Bigg boss winner Hanumantu .. Karunadu celebrated

Bigg boos ಗೆದ್ದ ಹನುಮಂತು.. ಸಂಭ್ರಮಿಸಿದ ಕರುನಾಡು

ಬೆಂಗಳೂರು: ಕನ್ನಡದ ಸುಪ್ರಸಿದ್ದ ರಿಯಾಲಿಟಿ ಶೋ ಬಿಗ್‌ಬಾಸ್ (Bigg boos) ಸೀಸನ್ 11ಕ್ಕೆ ಭಾನುವಾರ ತೆರೆಬಿದ್ದಿದೆ. ಹನುಮಂತು ಬಿಗ್‌ಬಾಸ್ ವಿನ್ನರ್ ಪಟ್ಟ ಅಲಂಕರಿಸಿದರೆ, ತ್ರಿವಿಕ್ರಮ್ ರನ್ನ‌ರ್ ಆಪ್ ಆಗಿ ಹೊರಹೊಮ್ಮಿದ್ದಾರೆ.

ಉಗ್ರಂ ಮಂಜು, ತ್ರಿವಿಕ್ರಮ್, ರಜತ್, ಮೋಕ್ಷಿತಾ ಪೈ ನಡುವೆ ತೀವ್ರ ಪೈಪೋಟಿಯಿತ್ತು. ಈ ಬಾರಿ ಮಹಿಳಾ ಸ್ಪರ್ಧಿಗೆ ಬಿಗ್‌ಬಾಸ್‌ ಕಿರೀಟ ಒಲಿಯಲಿದೆ ಎನ್ನಲಾಗಿತ್ತು. ಅದರಲ್ಲಿ ಭವ್ಯಾ ಗೌಡ ಹಾಗೂ ಮೋಕ್ಷಿತಾ ಪೈ ಮುಂಚೂಣಿಯಲ್ಲಿದ್ದರು.

ಈ ಇಬ್ಬರ ನಡುವೆ ಪೈಪೋಟಿ ಜೋರಾಗಿಯೇ ಇತ್ತು. ಆದರೆ ಭವ್ಯಾ ಎಲಿಮಿನೇಟ್ ಆದರು. ಮೋಕ್ಷಿತಾ ಮನೆಯಲ್ಲಿಯೇ ಉಳಿದರು. ಇತ್ತ ರಜತ್‌ಗೆ ವೀಕ್ಷಕರು ಅಷ್ಟಾಗಿ ಒಲವು ತೋರಲಿಲ್ಲ. ಹಾಗಾಗಿ ಅವರು ಮನೆಯಿಂದ ಹೊರಬಂದಿದ್ದು, ಕುತೂಹಲಕ್ಕೆ ಕಾರಣವಾಗಲಿಲ್ಲ.

ಈ ಬಾರಿ ಗೆಲ್ಲುವ ಸ್ಪರ್ಧಿ ಎಂದೇ ಗುರುತಿಸಿಕೊಂಡಿದ್ದ ಮಂಜಣ್ಣ ಅಚ್ಚರಿಯ ರೀತಿಯಲ್ಲಿ ಮನೆಯಿಂದ ಹೊರಬಂದರು. ಹಿಂದೆಯೇ ಮೋಕ್ಷಿತಾ ಹೊರಬಂದರು.

ತ್ರಿವಿಕ್ರಮ್-ಹನುಮಂತು ನಡುವೆ ತೀವ್ರ ಪೈಪೋಟಿ

ಉಳಿದವರಲ್ಲಿ ತ್ರಿವಿಕ್ರಮ್ ಹಾಗೂ ಹನುಮಂತು ಇಬ್ಬರ ನಡುವೆ ತೀವ್ರ ಪೈಪೋಟಿ ಇತ್ತು. ಈ ಇಬ್ಬರಲ್ಲಿ ಹನುಮಂತುಗೆ ದಾಖಲೆಯ ಮತಗಳು ಬಿದ್ದಿದ್ದವು. ಹಾಗಾಗಿ 11ರ ಆವೃತ್ತಿಯ ಬಿಗ್ ಬಾಸ್‌ನ ವಿಜೇತರಾಗಿ ಹನುಮಂತು ಗೆದ್ದು ಬೀಗಿದರು.

