ವರ್ಷದಿಂದ ನೆನೆಗುದಿಗೆ ಬಿದ್ದಿತ್ತು. ಹದಿನೆಂಟು ತಿಂಗಳಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಂಡು, ಪರಮಪೂಜ್ಯ ಶ್ರೀ ಶಿವಕುಮಾರಸ್ವಾಮಿ ಹಾಗೂ ಬಾಲಗಂಗಾಧರ ನಾಥ ಸ್ವಾಮೀಜಿ ಅವರ ಕೈಯಿಂದ ಉದ್ಘಾಟನೆ ಮಾಡಿಸಿದೆ.

ನೀರಾವರಿ ಸಚಿವನಾಗಿ ಸುಮಾರು ಏಳೂವರೆ ಲಕ್ಷ ಎಕರೆ ಜಮೀನು ನೀರಾವರಿ ಮಾಡಿದ ಸಂತೃಪ್ತಿ ಇದೆ ಎಂದರು.
ಶರಣರ ಸಾಹಿತ್ಯ ಮತ್ತು ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕಿದೆ. ಇತ್ತೀಚೆಗೆ ಪಾಶ್ಚಾತ್ಯ ಸಂಸ್ಕೃತಿ ಅನುಕರಣೆ ಹೆಚ್ಚಾಗಿದೆ.

ನಾಗರಿಕತೆ ಮತ್ತು ಸಂಸ್ಕೃತಿ ಬೇರೆ ಬೇರೆ ಇದನ್ನು ಅರ್ಥ ಮಾಡಿಕೊಂಡು ನಮ್ಮ ಸಂಸ್ಕೃತಿ ಉಳಿಸಿಕೊಂಡು ಹೋಗಬೇಕು. ಈ ಮೂಲಕ ಶ್ರೀ ಸಿದ್ದರಾಮೇಶ್ವರ ಜಯಂತಿ ಆಯೋಜನೆ ಮಾಡಿರುವುದಕ್ಕೆ ಸಾರ್ಥಕವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಂಗ ಸ್ವಾಮೀಜಿ, ಅರಸೀಕರೆಯ ಜ್ಞಾನಪ್ರಭು ಸ್ವಾಮೀಜಿ , ಶಿವಶಂಕರ ಶಿವಯೋಗಿ ಮಹಾ ಸ್ವಾಮಿಗಳು, ಮಾಜಿ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಸಿ.ಟಿ. ರವಿ, ನಿವೃತ್ತ ಡಿಜಿಪಿ ಶಂಕರ ಬಿದರಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cmsiddaramaiah ) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!