Don't cheat girls; Nikhil Kumaraswamy

ಹೆಣ್ಣು ಮಕ್ಕಳಿಗೆ ಮೋಸ ಮಾಡ್ಬೇಡಿ; ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಪ್ರತೀ ತಿಂಗಳ ಗ್ಯಾರಂಟಿ ಯೋಜನೆಯ ಹಣವನ್ನು ಕಟಾ ಕಟ್ ಹಾಕುತ್ತೇವೆ ಎಂದವರು ಈಗ ಕಟ್ ಕಟ್ ಮಾಡಿ ಕೊಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರಕಾರವನ್ನು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಗ್ಯಾರಂಟಿ ಹಣವನ್ನು ಕಟಾ ಕಟ್ ಹಾಕುತ್ತೇವೆ ಹೇಳಿದ್ದರು. ಆದರೆ, ಅವರು ಹೇಳಿದಂತೆ ಜನರಿಗೆ ಹಣ ಜಮೆ ಮಾಡುತ್ತಿಲ್ಲ.

ನುಡಿದಂತೆ ನಡೆಯುತ್ತಿಲ್ಲ. ಅವರು ಯಾವ ದಿನ ಗೃಹಲಕ್ಷ್ಮೀ ಹಣ ಹಾಕುತ್ತಾರೆ ಎಂದು ಹೇಳಲಿ. ಆಗಲಿಲ್ಲ ಎಂದರೆ ನಾವೇ ಕ್ಯಾಲೆಂಡರ್ ತೆಗೆದುಕೊಂಡು ಹೋಗುತ್ತೇವೆ. ದಿನಾಂಕವನ್ನು ಮಾರ್ಕ್ ಮಾಡಿ ಕೊಡಲಿ ಎಂದು ಅವರು ಹೇಳಿದರು.

ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ತಮ್ಮ ಬ್ಯಾಂಕ್ ಖಾತೆಗಳಿಗೆ ಜಮೆ ಆಗದ ಕಾರಣಕ್ಕೆ ನಾಡಿನ ಮಹಿಳೆಯರು ಗೊಂದಲಕ್ಕೆ ತುತ್ತಾಗಿದ್ದಾರೆ. ಮನಸ್ಸಿಗೆ ಬಂದ ಹಾಗೆ ಸರ್ಕಾರ ಹಣವನ್ನು ಜಮೆ ಮಾಡುತ್ತಿದೆ.

ಚುನಾವಣೆಗಳು ಬಂದಾಗ ಮೂರ್ನಾಲ್ಕು ತಿಂಗಳ ಹಣವನ್ನು ಒಮ್ಮೆಲೇ ಜಮೆ ಮಾಡುತ್ತಾರೆ. ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ ಚುನಾವಣೆ ಗೆಲ್ಲಲು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.

ಗ್ಯಾರಂಟಿ ಮೂಲಕ ಕಾಂಗ್ರೆಸ್ ಸರ್ಕಾರ ಜನರನ್ನು ಸುಲುಭವಾಗಿ ಯಮಾರಿಸುತ್ತಿದೆ. ಅದರ ವಿರುದ್ಧ ನಾವು ವಿಧಾನಮಂಡಲದ ಒಳಗೆ, ಹೊರಗೆ ಹೋರಾಟ ನಡೆಸುತ್ತೇವೆ. ಸರ್ಕಾರ ಯಾವ ರೀತಿ ಮೋಸ ಎಂಬುದನ್ನು ಜನರಿಗೆ ತಿಳಿಸುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.

ಕೂಡಲೇ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಹಣ ಜಮೆ ಮಾಡುವ ನಿಖರ ದಿನಾಂಕ ಘೋಷಣೆ ಮಾಡಬೇಕು. ಒಂದು ವೇಳೆ ಸರ್ಕಾರದಲ್ಲಿ ಹಣ ಇಲ್ಲ ಎಂದಾದರೆ ಅದನ್ನಾದರೂ ಹೇಳಬೇಕು.

ಒಂದು ಕಡೆ ಗ್ಯಾತಂಟಿ ನೆಪದಲ್ಲಿ ರಾಜ್ಯದ ಜನರ ಮೇಲೆ ತೆರಿಗೆ, ಬೆಲೆ ಏರಿಕೆ ಭಾರ ಹೇರಿ ಸುಲಿಗೆ ಮಾಡುತ್ತಿದೆ. ಇನ್ನೊಂದು ಕಡೆ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡುತ್ತಿದ್ದೇವೆ ಎಂದು ಸುಳ್ಳು ಹೇಳುತ್ತಿದೆ. ಇಂತಹ ದ್ವಿಮುಖ ನೀತಿ ಬೇಡ.

