ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ತೀವ್ರಗತಿಯಲ್ಲಿ ಏರಿಕೆ ಕಂಡಿದ್ದು, ಓದುಗರ ಸಲಹೆಯ ಮೇರೆಗೆ ಇಂದಿನಿಂದ ಹರಿತಲೇಖನಿ ಕೋವಿಡ್ ಬುಲೆಟಿನ್ ವರದಿಯನ್ನು ಮತ್ತೆ ಆರಂಭಿಸುವ ಅನಿವಾರ್ಯತೆ ಎದುರಾಗಿದೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಜ.6ರ ಬುಲೆಟಿನ್ ಅನ್ವಯ ಜಿಲ್ಲೆಯಲ್ಲಿ ಇಂದು ಹೊಸದಾಗಿ 25 ಕರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿನಿಂದ 5 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ವರದಿಯನ್ವಯ ಹೊಸಕೋಟೆ ತಾಲೂಕಿನ 03 ಪುರುಷರು, 06 ಮಹಿಳೆಯರು ಸೇರಿ 09, ದೇವನಹಳ್ಳಿ ತಾಲೂಕಿನ 05 ಪುರುಷರು, 05 ಮಹಿಳೆಯರು ಸೇರಿ 10, ನೆಲಮಂಗಲ ತಾಲೂಕಿನ 05 ಪುರುಷರು ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಓರ್ವ ಪುರುಷ ಸೇರಿ 25 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 96ಕ್ಕೆ ಏರಿಕೆಯಾಗಿದೆ. ಅಲ್ಲದೆ 135 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 2185 ಮಂದಿಯ ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….