ಬಾಹ್ಯಾಕಾಶ ಕ್ಷೇತ್ರದಲ್ಲಿ ಜಾಗತಿಕವಾಗಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಭಾರತವು ಸಾಮರ್ಥ್ಯವನ್ನು ಹೊಂದಿದೆ: ಉಪರಾಷ್ಟ್ರಪತಿ

Channel Gowda
Hukukudi trust

ಬೆಂಗಳೂರು: ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಪ್ರಾದೇಶಿಕ ನ್ಯಾವಿಗೇಷನ್ ಉಪಗ್ರಹ ವ್ಯವಸ್ಥೆ ನ್ಯಾವಿಕ್ (NaVIC) ನ ಜಾಗತಿಕ ಬಳಕೆಗೆ ಒತ್ತು ನೀಡುವಂತೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಇಂದು ಇಸ್ರೋಗೆ ಸೂಚಿಸಿದ್ದಾರೆ.

hulukudi maharathotsava
Aravind, BLN Swamy, Lingapura

ಯು ಆರ್ ರಾವ್ ಉಪಗ್ರಹ ಕೇಂದ್ರದ ವಿಜ್ಞಾನಿಗಳು ಮತ್ತು ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿಯವರು, ನ್ಯಾವಿಕ್ ಅನ್ನು ಸ್ಥಾಪಿಸಿ, ಕಾರ್ಯಗತಗೊಳಿಸಿದ್ದಕ್ಕಾಗಿ ಇಸ್ರೋವನ್ನು ಶ್ಲಾಘಿಸಿದರು. ಇದೊಂದು ಗಮನಾರ್ಹ ಸಾಧನೆ ಎಂದು ಬಣ್ಣಿಸಿದರು. ವ್ಯಾಪ್ತಿಯ ಪ್ರದೇಶಗಳು, ಸೇವೆಗಳು ಮತ್ತು ರಾಷ್ಟ್ರೀಯ ಅವಶ್ಯಕತೆಗಳನ್ನು ಪೂರೈಸಲು ಅದರ ಪರಿಣಾಮಕಾರಿ ಬಳಕೆಗೆ ಸಂಬಂಧಿಸಿದಂತೆ ನ್ಯಾವಿಕ್ ವ್ಯವಸ್ಥೆಯ ವಿಸ್ತರಣೆಯನ್ನು ಇಸ್ರೋ ಸಕ್ರಿಯವಾಗಿ ಮುಂದುವರಿಸಬೇಕು ಎಂದು ಅವರು ಹೇಳಿದರು.

ಬಾಹ್ಯಾಕಾಶ ಕ್ಷೇತ್ರದಲ್ಲಿ ಜಾಗತಿಕವಾಗಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಭಾರತವು ಅಗಾಧ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ ಶ್ರೀ ನಾಯ್ಡು, ಭಾರತವನ್ನು ಸಂಪೂರ್ಣವಾಗಿ ಸ್ವಾವಲಂಬಿಯನ್ನಾಗಿ ಮಾಡಲು ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗಲು ದೊಡ್ಡ ರೀತಿಯಲ್ಲಿ ಕೊಡುಗೆ ನೀಡುವಂತೆ ಇತ್ತೀಚೆಗೆ ಪ್ರಾರಂಭಿಸಲಾದ ಭಾರತೀಯ ಬಾಹ್ಯಾಕಾಶ ಸಂಘಟನೆಗೆ ಅವರು ಕರೆಕೊಟ್ಟರು.

Hulukudi mahajathre
Aravind, BLN Swamy, Lingapura

ಬಾಹ್ಯಾಕಾಶ ಸಂಬಂಧಿ ಚಟುವಟಿಕೆಗಳಲ್ಲಿ ಭಾಗವಹಿಸಲು ಅನುವು ಮಾಡಿಕೊಡುವ ಮೂಲಕ ಭಾರತದ ಖಾಸಗಿ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡುವಲ್ಲಿ ಇಸ್ರೋ ವಹಿಸಿರುವ ನಾಯಕತ್ವದ ಪಾತ್ರವನ್ನು ಅವರು ಶ್ಲಾಘಿಸಿದರು. “ಅನೇಕ ವರ್ಷಗಳಿಂದ ಜ್ಞಾನದ ನೆಲೆ ಮತ್ತು ಬಾಹ್ಯಾಕಾಶ ಸ್ವತ್ತುಗಳನ್ನು ನಿರ್ಮಿಸುವಲ್ಲಿ ಇಸ್ರೋ ಹೊಂದಿರುವ ಅಭೂತಪೂರ್ವ ದಾಖಲೆಯನ್ನು ಖಾಸಗಿ ಪಾಲುದಾರರ ಭಾಗವಹಿಸುವಿಕೆಯೊಂದಿಗೆ ರಾಷ್ಟ್ರಕ್ಕೆ ಹೆಚ್ಚಿನ ಪ್ರಯೋಜನಗಳನ್ನು ನೀಡಲು ಬಳಸಿಕೊಳ್ಳುವ ಖಾತ್ರಿಯಿದೆ” ಎಂದು ಅವರು ಹೇಳಿದರು.