ಸಕಾಲಕ್ಕೆ ಗ್ಯಾರಂಟಿ ಹಣ ಜನರಿಗೆ ಮುಟ್ಟಬೇಕು. ಈ ಬಗ್ಗೆ ಜೆಡಿಎಸ್ ಹೋರಾಟ ನಡೆಸುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷವೇ ಕಳೆದಿದೆ. ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನತೆಗೆ ಕಾಂಗ್ರೆಸ್ ಪ್ರಣಾಳಿಕೆ ನೀಡಿದ್ದೀರಿ.

ಐದು ಗ್ಯಾರಂಟಿ ಕೊಟ್ಟಿದ್ದೀರಿ. ಅದರೆ ಅಧಿಕಾರಕ್ಕೆ ಬಂದ ಎರಡೇ ವರ್ಷಗಳಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಸೇರಿ ಹಲವು ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸಲು ವಿಫಕವಾಗಿದ್ದೀರಿ.

ನೀವು ನುಡಿದಂತೆ ಜನರ ಹಣವನ್ನು ಯಾವಾಗ ಅವರ ಬ್ಯಾಂಕ್ ಖಾತೆಗೆ ಹಾಕುತ್ತೀರಿ? ನಾನು ಕ್ಯಾಲೆಂಡರ್ ತೆಗೆದುಕೊಂಡು ಬರುತ್ತೇನೆ. ನೀವು ದಿನಾಂಕ ಗುರುತು ಮಾಡಿ ಕೊಡಿ ಎಂದು ಅವರು ಹೇಳಿದರು.

ಸಿದ್ದರಾಮಯ್ಯನವರೇ, ಡಿ.ಕೆ.ಶಿವಕುಮಾರ್ ಅವರೇ.. 2000 ಸಾವಿರ ಕೊಟ್ಟು ಮಹಿಳೆಯರ ಸಬಲೀಕರಣ ಮಾಡುತ್ತೇವೆ ಎಂದು ಹೇಳಿದ್ದೀರಿ. ಆದರೆ, ಈಗ ರಾಜ್ಯದ ಮಹಿಳೆಯರು ಕಟಾ ಕಟ್ ಗ್ಯಾರಂಟಿ ಕಟ್ ಕಟ್ ಆಗಿ ಬರುತ್ತಿದೆಯಲ್ಲ ಎಂದು ಚಕಿತರಾಗಿದ್ದಾರೆ. ಇದಕ್ಕೆ ನೀವಿಬ್ಬರೂ ಉತ್ತರ ಕೊಡಬೇಕು ಎಂದು ನಿಖಿಲ್ ಅವರು ಒತ್ತಾಯಿಸಿದರು.

ನುಡಿದಂತೆ ನಡೆಯುತ್ತಿರುವುದು ಎಂದರೆ ಇದೇನಾ?

ನಮ್ಮದು ನುಡಿದಂತೆ ನಡೆಯುವ ಸರ್ಕಾರ, ನುಡಿದಂತೆ ನಡೆಯುತ್ತೇವೆ ಅಂತ ಭಾಷಣ ಬಿಡ್ತೀರಾ.? ನೀವು ಪ್ರಣಾಳಿಕೆ ಘೋಷಣೆ ಮಾಡುವಾಗ ನಿಮಗೆ ಅರಿವು ಇರಲಿಲ್ವಾ? ಹಣದ ಬಗ್ಗೆ ಐಡಿಯಾ ಇರಲಿಲ್ಲವೇ? ಎಂದು ಅವರು ಪ್ರಶ್ನಿಸಿದರು.

ನಾವು ಯಾರು ಏನು ಕೇಳಲ್ಲ. ನೀವೇ ಆಡಳಿತ ನಡೆಸುತ್ತಿರೋದು. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಯಾವಾಗ ನಡೆಸ್ತೀರೋ ಗೊತ್ತಿಲ್ಲ. ಜನ ಯಾವುದಾದರೂ ಚುನಾವಣೆ ಬರಲಿ ಎಂದು ಕಾಯುವಂತೆ ಆಗಿದೆ. ಆಗಲಾದರೂ ಹಣ ಬರಬಹುದು ಎಂದು ಮೈಂಡ್ ಸೆಟ್ ಮಾಡಿಕೊಂಡಿದ್ದಾರೆ.

