Who increased the metro fare..?; Cmsiddaramaiah

ಮೆಟ್ರೋ ದರ ಹೆಚ್ಚಳ ಮಾಡಿದ್ ಯಾರು..?; ಬಿಜೆಪಿಯವರು ಸುಳ್ಳು ಹೇಳುದ್ರಾ..? ಸಿಎಂ ಹೇಳಿದ್ ಇಷ್ಟು..!

ಬೆಂಗಳೂರು: ಜನರ ಆಕ್ರೋಶಕ್ಕೆ ಹೆದರಿ ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳ ರಾಜ್ಯ ಸರ್ಕಾರ ಮಾಡಿದೆ ಎಂದು ಸುಳ್ಳು ಸುದ್ದಿಯನ್ನು ಬಿಜೆಪಿ ಹಬ್ಬಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು,
ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ.

ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ.

ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ.

ಜನಾಕ್ರೋಶಕ್ಕೆ ಹೆದರಿದ ಬಿಜೆಪಿ ನಾಯಕರು

ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ.

ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ.

ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ.

ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು.

ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು?

ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು.

2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ತಿಳಿಸಿತ್ತು.

ಮೂರು ತಿಂಗಳ ಅವಧಿಯಲ್ಲಿ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚೆನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು.

2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು.

ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು.

2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ.

ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ.

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ.

ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ.

ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ.

ರಾಜಕೀಯ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯಸಭೆಯಲ್ಲಿ ರೇಲ್ವೆ

[ccc_my_favorite_select_button post_id="104046"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!