ಓದಿನರಮನೆಯಲ್ಲಿ ತಿಂಗಳ ಒನಪು 189 ಪರಸಂಗದ ಗೆಂಡೆತಿಮ್ಮ ಮರುಪ್ರದರ್ಶನ..!

ಬೆಂಗಳೂರು, (ಜೂ.8); ಆಧುನಿಕತೆ ಎಂಬುದು ಎಂಥವರನ್ನೂ ತನ್ನ ತೆಕ್ಕೆಗೆ ಸೆಳೆದುಕೊಂಡು, ಕೆಲವೊಮ್ಮೆ ಆವಾಂತರಗಳನ್ನು ಸೃಷ್ಟಿಸಿದರೆ ಮತ್ತೆ ಕೆಲವೊಮ್ಮೆ ಹೊಸ ಸವಾಲುಗಳನ್ನು ಸೃಷ್ಟಿಸುವ ಕೆಲಸ ಮಾಡುತ್ತದೆ. ಅಂತಹದ್ದೊಂದು ವಿಚಾರ ಪೂರಿತ ವಸ್ತುವನ್ನಿಟ್ಟುಕೊಂಡು ಕನ್ನಡದ ಜನಪ್ರಿಯ ಕಾದಂಬರಿಕಾರ ದಿವಂಗತ ಕೃಷ್ಣ ಆಲನಹಳ್ಳಿ ಅವರ ಪರಸಂಗದ ಗೆಂಡೆತಿಮ್ಮ ನಾಟಕವನ್ನು ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಗರದ ರೂಪಾಂತರ ತಂಡದ ಮೂವತ್ತು ಕಲಾವಿದರು ಅತ್ಯಂತ ಯಶಸ್ವಿಯಾಗಿ ಪ್ರಸ್ತುತ ಪಡಿಸಿ ಪ್ರೇಕ್ಷಕರ ಮನಸೂರೆಗೊಂಡಿತು.

ಇದೇ ವೇದಿಕೆಯಲ್ಲಿ ನಾಟಕ ರೂಪಾಂತರಿಸಿದ ಡಾ.ಎಂ. ಬೈರೇಗೌಡ ಅವರನ್ನು ರೂಪಾಂತರ ತಂಡದ ಪರವಾಗಿ ಸನ್ಮಾನಿಸಿದವರು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ.

ಪರಸಂಗದ ಗೆಂಡೆತಿಮ್ಮ ಮತ್ತು ಮರಂಕಿ ಇವರಿಬ್ಬರ ದುರಂತಕತೆ ಸಂಭವಿಸಿ ಅರ್ಧ ಶತಮಾನವೇ ಕಳೆದಿದೆ. ಸಾಲುಂಡಿ-ಗೌವಳ್ಳಿಯಲ್ಲಿ ಅವರಿಬ್ಬರ ಸಾವಿನ ಸುದ್ಧಿ ಹಸಿಹಸಿಯಾಗಿಯೇ ಇದೆ. ಗೌವಳ್ಳಿಯಂತ ಯಾವುದೆ ಕೊಂಪೆಗೆ ಹೋದರೂ ಮರಂಕಿಯಂಥವರು ಬಿತ್ತಿದ ಬಯಕೆಗಳು ಬೆಳೆದು ಹೂಬಿಟ್ಟು ನಿಂತಿವೆ.

ಗೌವಳ್ಳಿಗೆ ಬಸ್ಸಿನ ದಾರಿ ಆಗಿ, ಊರ ಹಿರಿಯರು ಎಷ್ಟೇ ತಡೆದರೂ ಲೆಕ್ಕಿಸದೆ ಅವರ ಕಲ್ಪನೆಯ ಅನಿಷ್ಠಶಕ್ತಿಗಳು ನುಗ್ಗಿ ಆಕ್ರಮಿಸಿ ಸ್ವತಃ ಊರೇ ತಾನಾಗಿ ಎಲ್ಲ ಶಕ್ತಿಗಳನ್ನೂ ಆವಾಹನೆಗೊಳ್ಳುತ್ತಿದೆ. ಇವತ್ತಿಗೂ ಗೌವಳ್ಳ್ಳಿ-ಸಾಲುಂಡಿಗಳಲ್ಲಿ ಯಾರನ್ನಾದರೂ ಗೆಂಡೆತಿಮ್ಮ-ಮರಂಕಿಯರ ಬಗ್ಗೆ ಪ್ರಶ್ನಿಸಿದರೆ ಅವರಿಬ್ಬರ ದುರಂತ ನೆನೆದು ನಿಟ್ಟುಸಿರು ಬಿಡುವುದನ್ನು ಕಾಣಬಹುದು. ಕಾಲ ಸರಿದರೂ ಮರಂಕಿ ಗೆಂಡೆತಿಮ್ಮನ ಜೀವನಗಾಥೆ ಅಚ್ಚ ಹಸಿರಾಗಿಯೇ ಇದೆ.

