ಆಧುನಿಕ ಕೃಷಿ ತಂತ್ರಜ್ಞಾನ ರೈತರ ಸಮಸ್ಯೆಗಳಿಗೆ ಪರಿಹಾರವಾಗಬಲ್ಲದು: ಬಿ.ಸಿ.ಪಾಟೀಲ್

ಬೆಂಗಳೂರು: ಆಧುನಿಕ ಕೃಷಿ ತಂತ್ರಜ್ಞಾನ ರೈತರ ಸಮಸ್ಯೆಗಳನ್ನು ಪರಿಹರಿಸಬಲ್ಲದು  ಹಾಗೂ ತಂತ್ರಜ್ಞಾನ ಕೃಷಿ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಅವಕಾಶವನ್ನು ಸೃಷ್ಟಿಸಬಲ್ಲದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ವಿಕಾಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ “ಕೃಷಿ ನವೋದ್ಯಮ” (ಅಗ್ರಿ ಸ್ಟಾರ್ಟಪ್) ಸಮ್ಮೇಳನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2014 ರಿಂದ ಕೇಂದ್ರ ಸರ್ಕಾರವನ್ನು ಮುನ್ನಡೆಸುತ್ತಿದ್ದು, ಮೋದಿಯವರಿಂದಾಗಿ ದೇಶದಲ್ಲಿ ಸ್ಟಾರ್ಟಪ್ ಗಳ ಯುಗ ಆರಂಭವಾಯಿತು. 2018 ರ ಹೊತ್ತಿಗೆ ದೇಶದಲ್ಲಿ 50 ಸಾವಿರ ನವೋದ್ಯಮಗಳು, ಹಾಗೂ ಬಳಿಕ 9,300 ಸ್ಟಾರ್ಟಪ್ ಗಳು ಪ್ರಾರಂಭವಾದವು. ಇವುಗಳ ಪೈಕಿ 474 ಕೃಷಿ ಉದ್ಯಮಗಳು ಆರಂಭವಾಗಿವೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೃಷಿ ಕ್ಷೇತ್ರಕ್ಕೆ ನವಚೈತನ್ಯವನ್ನು ಒದಗಿಸಲು ಕೃಷಿ ಸ್ಟಾರ್ಟಪ್ ಗಳನ್ನು ಆರಂಭಿಸಿ ರೈತರು ಹಾಗೂ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ವೇದಿಕೆ ಸೃಷ್ಟಿಸಲಾಗಿದೆ ಎಂದರು.

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ 4 ಸಾವಿರ ಸ್ಟಾರ್ಟಪ್ ಗಳನ್ನು ಆರಂಭಿಸಲಾಗುತ್ತಿದೆ. ದೇಶದ ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಆರಂಭಿಕ ನೀತಿಗಳನ್ನು ಹೊರತಂದಿದೆ. ಇದರಿಂದಾಗಿ ವಾರ್ಷಿಕವಾಗಿ 4,000 ನವೋದ್ಯಮ ಸೃಷ್ಟಿಸಲು ಅನುಕೂಲವಾಗಿದೆ.  ಸ್ಟಾರ್ಟಪ್ ಗಳು  ಯುವಕರಿಗೆ 1.7 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಿದೆ. ಭಾರತದಲ್ಲಿ ಕೃಷಿ ನವೋದ್ಯಮ ಪ್ರಾರಂಭದ ಹಂತದಲ್ಲಿಯೇ  ಆಕರ್ಷಿತವಾಗಿರುವುದು ಹೆಮ್ಮೆಯ ವಿಚಾರ. ಅಂಕಿಅಂಶಗಳ ಪ್ರಕಾರ ಪ್ರತಿದಿನ 2 ರಿಂದ 3 ಸ್ಟಾರ್ಟ್ಅಪ್ಗಳು ಭಾರತದಲ್ಲಿ ಸ್ಥಾಪನೆಯಾಗುತ್ತಿವೆ.ಅಕ್ಸೆಂಚರ್ ಕಂಪನಿಯು ಮಾಡಿದ ಸಮೀಕ್ಷೆಯ ಅಂದಾಜಿನ ಪ್ರಕಾರ, ನಮ್ಮ ದೇಶದಲ್ಲಿ ಅಗ್ರಿ ಸ್ಟಾರ್ಟ್ಅಪ್‌ಗಳಿಂದ 4.5 ಬಿಲಿಯನ್ ಡಾಲರ್ ಮಾರುಕಟ್ಟೆಯ ಸೃಷ್ಟಿ ಆಗಲಿದೆ ಎಂದು ಅಂದಾಜಿಸಲಾಗಿದೆ ಎಂದರು.