ಇಸ್ರೋವನ್ನು ರಾಷ್ಟ್ರದ ಹೆಮ್ಮೆ ಎಂದು ಬಣ್ಣಿಸಿದ ಉಪ ರಾಷ್ಟ್ರಪತಿಯವರು, ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿನ ಅತ್ಯುತ್ತಮ ಸಾಧನೆಗಳಿಗಾಗಿ ಸಂಸ್ಥೆಯು ಜಾಗತಿಕವಾಗಿ ಗೌರವ ಪಡೆದಿದೆ ಎಂದು ಹೇಳಿದರು. “ವಿವಿಧ ಉದ್ದೇಶಗಳಿಗಾಗಿ 100 ಕ್ಕೂ ಹೆಚ್ಚು ಅತ್ಯಾಧುನಿಕ ಉಪಗ್ರಹಗಳನ್ನು ನಿರ್ಮಿಸುವ ಮೂಲಕ ಮತ್ತು ಪಿಎಸ್‌ಎಲ್‌ವಿ ಮತ್ತು ಜಿಎಸ್‌ಎಲ್‌ವಿಯಂತಹ ಉಡಾವಣಾ ವಾಹನ ವ್ಯವಸ್ಥೆಗಳನ್ನು ಸ್ಥಾಪಿಸುವ ಮೂಲಕ ಇಸ್ರೋ ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆ ನೀಡಿದೆ” ಎಂದು ಅವರು ಹೇಳಿದರು.

ಕಾರ್ಯಾಚರಣೆಯ ಉಪಗ್ರಹಗಳು, ವೈಜ್ಞಾನಿಕ ಕಾರ್ಯಾಚರಣೆಗಳು, ಪರಿಶೋಧನಾ ಕಾರ್ಯಾಚರಣೆಗಳು ಮತ್ತು ತೀವ್ರ ಬಾಹ್ಯಾಕಾಶ ಕಾರ್ಯಾಚರಣೆಗಳನ್ನು ಒದಗಿಸುವ ತನ್ನ ಧ್ಯೇಯವನ್ನು ಪಟ್ಟುಬಿಡದೆ ಅನುಸರಿಸುತ್ತಿರುವ ಯುಆರ್ ರಾವ್ ಉಪಗ್ರಹ ಕೇಂದ್ರವನ್ನು ಶ್ಲಾಘಿಸಿದ ಅವರು, ಇಸ್ರೋದ 53 ಕಾರ್ಯಾಚರಣಾ ಉಪಗ್ರಹಗಳು ವಿಶೇಷವಾಗಿ ದೂರಸಂಪರ್ಕ, ಪ್ರಸಾರ, ಹವಾಮಾನ, ದೂರ ಸಂವೇದಿ, ನ್ಯಾವಿಗೇಷನ್ ಮತ್ತು ಬಾಹ್ಯಾಕಾಶ ವಿಜ್ಞಾನದಂತಹ ಕ್ಷೇತ್ರಗಳಲ್ಲಿ ರಾಷ್ಟ್ರಕ್ಕೆ ಅಮೂಲ್ಯವಾದ ಸೇವೆಗಳನ್ನು ಒದಗಿಸುತ್ತಿವೆ ಎಂದರು.

ಉಪಗ್ರಹ ಆಧಾರಿತ ದೂರ ಸಂವೇದಿ ಸೇವೆಗಳ ಕ್ಷೇತ್ರದಲ್ಲಿ ಭಾರತವು ವಿಶ್ವದಲ್ಲಿ ಮುಂಚೂಣಿಯಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದ ಅವರು, ಕೃಷಿ, ಅರಣ್ಯ, ಸಾಗರಶಾಸ್ತ್ರ, ಮೂಲಸೌಕರ್ಯ ಯೋಜನೆ, ಇಂಧನ ಮತ್ತು ಪರಿಸರ, ಜಲ ಸಂಪನ್ಮೂಲ ಮತ್ತು ಅಭಿವೃದ್ಧಿ ಯೋಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದಕ್ಷತೆಯನ್ನು ಹೆಚ್ಚಿಸಲು ಮತ್ತು ಅಭಿವೃದ್ಧಿಯ ಅಗತ್ಯಗಳನ್ನು ಪೂರೈಸಲು ದೂರ ಸಂವೇದಿ ಉಪಗ್ರಹ ಡೇಟಾ ಮತ್ತು ಚಿತ್ರಗಳು ಅನಿವಾರ್ಯ ಸಾಧನಗಳಾಗಿವೆ ಎಂದರು.