ಜನ ಗ್ಯಾರಂಟಿ ಹಣ ಬಿಡುಗಡೆ ಮಾಡ್ತಾರೆ ಅಂತ ಚಿಂತನೆ ಮಾಡ್ತಿದ್ದಾರೆ. ಗ್ಯಾರಂಟಿ ಹಣವನ್ನು ಬಿಡುಗಡೆ ಮಾಡ್ತೀರಾ.? ಇಲ್ಲವಾದರೆ ನಾವು ಬೀದಿಗೆ ಇಳಿದು ಹೋರಾಟ ಮಾಡಬೇಕಾ? ಪರಿಸ್ಥಿತಿ ಬಂದರೆ ಗ್ಯಾರಂಟಿ ಯೋಜನೆಬಗ್ಗೆ ಹೋರಾಟ ಮಾಡಬೇಕಾಗುತ್ತೆ ಎಂದು ಅವರು ಎಚ್ಚರಿಕೆ ನೀಡಿದರು.

ಗ್ಯಾರಂಟಿಯಿಂದ 25 ಸಾವಿರ ಕೋಟಿ ಹೊರೆ ಆಗುತ್ತೆ ಅಂತ ಅರಿವೇ ಇಲ್ಲದೆ ಯಾಕೇ ಘೋಷಣೆ ಮಾಡಿದ್ರಿ.? ಹಾಲಿನ ದರ, ನೀರಿನ ದರ, ಮೆಟ್ರೋ ದರದ ಬೆಲೆ ಜಾಸ್ತಿ ಮಾಡಿದ್ದೀರಾ.? ಹಾಗೂ ಪ್ರತಿನಿತ್ಯ ಬಳಸುವ ತೈಲದ ಬೆಲೆಯೂ ಜಾಸ್ತಿ ಮಾಡಿದ್ದೀರಾ.? ಗ್ಯಾರಂಟಿಗಳಿಂದ ಜನ ಸಾಮಾನ್ಯರಿಗೆ ಹೊರೆ ಆಗಿದೆ ಎಂದರು.

ಈ ಸರ್ಕಾರದಲ್ಲಿ ಗುತ್ತಿಗೆದಾರರ ಪರಿಸ್ಥಿತಿ ಏನಾಗಿದೆ.ಇದೆಲ್ಲವೂ ಆಡಳಿತ ವಿಫಲತೆ. ಗ್ಯಾರಂಟಿ ಯೋಜನೆಗೆ ನಿಮ್ಮ ಹತ್ರ ಹಣ ಇದೀಯೋ ಇಲ್ವೋ ತಿಳಿಸಿ ಎಂದು ಕಿಡಿಕಾರಿದರು.

ಕೇಂದ್ರದಿಂದ ಕಮಿಷನ್ ಬರ್ತಾ ಇಲ್ಲ

ನರೇಂದ್ರ ಮೋದಿ ಅವರ ಕಿಸಾನ್ ಯೋಜನೆ DDT ಮೂಲಕ ನೇರವಾಗಿ ರೈತರಿಗೆ ಖಾತೆಗೆ ಹಣ ತಲುಪುತ್ತಿದೆ. ಅದರಿಂದ ರಾಜ್ಯ ಸರ್ಕಾರ ಕಮಿಷನ್ ಕೈ ತಪ್ಪಿರಬೇಕು ನರೇಂದ್ರ ಮೋದಿಯವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ
ಇವರಿಗೆ ಕಮಿಷನ್ ಬರ್ತಾ ಇಲ್ಲ.

ನರೇಂದ್ರ ಮೋದಿ ಅವರು ಕೇಂದ್ರದ ಹಣ ರೈತರಿಗೆ ನೇರವಾಗಿ ತಲುಪುತ್ತಿದೆ. ನಿಮ್ಮಗ್ಯಾರಂಟಿ ಹಣ ತಲುಪುತ್ತಿಲ್ಲ ಅಂತ ಹೆಣ್ಣು ಮಕ್ಕಳು ಹೇಳ್ತಾ ಇದ್ದಾರೆ.ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಉತ್ತರ ನೀಡಬೇಕು ಎಂದರು.

ಇತ್ತೀಚೆಗೆ ಉದಯಗಿರಿ ಘಟನೆ ಪೂರ್ವ ನಿಯೋಜಿತ. ಎಲ್ಲ ಸಮುದಾಯ ತಪ್ಪುಮಾಡಿದ ಸಂದರ್ಭದಲ್ಲಿ ಪಾರದರ್ಶಕವಾದ ಆಡಳಿತ ಕೋಡೋದು ಸರ್ಕಾರ ಜವಾಬ್ದಾರಿ.

