Gas pipeline connection to 60 lakh households: MB Patila

60 ಲಕ್ಷ ಮನೆಗಳಿಗೆ ಗ್ಯಾಸ್ ಪೈಪ್ ಲೈನ್ ಸಂಪರ್ಕ: ಎಂಬಿ ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ದರ ಇದ್ದಿದ್ದರಿಂದ ಮನೆಮನೆಗೆ ಗ್ಯಾಸ್ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಈಗ ಈ ಸಮಸ್ಯೆ ಬಗೆಹರಿದಿದ್ದು, 2030ರೊಳಗೆ ಮಿಕ್ಕಿರುವ 60 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್-ಲೈನ್ ಮೂಲಕ ಅಡುಗೆ ಅನಿಲ ಪೂರೈಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ (MB Patila) ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಡಿ ಎಸ್ ಅರುಣ್ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

ಗ್ಯಾಸ್ ಪೂರೈಕೆ ಕೊಳವೆ ಅಳವಡಿಸಲು ದೇಶದ ವಿವಿಧ ರಾಜ್ಯಗಳಲ್ಲಿ ಇರುವ ನಗರ ಅನಿಲ ಸರಬರಾಜು ನೀತಿಯ ಪ್ರಕಾರ ಮೀಟರ್ ಗೆ ಒಂದು ರೂಪಾಯಿ ನಿಗದಿಪಡಿಸಲಾಗಿದೆ.

ಉತ್ತರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿನ ಉತ್ತಮ ಉಪಕ್ರಮಗಳ ಬಗ್ಗೆಯೂ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಪತ್ರ ಬರೆದು ತಿಳಿಸಿದೆ. ಆ ಸಂದರ್ಭದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿತ್ತು.

ಸಾರ್ವಜನಿಕ ಹಿತ ಮತ್ತು ಪರಿಸರಸ್ನೇಹಿ ಕ್ರಮ ಎಂದು ನಾವೂ ಇದನ್ನು ಒಪ್ಪಿಕೊಂಡಿದ್ದೇವೆ. ಇದರಂತೆ ರಾಜ್ಯದಲ್ಲಿ ಒಟ್ಟು 66.25 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸುವ ಮತ್ತು 1,022 ಸಿಎನ್ ಜಿ ಮರುಪೂರಣ ಕೇಂದ್ರಗಳನ್ನು ತೆರೆಯುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

2015ರಲ್ಲಿ ಈ ಯೋಜನೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಭಾರತೀಯ ಅನಿಲ ಪ್ರಾಧಿಕಾರ (ಗೈಲ್) ಇದರ ಕಾಮಗಾರಿಯನ್ನು ಕೈಗೆತ್ತಿಕೊಂಡಿತು. 2023ರವರೆಗೆ 4.07 ಲಕ್ಷ ಮನೆಗಳಿಗೆ ಗ್ಯಾಸ್ ಪೂರೈಕೆ ಸಂಪರ್ಕ ಕೊಟ್ಟಿದ್ದು, 320 ಸಿಎನ್ ಜಿ ಕೇಂದ್ರಗಳನ್ನು ತೆರೆಯಲಾಗಿದೆ.

ಇದರ ಆಮೆಗತಿಯ ಪ್ರಗತಿ‌ ನೋಡಿ ಹೊಸ‌ ನೀತಿ ರೂಪಿಸಲಾಯಿತು. ಅದರ ನಂತರ ಇನ್ನೂ 1.01 ಲಕ್ಷ ಮನೆಗಳಿಗೆ ಈ ಅನುಕೂಲ ಒದಗಿಸಿದ್ದು, 154 ಸಿಎನ್ ಜಿ ಕೇಂದ್ರಗಳನ್ನು ಆರಂಭಿಸಲಾಗಿದೆ.

ಈಗ ಮತ್ತಷ್ಟು ವೇಗ ನೀಡಲು ಸ್ಥಳೀಯ ನಗರ ಸಂಸ್ಥೆಗಳ ಜತೆಗೂ‌ ಸಮನ್ವಯದ ಸಭೆಗಳನ್ನು ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಯೋಜನೆಯಲ್ಲಿ ಇದುವರೆಗೂ ಒಟ್ಟು 5.10 ಲಕ್ಷ ಮನೆಗಳಿಗೆ ಸೌಲಭ್ಯ ಸಿಕ್ಕಿದ್ದು, 474 ಸಿಎನ್ಜಿ ಕೇಂದ್ರಗಳು ಕಾರ್ಯಾರಂಭ ಮಾಡಿವೆ. ಮುಂದಿನ ಐದು ವರ್ಷಗಳಲ್ಲಿ ಬಾಕಿ ಇರುವ ಗುರಿಯನ್ನು ತಲುಪಲಾಗುವುದು.

ಇದಕ್ಕೆ ಸಂಬಂಧಿಸಿದಂತೆ 2024ರ ಜುಲೈನಲ್ಲಿ ಸ್ಥಳೀಯ ಸಂಸ್ಥೆಗಳು ಮತ್ತು ಲೋಕೋಪಯೋಗಿ ಇಲಾಖೆಗಳ ಅನುಮತಿ ಕೊಡಲಾಗಿದೆ ಎಂದು ಪಾಟೀಲ ಹೇಳಿದ್ದಾರೆ.

ಲಾಭ ವರ್ಗ: ಕೇಂದ್ರ ಸರ್ಕಾರದ ಸೂಚನೆ‌ ಪ್ರಕಾರ ಮೀಟರ್ ಗೆ ಒಂದು ರೂಪಾಯಿ ನಿಗದಿಪಡಿಸಿದ್ದು, ಇದರಿಂದ ಆಗುವ ಲಾಭವನ್ನು ಅನಿಲ ಸರಬರಾಜು ಕಂಪನಿಗಳು ನಂತರದ ದಿನಗಳಲ್ಲಿ ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹೇಳಿ ಸಂಬಂಧಪಟ್ಟವರಿಂದ ಮುಚ್ಚಳಿಕೆ ಬರೆಸಿಕೊಳ್ಳಾಗಿದೆ.

ಈ ಅಂಶವನ್ನು ಹೊಸ ನೀತಿಯಲ್ಲೂ ಅಳವಡಿಸಲಾಗಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಸಂಸದರಾದ ಡಾ.ಕೆ ಸುಧಾಕರ್ (Dr.K Sudhakar)

[ccc_my_favorite_select_button post_id="105198"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!