Today Mahashivaratri.. Temples ready for celebration

ಇಂದು ಮಹಾಶಿವರಾತ್ರಿ.. ಅಚರಣೆಗೆ ಸಿದ್ದವಾಗಿರುವ ದೇವಾಲಯಗಳು

ದೊಡ್ಡಬಳ್ಳಾಪುರ: ಇಂದು ನಡೆಯಲಿರುವ ಮಹಾಶಿವರಾತ್ರಿ (Mahashivaratri) ಆಚರಣೆಗೆ ತಾಲೂಕಿನಲ್ಲಿ ಸಿದ್ದತೆಗಳು ನಡೆದಿವೆ.

ತಾಲೂಕಿನ ಹಲವಾರು ಶಿವನ ದೇವಾಲಯಗಳು ತನ್ನದೇ ಆದ ಐತಿಹಾಸಿಕ ಹಾಗು ಧಾರ್ಮಿಕ ಮಹತ್ವ ಹೊಂದಿದ್ದು, ಶಿವರಾತ್ರಿ ಹಬ್ಬಕ್ಕೆ ದೇವಾಲಯಗಳಲ್ಲಿ ವಿಶೇಷ ಸಿದ್ದತೆಗಳು ನಡೆದಿವೆ.

ನಗರದ ಬಸವ ಭವನ ಸಮೀಪದ ಸೋಮೇಶ್ವರ (ಸ್ವಯಂಭುಕೇಶ್ವರರ) ದೇವಸ್ಥಾನದಿಂದ ಪ್ರಯಾಣ ಪ್ರಾರಂಭಿಸಿದರೆ ರಾಜಘಟ್ಟ ಈಶ್ವರ ದೇವಸ್ಥಾನ, ಗಂಡರಾಜಪುರದ ಉಮಾಮಹೇಶ್ವರ, ನಂದಿಬೆಟ್ಟದ ತಪ್ಪಲಿನ ಕಣಿವೆ ಬಸವಣ್ಣ, ತೂಬಗೆರೆ ಸಮೀಪದ ಕಾಶಿ ವಿಶ್ವೇಶ್ವರ, ಆರೂಢಿ ಕೋಡಿ ಮಲ್ಲೇಶ್ವರ ಸೇರಿದಂತೆ ತಾಲೂಕಿನ ವಿವಿಧ ಶಿವ ದೇವಾಲಯಗಳನ್ನು ಸ್ಮರಿಸಬಹುದಾಗಿದೆ.

ಶಿವರಾತ್ರಿ ಹಬ್ಬದ ಜಾಗರಣೆ ಅಂಗವಾಗಿ ಭಜನೆ, ಸಂಗೀತ ಕಛೇರಿ, ಪೌರಾಣಿಕ ನಾಟಕ, ಹಾಸ್ಯೋತ್ಸವ ಕಾರ್‍ಯಕ್ರಮಗಳು ವಿವಿದೆಡೆಗಳಲ್ಲಿ ಆಯೋಜನೆ ಮಾಡಲಾಗಿದೆ.

ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ರಾಂಪುರ ಸಮೀಪದ ತೋಪನಯ್ಯಸ್ವಾಮಿ (ಶಿವ) ದೇವಸ್ಥಾನದ ಬಳಿ ಬಿಲ್ವಪತ್ರೆಯ ವನವಿದೆ. ಶಿವರಾತ್ರಿಯಂದು ಇಲ್ಲಿ ಪ್ರತಿ ವರ್ಷ ವಿಶೇಷ ಪೂಜಾ ಕಾರ್‍ಯಗಳು ನಡೆಯುತ್ತದೆ.

ಹುಲುಕುಡಿ ಬೆಟ್ಟದ ಮೇಲೆ ಚೋಳರ ಕಾಲದಲ್ಲಿ ಸ್ಥಾಪನೆಯಾಗಿದ್ದು ಎನ್ನಲಾಗುವ ವೀರಭದ್ರಸ್ವಾಮಿ ದೇವಾಲಯವಿದೆ.

ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಗುಹೆಯಲ್ಲಿ ಮುಕ್ಕಣ್ಣೇಶ್ವರಸ್ವಾಮಿಯ ಶಿವಲಿಂಗ ಮೂರ್ತಿ ಇದೆ. ಕಾರ್ತಿಕ ಮಾಸ ಹಾಗೂ ಶಿವರಾತ್ರಿ ಹಬ್ಬದಂದು ಮಾಕಳಿ ಬೆಟ್ಟಕ್ಕೆ ಹತ್ತಿ ಕಾಡು ಮಲ್ಲೇಶ್ವರಸ್ವಾಮಿ ರ‍್ಶನ ಪಡೆಯುವುದರೆಂದರೆ ಕೈಲಾಸ ರ‍್ವತ ಹತ್ತಿದಷ್ಟೇ ಪುಣ್ಯ ಎನ್ನುವುದು ಜನರ ಭಾವನೆ.