ಪೊಲೀಸರಿಗೆ ರಕ್ಷಣೆ ಕೊಡೋದು ಸರ್ಕಾರದ ಕೆಲಸ. ಮೊದಲೇ ಕಲ್ಲು ಸಂಗ್ರಹ ಮಾಡಿ ದಾಳಿ ಮಾಡ್ತಾರೆ ಅಂದರೆ, ಸರ್ಕಾರ ಏನು ಕ್ರಮ ತೆಗೆದುಕೊಂಡಿದೆ. ಪೊಲೀಸರಿಗೆ ರಕ್ಷಣೆ ಇಲ್ಲ ಅಂದರೆ ಜನ ಸಾಮಾನ್ಯರ ಗತಿ ಏನು ಎಂದು ಆತಂಕ ವ್ಯಕ್ತಪಡಿಸಿದರು.

ಮೂರು ಉಪಚುನಾವಣೆಯ ವೇಳೆ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿದ್ರು. ಲೋಕಸಭಾ ಚುನಾವಣೆ ಸಂದರ್ಭಗಳಲ್ಲಿ ಫಲಾನುಭವಿಗಳ ಸಭೆ ಕರೆದು ನೇರವಾಗಿ ಡಿ.ಸಿಎಂ ಸಹೋದರ ಬೆಂ.ಗ್ರಾಮಾಂತರದ ಅಭ್ಯರ್ಥಿ ರಾಮನಗರದಲ್ಲಿ ಕಾಂಗ್ರೆಸ್ ಮತ ಹಾಕಿಲ್ಲ ಅಂದರೆ ಗ್ಯಾರಂಟಿ ಹಣ ನಿಲ್ಲುತ್ತೆ ಅಂತ ಬೆದರಿಕೆ ಹಾಕಿದ್ರೆ. ರಾಜ್ಯದ ಜನತೆ 19 ಸಂಸದರನ್ನ ಜನ ಆಶೀರ್ವಾದ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರಕ್ಕೆ ಜನತೆಯೇ ಬುದ್ದಿ ಕಳಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ದ್ವೇಷದ ರಾಜಕಾರಣ

ಕೇತಗಾನಹಳ್ಳಿ ಜಮೀನು ಸರ್ವೆ ವಿಚಾರಕ್ಕೆ ಮಾತನಾಡಿದ ಅವರು ಇದು ಏನು ಹೊಸದಲ್ಲ ಹಲವಾರು ಸರ್ಕಾರ ಕುಮಾರಣ್ಣರನ್ನ ಕಟ್ಟಿ ಹಾಕುವುದಕ್ಕೆ ಮಾಡ್ತಿದ್ದಾರೆ.1985 ರಲ್ಲಿ‌ ಈ ಜಮೀನು ಖರೀದಿ ಆಗಿದೆ.

ಜಮೀನಿನ ಮಾಲೀಕರು ಯಾರು ಕೂಡ ಅನ್ಯಾಯ ಆಗಿದೆ ಅಂತ ಹೇಳಿಲ್ಲ. ಕಾಂಗ್ರೆಸ್ ನವರು ಹೊಸದಾಗಿ ಮೊನ್ನೆಯಿಂದ ಪ್ರಾರಂಭ ಮಾಡಿದ್ದಾರೆ. ಅವರೇ ಕೆಲವರನ್ನು ಕಳಿಸಿ ಆರೋಪ ಮಾಡಿದ್ದಾರೆ. 40 ವರ್ಷದಿಂದ ಇಲ್ಲದ್ದೂ ಈಗ ಆರೋಪ‌ ಮಾಡ್ತಿದ್ದಾರೆ. ಎಲ್ಲದಕ್ಕೂ ಕಾಲ ಉತ್ತರ‌ ಕೊಡುತ್ತೆ ಎಂದರು.

ರಾಜ್ಯಪಾಲರಿಗೆ ಅವರದ್ದೇಯಾದ ಘನತೆ ಇದೆ. ರಾಜ್ಯಪಾಲರನ್ನ ಈ ವಿಚಾರದಲ್ಲಿ ಎಳೆಯೋದು ಸರಿಯಲ್ಲ. ರಾಜಕೀಯವಾಗಿ ಅವರ ಹೆಸರು ಎಳೆದು ತರೋದು ಶೋಭೆ ತರಲ್ಲ. ನಾವು ತಪ್ಪು ಮಾಡಿದ್ರೆ ಆತಂಕ ಇರುತ್ತೆ. ಕುಮಾರಣ್ಣ ಯಾರದ್ದೇ ಒಂದು ರೂಪಾಯಿ ತೆಗೆದುಕೊಂಡಿಲ್ಲ. ಕುಮಾರಣ್ಣ ಅವರಿಗೆ ಯಾವುದೇ ಆತಂಕ ಇಲ್ಲ ಎಂದರು.

ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಸ್‌ಐಟಿ ವರದಿ ಸಲ್ಲಿಕೆ ವಿಚಾರಕ್ಕೆ ಮಾತನಾಡಿದ ಅವರು, ದ್ವೇಷದ ರಾಜಕಾರಣ ಎನ್ನುವುದಕ್ಕೆ ಗ್ರಾಫ್ ಇತ್ತು. ಇದರಲ್ಲಿ ದ್ವೇಷದ ರಾಜಕಾರಣದ ಗ್ರಾಫ್ ಗೆ ಇತಿ ಮಿತಿ ಇಲ್ಲ.

ರಾಜ್ಯದಲ್ಲಿ ದ್ವೇಷದ ರಾಜಕಾರಣಕ್ಕೆ‌ ಬಿತ್ತನೆ‌ ಬೀಜ ಬಿತ್ತಿದ್ದೆ ಕಾಂಗ್ರೆಸ್.ಎಲ್ಲಿ ಕುಮಾರಣ್ಣ ಭ್ರಷ್ಟಾಚಾರ ‌ಕಾಂಗ್ರೆಸ್ ನ ಹಗರಣ ಬಯಲಿಗೆ ಎಳೆಯುತ್ತಾರೆ ಇದನ್ನು ಅವರಿಗೆ ಸಹಿಸಲು ಆಗ್ತಿಲ್ಲ, ಅವರ ವರ್ಚಸ್ಸು ಕುಗ್ಗಿಸುವ ಕೆಲಸ ಮಾಡ್ತಿದ್ದಾರೆ ನಾವು ಕಾನೂನು ಮೂಲಕ ಹೋರಾಟ ಮಾಡ್ತೇವೆ ಎಂದರು.

ಹೆಣ್ಣು ಮಕ್ಕಳಿಗೆ ಮೋಸ ಮಾಡ್ಬೇಡಿ

ನಾವು ಜನರ ಪರವಾಗಿ ಧ್ವನಿ ಆಗಿ ಬಂದಿದ್ದೇವೆ. ರಾಜ್ಯದ ಹೆಣ್ಣು ಮಕ್ಕಳಿಗೆ ಮೋಸ ಮಾಡಬೇಡಿ. ಬಿಜೆಪಿ- ಜೆಡಿಎಸ್ ನಿಮ್ಮ ಜೊತೆ ಇರ್ತೀವಿ. ನೀವು ಹಣ ಬಿಡುಗಡೆ ಮಾಡಬೇಕು.ಹಣ ಇದೀಯಾ ಇಲ್ವೋ ಸರ್ಕಾರ ಉತ್ತರ ಕೊಡಬೇಕು. ನಿಮಗೆ ದೊಡ್ಡ ಮಟ್ಟದ ಶಾಸಕರನ್ನ ಗೆಲ್ಲಿಸಿ ಅಧಿಕಾರ ಕೊಟ್ಟಿದ್ದಾರೆ. ಆದರೂ ಈ ಪರಿಸ್ಥಿತಿಗೆ ತಂದಿದ್ದೀರಾ.? ಎಂದು ಕಿಡಿಕಾರಿದರು.

ಇದೇ ವೇಳೆ ವಿಧಾನ ಪರಿಷತ್ ಸದಸ್ಯರಾದ ಟಿ ಎ ಶರವಣ, ಜವರಾಯಿಗೌಡ, ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಉಪಸ್ಥಿತರಿದ್ದರು.

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ  ಸಿದ್ದರಾಮಯ್ಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: KSRTC ಬಸ್ ಅಪಘಾತ ಪ್ರಕರಣ.. ಹೊಸಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪ್ರಶಂಸನೀಯ ಕಾರ್ಯ..!

Doddaballapura: KSRTC ಬಸ್ ಅಪಘಾತ ಪ್ರಕರಣ.. ಹೊಸಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪ್ರಶಂಸನೀಯ ಕಾರ್ಯ..!

ದೊಡ್ಡಬಳ್ಳಾಪುರ (Doddaballapura): ನಿನ್ನೆ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಾಬಸಂದ್ರ ಬಳಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಹೊಸಹಳ್ಳಿ

[ccc_my_favorite_select_button post_id="104077"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!