ಅರ್ಥಗರ್ಭಿತವಾದ ಈ ಮಾತುಗಳಿಗೆ ಸಾಕ್ಷಿ ಎಂಬಂತೆ ವಿಸ್ತಾರವಾದ ಕಥಾಹಂದರವನ್ನು ಹೊಂದಿರುವ ಅತ್ಯಂತ ಆಪ್ತವಾಗಿ  ಪರಸಂಗದ ಗೆಂಡೆತಿಮ್ಮ ಕಾದಂಬರಿಯನ್ನು ನಾಟಕರೂಪಕ್ಕೆ ತಂದವರು ನಾಡಿನ ಹೆಸರಾಂತ ನಾಟಕಕಾರ, ಕವಿ, ಗಾಯಕ, ನಿರ್ದೇಶಕ, ನಟ, ಸಂಘಟಕ ಡಾ. ಎಂ. ಬೈರೇಗೌಡ. ರಂಗರೂಪಕ್ಕೆ ಒಂದು ರೂಪ ಕೊಟ್ಟು ಕಲಾವಿದರನ್ನು ತಿದ್ದಿ ತೀಡಿ ಶುದ್ಧಗೊಳಿಸಿ ಅಚ್ಚುಕಟ್ಟಾದ ಅಡುಗೆಯಾಗಿಸಿ ಕಲಾಕ್ಷೇತ್ರದ ವೇದಿಕೆಯಲ್ಲಿ ಉಣಬಡಿಸಿದವರು ರೂಪಾಂತರ ಕೆ.ಎಸ್.ಡಿ.ಎಲ್. ಚಂದ್ರು.

ಗೆಂಡೆತಿಮ್ಮನ ಪಾತ್ರ ನಿರ್ವಹಿಸಿದ ಮುರುಡಯ್ಯ ಅಭಿಜಾತ ಕಲಾವಿದನೆಂಬ ಮಾತನ್ನು ಸಬೀತುಪಡಿಸಿದರು. ನಾಟಕದ ನಂತರವೂ ಪಾತ್ರದೊಳಗೇ ಉಸಿರಾಡಿದ ಅವರ ನಟನೆ ಮಂತ್ರಮುಗ್ಧರನ್ನಾಗಿಸಿದ್ದು ಸುಳ್ಳಲ್ಲ. ಬೇದಿಯಮ್ಮನ ಪಾತ್ರದಲ್ಲಿ ಮಂಜುಳ ಮಿಂಚಿದರು. ಮರಂಕಿಯಾಗಿ ಕಲಾವಿದೆ…. ಅವರು ಸಮರ್ಥವಾಗಿ ನಿಭಾಯಿಸಿದರು.

ಹಿರಿಯ ರಂಗಭೂಮಿ, ಹಿರಿತೆರೆ, ಕಿರುತೆರೆ ನಟ ವೆಂಕಟಾಚಲ ಅವರ ಪಾತ್ರದ ಲವಲವಿಕೆ, ಎಲ್ಲ ಪೋಷಕ ಪಾತ್ರಗಳು ಮುಖ್ಯ ಭೂಮಿಕೆಗೆ ಹೊದ ಮೆರುಗನ್ನು ತಂದುಕೊಟ್ಟರು. ಇಲ್ಲಿನ ಒಂದೊಂದು ದೃಶ್ಯವೂ ಕುತೂಹಲ ಕೆರಳಿಸುವುದರ ಜೊತೆಗೆ ಪ್ರೇಕ್ಷಕನನ್ನು ಹಿಡಿದಿಡುವಲ್ಲಿ ಯಶಸ್ಸನ್ನು ಕಂಡಿದೆ.

ದೇಸೀ ಮೋಹನ್ ಅವರ ಸಂಗೀತದ ಮಾಧುರ್ಯ, ಟಿ.ಎಂ. ನಾಗರಾಜು ಅವರ ಬೆಳಕಿನ ನಿರ್ವಹಣೆ, ರೂಪಾಂತರದ ರಾಜು ಅವರ ನಿರ್ವಹಣೆ, ಕೆ. ಗಂಗಾಧರ ಅವರ ವಿನ್ಯಾಸ, ಸಹನಿರ್ದೇಶಕ ಎನ್. ರಾಮಚಂದ್ರ ಎಲ್ಲರ ಶ್ರಮ ಪರಸಂಗದ ಗೆಂಡೆತಿಮ್ಮ ನಾಟಕ ಪ್ರದರ್ಶನದಲ್ಲಿ ಎದ್ದು ಕಾಣುತ್ತಿತ್ತು.

ಪರಸಂಗದ ಗೆಂಡೆತಿಮ್ಮ ನಾಟಕದ ಮರುಪ್ರದರ್ಶನವು 11ನೇ ಜೂನ್ 21024ರಂದು ಸಂಜೆ 6.30ಕ್ಕೆ ಹಂಪಿನಗರ ನಗರ ಕೇಂದ್ರ ಗ್ರಂಥಾಲಯದ ಗ್ರಂಥಾಂಗಣ ಸಭಾಂಗಣದಲ್ಲಿದೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ ಸಹಯೋಗದಲ್ಲಿ ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಕಳೆದ 189 ತಿಂಗಳುಗಳಿಂದ ನಡೆಸಿಕೊಂಡು ಬರುತ್ತಿರುವ ಓದಿನರಮನೆಯಲ್ಲಿ ತಿಂಗಳ ಒನಪು ಕಾರ್ಯಕ್ರಮ ಸರಿಣಿಯಲ್ಲಿ ಪ್ರದರ್ಶನವಾಗುತ್ತಿದೆ ಎಂದು ಕೆ.ಎಸ್.ಎಂ. ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cmsiddaramaiah ) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!