ತಾಲೂಕಿನಲ್ಲಿರುವ ಶ್ರವಣೂರು ಗ್ರಾಮದ ನೀಲಕಂಠೇಶ್ವರ ದೇವಾಲಯ ಶತಮಾನದಷ್ಟೇ ಹಿಂದಿನದಾಗಿದೆ. ಹೊಸಹಳ್ಳಿಯ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯ ಇತ್ತೀಚೆಗಷ್ಟೆ ನವೀಕೃತಗೊಂಡು ಶಿವರಾತ್ರಿ ಪೂಜೆಗೆ ಸಜ್ಜಾಗಿದೆ.

ತಾಲೂಕಿನ ಹುಲುಕುಡಿ ಬೆಟ್ಟದ ತಪ್ಪಲಿನ ಗ್ರಾಮಗಳಾದ ಮಾಡೇಶ್ವರ, ಬೈರಾಪುರ, ಮಾಕಳಿ ಬೆಟ್ಟ, ರಾಜಘಟ್ಟ, ತೂಬಗೆರೆ, ಶ್ರವಣೂರು, ಅಂಬಲಗೆರೆ, ಯಲಾದಹಳ್ಳಿ, ರ‍್ಗಾಜೋಗಹಳ್ಳಿ, ಇಸ್ತೂರು, ಹಣಬೆ ಹಾಗೂ ನಗರದಲ್ಲಿನ ನಗರೇಶ್ವರ, ಬಸವಣ್ಣ, ಬೈರಾಪುರ ಗ್ರಾಮದಲ್ಲಿನ ಶ್ರೀಕಂಠೇಶ್ವರ ದೇವಾಲಯ, ಸೋಮೇಶ್ವರ, ಆರೂಢಿ ಕೋಡಿ ಮಲ್ಲೇಶ್ವರ ದೇವಾಲಯಗಳಲ್ಲಿ ಶಿವಲಿಂಗ ಮೂರ್ತಿಗಳು ಶಿವಭಕ್ತರ ಆರಾಧ್ಯ ದೈವಗಳಾಗಿದ್ದು, ಶಿವರಾತ್ರಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆಯಲಿವೆ.

ಮಾಡೇಶ್ವರ ಮುಕ್ಕಣ್ಣೇಶ್ವರ ದೇವಾಲಯದಲ್ಲಿ ವಿಶೇಷ :
ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಮಾಡೇಶ್ವರ ಗ್ರಾಮದ ಮುಕ್ಕಣ್ಣೇಶ್ವರ ದೇವಾಲಯದಲ್ಲಿ ಶ್ರೀ ಮುಕ್ಕಣ್ಣೇಶ್ವರ ಜರ‍್ಣೋದ್ಧಾರ ಮತ್ತು ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜಾ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ದೇವಾಲಯಕ್ಕೆ 1500 ವರ್ಷಗಳ ಇತಿಹಾಸವಿದೆ. ದೇವಾಲಯದ ಹಿಂದಿನ ಗುಹೆಯಲ್ಲಿ 1156ರಲ್ಲಿ ಕೆತ್ತಿರುವ ಶಿಲಾಶಾಸನವಿದೆ. ದೇವಾಲಯದಲ್ಲಿ ಶಿವರಾತ್ರಿ ಹಾಗೂ ಕಾರ್ತಿಕ ಮಾಸಗಳಲ್ಲಿ ವಿಶೇಷ ಅಲಂಕಾರ ಪೂಜಾ ಕಾರ್‍ಯಗಳು ನಡೆಯಲಿದ್ದು, ಇಂದು ಬೆಳಿಗ್ಗೆ 8ಗಂಟೆಗೆ ರುದ್ರಾಭಿಷೇಕ, ಮಹಾಮಂಗಳಾರತಿ, ಅನ್ನ ಸಂರ‍್ಪಣೆ, ರಾತ್ರಿ 8.30ರಿಂದ ಅಖಂಡ ಭಜನಾ ಕಾರ್‍ಯಕ್ರಮಗಳಿವೆ.

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ  ಸಿದ್ದರಾಮಯ್ಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: KSRTC ಬಸ್ ಅಪಘಾತ ಪ್ರಕರಣ.. ಹೊಸಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪ್ರಶಂಸನೀಯ ಕಾರ್ಯ..!

Doddaballapura: KSRTC ಬಸ್ ಅಪಘಾತ ಪ್ರಕರಣ.. ಹೊಸಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪ್ರಶಂಸನೀಯ ಕಾರ್ಯ..!

ದೊಡ್ಡಬಳ್ಳಾಪುರ (Doddaballapura): ನಿನ್ನೆ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಾಬಸಂದ್ರ ಬಳಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಹೊಸಹಳ್ಳಿ

[ccc_my_favorite_select_button post_id="104077"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!