ವಿವಿಧ ಉಪಗ್ರಹಗಳ ಹವಾಮಾನ ಸಂಬಂಧಿ ದತ್ತಾಂಶವು ಅನಾವೃಷ್ಟಿ, ಅತಿವೃಷ್ಟಿ ಮತ್ತು ಚಂಡಮಾರುತಗಳು ಸೇರಿದಂತೆ ಹವಾಮಾನದ ಮುನ್ಸೂಚನೆಯನ್ನು ಸುಗಮಗೊಳಿಸುತ್ತದೆ ಎಂದು ಹೇಳಿದ ಉಪ ರಾಷ್ಟ್ರಪತಿಯವರು, ಇಸ್ರೋ ಅಗತ್ಯವಿರುವ ಡೇಟಾವನ್ನು ತಲುಪಿಸಲು ಸುಧಾರಿತ ಆನ್-ಬೋರ್ಡ್ ವ್ಯವಸ್ಥೆ ಕಲ್ಪಿಸುವುದನ್ನು ಮುಂದುವರಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಇದು ಹವಾಮಾನ ಮುನ್ಸೂಚನೆಯನ್ನು ಇನ್ನಷ್ಟು ಸುಧಾರಿಸುತ್ತದೆ, ಇದು ರೈತರಿಗೆ ಸಹಾಯ ಮಾಡುತ್ತದೆ ಮತ್ತು ಮತ್ತು ನೈಸರ್ಗಿಕ ವಿಕೋಪಗಳನ್ನು ಉತ್ತಮವಾಗಿ ನಿರ್ವಹಿಸಲು ನಮಗೆ ಅನುವು ಮಾಡಿಕೊಡುತ್ತದೆ” ಎಂದು ಅವರು ಹೇಳಿದರು.

ಯು ಆರ್ ರಾವ್ ಉಪಗ್ರಹ ಕೇಂದ್ರವು ಮುಂದಿನ ಪೀಳಿಗೆಯ ಐಆರ್‌ಎನ್‌ಎಸ್‌ಎಸ್ ಉಪಗ್ರಹಗಳಾದ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಗಾಗಿ ಚಂದ್ರಯಾನ-3 ಮತ್ತು ಸೂರ್ಯನ ಬಗ್ಗೆ ಅಧ್ಯಯನ ಮಾಡಲು ಆದಿತ್ಯ-ಎಲ್ 1 ಮಿಷನ್‌ ಕುರಿತು ಕೆಲಸ ಮಾಡುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಯು ಆರ್ ರಾವ್ ಉಪಗ್ರಹ ಕೇಂದ್ರಕ್ಕೆ ತಮ್ಮ ಭೇಟಿಯು “ನಿಜವಾಗಿಯೂ ಸ್ಮರಣೀಯವಾದುದು” ಎಂದು ಉಪ ರಾಷ್ಟ್ರಪತಿಯವರು, ಶುಕ್ರ ಆರ್ಬಿಟರ್ ಮಿಷನ್ ಮತ್ತು ಮಂಗಳ ಗ್ರಹದ ಫಾಲೋ-ಆನ್ ಮಿಷನ್ ಅನ್ನು ಒಳಗೊಂಡಿರುವ ಅದರ ಭವಿಷ್ಯದ ಯೋಜನೆಗಳ ಬಗ್ಗೆ ಪ್ರಭಾವಿತರಾಗಿರುವುದಾಗಿ ತಿಳಿಸಿದರು.

ಕರ್ನಾಟಕ ರಾಜ್ಯಪಾಲರಾದ ಶ್ರೀ ತಾವರಚಂದ್ ಗೆಹ್ಲೋಟ್, ಇಸ್ರೋ ಅಧ್ಯಕ್ಷ ಡಾ ಕೆ ಶಿವನ್, ಯುಆರ್ ರಾವ್ ಉಪಗ್ರಹ ಕೇಂದ್ರದ (ಯುಎಸ್‌ಆರ್‌ಸಿ) ನಿರ್ದೇಶಕ ಶ್ರೀ ಶಂಕರನ್, ಇಸ್ರೋದ ವೈಜ್ಞಾನಿಕ ಕಾರ್ಯದರ್ಶಿ ಶ್ರೀ ಉಮಾಮಹೇಶ್ವರನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!