ತಮ್ಮ ಮುಗ್ಧತೆ ಯಲ್ಲಿಯೇ ಬಿಗ್‌ಬಾಸ್ ಪ್ರೇಕ್ಷಕರ ಮನಗೆದ್ದಿದ್ದ ಹನುಮಂತು, ಈಗ ಕರುನಾಡಿನ ಜನರ ಮನಸನ್ನು ಗೆದ್ದಿದ್ದಾರೆ.

ರಾತ್ರಿ ಬಿಗ್‌ಬಾಸ್ ವಿನ್ನರ್ ಘೋಷಣೆವರೆಗೂ ಕಾದು ಕುಳಿತಿದ್ದ ಅನೇಕರು ಹನುಮಂತು ಗೆಲವಿನ ಕೈ ಮೇಲೆತ್ತುತ್ತಿದ್ದಂತೆ ಸಂಭ್ರಮಿಸಿದರು. ರಾತ್ರಿ ಮಲಗಿದ್ದವರು, ಬೆಳಗ್ಗೆ ಎದ್ದು ಯಾರು ಗೆದ್ದರೆಂದು ಮಾಹಿತಿ ತಿಳಿದು ಸಂಭ್ರಮಿಸಿದರು.

ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ ಎಂಬಂತೆ ಬಡ ಕುಟುಂಬ, ಹಳ್ಳಿಗಾಡಿನಿಂದ ಬಂದ ಮುಗ್ಧ ಮನಸ್ಸಿನ ಹನುಮಂತು ಗೆಲುವಿಗಾಗಿ ಓಟ್ ಮಾಡಿದ್ದ ಕರುನಾಡಿನ ಜನರ ಆಶಯದಂತೆ ಹನುಮಂತು ಬಿಗ್ ಬಾಸ್ ಗೆದ್ದಿದ್ದು, ಮಕ್ಕಳು, ಮಹಿಳೆಯರು ಸೇರಿ ಎಲ್ಲರಲ್ಲಿ ಸಂಭ್ರಮ ಮನೆಮಾಡಿದೆ.

ಮಹಿಳೆಯರಾದಿಯಾಗಿ ಮೊಬೈಲ್ಗಳ ವಾಟ್ಸಪ್ ಸ್ಟೇಟಸ್, ಫೇಸ್‌ಬುಕ್‌ ಪುಟಗಳಲ್ಲಿ ಹನುಮಂತು ಗೆಲುವಿಗೆ ಶುಭಾಶಯ ಹರಿದುಬರುತ್ತಿದೆ.

ರಾಜಕೀಯ

Doddaballapura: ಮಾಚಗೊಂಡನಹಳ್ಳಿ VSSNಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

Doddaballapura: ಮಾಚಗೊಂಡನಹಳ್ಳಿ VSSNಗೆ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ಮಾಚಗೊಂಡನಹಳ್ಳಿ ವಿವಿದೋಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (VSSN) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ಪ್ರಕ್ರಿಯೆ ನಡೆಸಲಾಯಿತು‌. ಚುನಾವಣೆ ಅಧಿಕಾರಿ ನಾಗಭೂಷಣ್ ಅವರ ಸಮ್ಮುಖದಲ್ಲಿ ನಡೆದ ಆಯ್ಕೆ

[ccc_my_favorite_select_button post_id="104030"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: KSRTC ಬಸ್ ಡಿಕ್ಕಿ.. ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವು..!

Doddaballapura: KSRTC ಬಸ್ ಡಿಕ್ಕಿ.. ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವು..!

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ಮತ್ತು ಕೆಎಸ್‌ಆರ್‌ಟಿಣಿ ಬಸ್ ನಡುವೆ ಡಿಕ್ಕಿ (Accident) ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಗುಂಡಮಗೆರೆ ಹೊರವಲಯದಲ್ಲಿ ಸಂಭವಿಸಿದೆ. ಮೃತನನ್ನು ದೊಡ್ಡಬಳ್ಳಾಪುರದ ನಿವಾಸಿ 27 ವರ್ಷದ ಯುವಕ

[ccc_my_favorite_select_button post_id="104035"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!