ಸ್ಟಾರ್ಟಪ್  ವ್ಯವಸ್ಥೆಗಳನ್ನು ಹೊಂದಿರುವ ವಿಶ್ವದ 20 ಅಗ್ರ ದೇಶಗಳಲ್ಲಿ ಬೆಂಗಳೂರು 15 ನೇ ಸ್ಥಾನವನ್ನು ಪಡೆದುಕೊಂಡಿದೆ. ಅಲ್ಲದೇ ಏಷ್ಯಾ ಖಂಡದಲ್ಲಿ ಸಿಂಗಾಪೂರ್ ಬಳಿಕ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ಸಹ  ಬೆಂಗಳೂರು ಗುರುತಿಸಲ್ಪಟ್ಟಿದೆ. ಕರ್ನಾಟಕ ರಾಜ್ಯ ಜೈವಿಕ ಹಾಗೂ ಸಿರಿಧಾನ್ಯಗಳ ಹಬ್ ಎಂದು ಕರೆಯಲ್ಪಟ್ಟಿದೆ.  ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯವನ್ನು ಪರಿಚಯಿಸಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದಾಗಿ ಕೃಷಿಕರಿಗೆ ಇನ್ನಷ್ಟು ಅನುಕೂಲವಾಗಲಿದೆ. ರಾಜ್ಯದಲ್ಲಿ ಜೀವರ್ಗಿ, ಹಿರಿಯೂರು, ಮಾಲೂರು ಹಾಗೂ ಬಾಗಲಕೋಟೆಯಲ್ಲಿ ಈಗಾಗಲೇ ಮೆಗಾಫುಡ್ ಪಾರ್ಕ್ ಗಳಿದ್ದು, ಕೇಂದ್ರ ಸರ್ಕಾರದಡಿ ಕೆ.ಆರ್.ಪೇಟೆ ಹಾಗೂ ತುಮಕೂರಿನಲ್ಲಿಯೂ ಮೆಗಾಫುಡ್ ಪಾರ್ಕ್ ಆರಂಭಿಸಲಾಗಿದೆ. ಆ ಮೂಲಕ ಕೃಷಿ ಉತ್ಪಾದನಾ, ಆಹಾರ ಉತ್ಪಾದನಾ ಕ್ಷೇತ್ರಗಳಿಗೆ ರಾಜ್ಯದಲ್ಲಿ ಆದ್ಯತೆ ಕಲ್ಪಿಸಲಾಗಿದೆ. ಆತ್ಮ ನಿರ್ಭರ್ ಯೋಜನೆಯಡಿ ಆಹಾರ ಉತ್ಪಾದನಾ ಕೈಗಾರಿಕೆಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ವೆಬಿನಾರ್ ನಲ್ಲಿ ಸಚಿವರು ಮಾಹಿತಿ ಹಂಚಿಕೊಂಡರು.

