13 days manufacturing training of jute products in Hosahalli..!

ಹೊಸಹಳ್ಳಿಯಲ್ಲಿ 13 ದಿನಗಳ ಜೂಟ್‌ ಉತ್ಪನ್ನಗಳ ತಯಾರಿಕಾ ತರಬೇತಿ..!

ದೊಡ್ಡಬಳ್ಳಾಪುರ (Doddaballapura); ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಮಹಿಳಾ ಸಬಲೀಕರಣಕ್ಕೆ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಸಹಕಾರ ನೀಡುತ್ತವೆ ಇಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯಲ್ಲಿ ಉಚಿತವಾಗಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಎಲ್‌ಎಂ ಹಾಗೂ ರುಡ್‌ಸೆಟ್‌ ಸಂಸ್ಥೆಯ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ 13 ದಿನಗಳ ಜೂಟ್‌ ಉತ್ಪನ್ನಗಳ ತಯಾರಿಕಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಜೂಟ್‌ ಉತ್ಪನ್ನಗಳು ಬಹುಬೇಡಿಕೆಯನ್ನು ಹೊಂದಿದ್ದು, ಪ್ಲಾಸ್ಟಿಕ್‌ ಮುಕ್ತ ಪರಿಸರಕ್ಕೆ ಇದು ಕೈಜೋಡಿಸಲಿದೆ. ಅಂತೆಯೇ ಇದು ಪರಿಸರಸ್ನೇಹಿಯಾಗಿದ್ದು, ದಿನನಿತ್ಯದ ಬಳಕೆಗೆ ವಿವಿಧ ಮಾದರಿಗಳ ಜೂಟ್‌ ಆಧಾರಿತ ಉತ್ಪನ್ನಗಳನ್ನು ಬಳಸಬಹುದಾಗಿದೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಎನ್‌ಆರ್‌ಎಲ್‌ಎಂ ವಿಭಾಗದ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಮಂಜುಳಾ ಅವರು ಮಾತನಾಡಿ, ತರಬೇತಿ ಪೂರ್ಣಗೊಳಿಸಿರುವ ಎಲ್ಲಾ ಮಹಿಳೆಯರು ತಮ್ಮ ಮನೆಗಳಲ್ಲಿ ವೈಯಕ್ತಿಕವಾಗಿ ಅಥವಾ ಗುಂಪು ಚಟುವಟಿಕೆಗಳ ಮೂಲಕ ಜೂಟ್‌ ಆಧಾರಿತ ಉತ್ಪನ್ನ ತಯಾರಿಸಿ, ಆದಾಯ ಹೊಂದಬಹುದು.

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನಡೆಯುವ ಮಾಸಿಕ ಸಂತೆಗಳು, ವ್ಯಾಪಾರ ಮೇಳಗಳಲ್ಲಿ ಜೂಟ್‌ ಉತ್ಪನ್ನಗಳನ್ನು ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.

ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಮಾತನಾಡಿ, ಸಂಸ್ಥೆಯಲ್ಲಿ ತರಬೇತಿ ಪಡೆಯುವುದು ಮಾತ್ರವಲ್ಲದೇ, ಬ್ಯಾಂಕಿನಲ್ಲಿ ಸಾಲ ಪಡೆದು, ಸ್ವ ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿಗಳಾಗಬೇಕು ಹಾಗೂ ತರಬೇತಿ ಮೂಲಕ ಪಡೆದ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು‌.

ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಲವಾರು ಕೆಲಸಗಳನ್ನು ಒಟ್ಟಿಗೆ ನಿಭಾಯಿಸುವ ಅನನ್ಯ ಶಕ್ತಿ ಕೇವಲ ಮಹಿಳೆಯರಿಗೆ ಮಾತ್ರ ಇರುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ಸಾಂಕೇತಿಕವಾಗಿ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಹಾಗೂ ಹೊಸಹಳ್ಳಿ ಗ್ರಾಮ ಪಂಚಾಯಿತಿಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿನಿಧಿಗಳು, ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ವಿದ್ಯಾ ಹೊಸಮನಿ ಸೇರಿದಂತೆ ಜೂಟ್‌ ಉತ್ಪನ್ನ ತಯಾರಿಕಾ ತರಬೇತಿಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ರಾಜಕೀಯ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯಸಭೆಯಲ್ಲಿ ರೇಲ್ವೆ

[ccc_my_favorite_select_button post_id="104046"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!