ನೆಲಮಂಗಲ; ಕೃಷಿ ಇಲಾಖೆಯಿಂದ (Department of Agriculture) 2024-25ನೇ ಸಾಲಿನಲ್ಲಿ ಸೂಕ್ಷ್ಮ ನೀರಾವರಿ ಯೋಜನೆಯಡಿ ಪರಿಶಿಷ್ಟ ಜಾತಿ/ಪಂಗಡದ ವರ್ಗಕ್ಕೆ ಕೃಷಿ ಬೆಳೆಗಳಲ್ಲಿ ನೀರಿನ ಸಮರ್ಥ ಬಳಕೆಯನ್ನು ಉತ್ತೇಜಿಸಲು ಕೃಷಿ ಇಲಾಖೆ ವತಿಯಿಂದ ತುಂತುರು ಮತ್ತು ಹನಿ ನೀರಾವರಿ ಘಟಕಗಳಿಗೆ ಶೇ. 90ರ ರಿಯಾಯಿತಿ ದರದಲ್ಲಿ ವಿತರಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನೆಲಮಂಗಲ ತಾಲ್ಲೂಕಿನ ರೈತರು ಅಗತ್ಯ ದಾಖಲಾತಿಗಳನ್ನು ನೀಡಿ ನೊಂದಾಯಿಸಬಹುದಾಗಿದೆ.
ರೈತರು ಪಹಣಿ, ಕೃಷಿ ಬೆಳೆ ದೃಢೀಕರಣ ಪತ್ರ, ಕೊಳವೆ ಬಾವಿ (ನೀರಾವರಿ ಮೂಲ ದೃಢೀಕರಣ ಪತ್ರ), ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ನಿರಾಕ್ಷೇಪಣೆ ಪತ್ರ, 100 ರೂ. ಸ್ಟಾಂಪ್ ಪೇಪರ್, ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಪ್ರತಿ. 2 ಪಾಸ್ ಪೋರ್ಟ್ ಭಾವಚಿತ್ರ,ಪ.ಜಾತಿ/ಪ.ಪಂಗಡ ರೈತರು ಜಾತಿ ಪ್ರಮಾಣ ಪತ್ರ ಅಗತ್ಯವಿದೆ.
ಮೇಲ್ಕಂಡ ದಾಖಲಾತಿಗಳನ್ನು ಅರ್ಜಿಯೊಂದಿಗೆ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಒದಗಿಸಿ ಕೆ.ಕಿಸಾನ್ ತಂತ್ರಾಂಶದಲ್ಲಿ ನೊಂದಾಯಿಸಿಕೊಂಡು ಜೇಷ್ಠತಾ ಆಧಾರದ ಮೇಲೆ ತುಂತುರು/ಹನಿ ನೀರಾವರಿ ಘಟಕಗಳನ್ನು ಸಹಾಯಧನದಡಿಯಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಅಥವಾ ಸಹಾಯಕ ಕೃಷಿ ನಿರ್ದೇಶಕರ, ನೆಲಮಂಗಲ ಕೃಷಿ ಇಲಾಖೆ ಕಛೇರಿಯನ್ನು ಸಂರ್ಪಕಿಸಬಹುದೆಂದು ಸಹಾಯಕ ಕೃಷಿ ನಿರ್ದೇಶಕ ಎಎಲ್ ಸಿದ್ದಲಿಂಗಯ್ಯ (siddalingaiah) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Agriculture| 90% discount: Applications invited