ಕೃಷಿ ನವೋದ್ಯಮದಲ್ಲಿ ಕೃಷಿ ಉತ್ಪಾದನ ಉದ್ಯಮಿಗಳು  ದೇಶಾದ್ಯಂತ ಸಕ್ರಿಯವಾಗಿ ಭಾಗವಹಿಸಿರುವುದು ಖುಷಿ ತಂದಿದೆ. ಕೊರೊನಾ  ವೈರಸ್‌ನಿಂದಾಗಿ ಬಿಕ್ಕಟ್ಟಿನ ಅವಧಿಯಲ್ಲಿ ರೈತರು ಬೆಳೆದ  ತರಕಾರಿ ಹಣ್ಣು ಸೇರಿದಂತೆ ಕೃಷಿ ಫಸಲುಗಳು ನಾಶವಾಗದಂತೆ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ  ಕೋಲ್ಡ್ ಸ್ಟೋರೇಜ್ ಗಳನ್ನು ಆರಂಭಿಸಲಾಯಿತು.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲ ಸಹಕಾರ ಸೂಚನೆಯಡಿ ಕೃಷಿಕ್ಷೇತ್ರದಲ್ಲಿ ರೈತರಿಗೆ ಇನ್ನಷ್ಟು ಅನುಕೂಲ ಕಲ್ಪಿಸುವ ಹೊಸಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು.ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜ್‌ಕುಮಾರ್ ಕತ್ರಿ ಅವರ ಮೇಲ್ವಿಚಾರಣೆಯಲ್ಲಿ  ಕೃಷಿ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗಗಳು ಉದ್ಯಮಿಗಳಿಗಾಗಿ ಕೃಷಿ ನವೋದ್ಯಮ ವೇದಿಕೆ ಆಯೋಜಿಸಿರುವುದು ಸಂತಸ ಹಾಗೂ ಹೆಮ್ಮೆಯ ವಿಚಾರ ಎಂದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕತ್ರಿ ಸ್ವಾಗತಿಸಿ, ಕೃಷಿ ಇಲಾಖೆ ಆಯುಕ್ತ ಬ್ರಿಜೆಷ್ ಕುಮಾರ್ ದೀಕ್ಷಿತ್ ವಂದಿಸಿದರು.

ರಾಜಕೀಯ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮೋದಿ ಅವಧಿಯಲ್ಲಿ ರೇಲ್ವೆ ವಲಯ ಭಾರೀ ಅಭಿವೃದ್ಧಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ

[ccc_my_favorite_select_button post_id="103952"]
ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ.. 10 ಲಕ್ಷ ರೂ ಚೆಕ್ ನೀಡಿದ ಸಿಎಂ

ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ.. 10 ಲಕ್ಷ

ಬೆಂಗಳೂರು; 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ (shabana azmi) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕಾವೇರಿ

[ccc_my_favorite_select_button post_id="103935"]
ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ (High court judgment): ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ

[ccc_my_favorite_select_button post_id="103668"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

ಬೆಂಗಳೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿದ್ದ ರೌಡಿಶೀಟರ್‌ನ ಬರ್ಬರ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ (Arrest). ಮುನಿರಾಜು (24 ವರ್ಷ), ರಾಜೇಶ್ (21 ವರ್ಷ), ಯತೀಶ್ ಗೌಡ (26 ವರ್ಷ), ವಿನಯ್ ಕುರ್ಮಾ (25 ವರ್ಷ) ಹಾಗೂ

[ccc_my_favorite_select_button post_id="103919"]
Doddaballapura: ಹಿಟ್ ಅಂಡ್ ರನ್ ಪ್ರಕರಣ.. ಬೈಕ್ ಸವಾರ ಸ್ಥಳದಲ್ಲಿಯೇ ಸಾವು..!

Doddaballapura: ಹಿಟ್ ಅಂಡ್ ರನ್ ಪ್ರಕರಣ.. ಬೈಕ್ ಸವಾರ ಸ್ಥಳದಲ್ಲಿಯೇ ಸಾವು..!

ದೊಡ್ಡಬಳ್ಳಾಪುರ (Doddaballapura): ಅಪರಿಚಿತ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಆಲಹಳ್ಳಿ ಮೇಲ್ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ವಿದ್ಯಾನಗರ ನಿವಾಸಿ 55 ವರ್ಷದ

[ccc_my_favorite_select_button post_id="103988"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!