ದೊಡ್ಡಬಳ್ಳಾಪುರ, (ಆಗಸ್ಟ್.29); ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನದ ನೆನಪಿಗಾಗಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು.
ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ‘ರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯಗಳು. ಇಂದು ನಾವು ಮೇಜರ್ ಧ್ಯಾನ್ ಚಂದ್ ಜಿ ಅವರಿಗೆ ಗೌರವ ಸಲ್ಲಿಸುತ್ತೇವೆ. ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿರುವ ಮತ್ತು ಭಾರತಕ್ಕಾಗಿ ಆಡಿದ ಎಲ್ಲರನ್ನು ಅಭಿನಂದಿಸಲು ಇದು ಒಂದು ಸುಸಂದರ್ಭವಾಗಿದೆ’.
1928, 1932, 1936 ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೇಜರ್ ಧ್ಯಾನ್ ಚಂದ್ ಅವರು ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ತಂದಿರುತ್ತಾರೆ. ಈ ದೇಶದಲ್ಲಿ ಈ ರೀತಿಯ ಪ್ರತಿಭೆಗಳು ಹೆಚ್ಚಾಗಬೇಕಿಷೆ ಹಾಗೂ ನಮ್ಮ ರಾಷ್ಟ್ರೀಯ ಕ್ರೀಡೆ ಹಾಕಿಯಲ್ಲಿ ಚಿನ್ನದ ಭಾರತಕ್ಕೆ ಬರಲಿ ಎಂದು ಹಾರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ. ವಿಜಯ ಕಾರ್ತಿಕ್, ಆರ್.ಎಲ್.ಜಾಲಪ್ಪ ಲಯನ್ಸ್ ಅಧ್ಯಕ್ಷ ರಾಕೇಶ್.ಆರ್., ಮಾನವನ ಸಂಪನ್ಮೂಲ ಅಧಿಕಾರಿ ಬಾಬು ರೆಡ್ಡಿ ನಾಗಸಂದ್ರ, ಪ್ರಾಂಶುಪಾಲರಾದ ಡಾ. ಶಿವಪ್ರಸಾದ್, ಡಾ.ಶ್ರೀನಿವಾಸ್ ರೆಡ್ಡಿ, ಉಪನ್ಯಾಸಕರಾದ ಶಂಕರ್ ನುಗ್ಗೆಹಳ್ಳಿಣ ಲೋಕೇಶ ಯಾದವ್, ಗೋವಿಂದ್ ರಾಜ್, ಯತಿನ್, ದೈಹಿಕ ಶಿಕ್ಷಣ ನಿರ್ದೇಶಕರಾದ ದಾದಾಪೀರ್, ಮನ್ಸೂರ್, ಹೇಮಂತ್ ಉಪಸ್ಥಿತಿ ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….