ದೊಡ್ಡಬಳ್ಳಾಪುರ, (ಸೆ.27); ಇತ್ತೀಚೆಗಷ್ಟೇ ದೊಡ್ಡಬೆಳವಂಗಲ ಪೊಲೀಸರು ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯ ಬಂಧನದ ಬೆನ್ನಲ್ಲೇ, ದೊಡ್ಡಬಳ್ಳಾಪುರ ಗ್ರಾಮಾಂತರ (Doddaballapura Rural) ಪೊಲೀಸರು ಕಾರ್ಯಚರಣೆ ನಡೆಸಿದ್ದು, ಸುಮಾರು 92 ಸಾವಿರ ರೂ. ಮೌಲ್ಯದ 8 ಕೆಜಿ 700 ಗ್ರಾಂ ತೂಕದ ಹಸಿ ಗಾಂಜಾ ಸೊಪ್ಪಿನ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ತೂಬಗೆರೆ ಹೋಬಳಿ ಗೆದ್ದಲ ಪಾಳ್ಯದ ಹೊರವಲಯದಲ್ಲಿನ ಜಮೀನಿನಲ್ಲಿ ಗಾಂಜಾ ಸೊಪ್ಪು ಬೆಳೆಯಲಾಗಿ ಎಂಬ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.
ಈ ವೇಳೆ ಜಮೀನಿನಲ್ಲಿ ಬೆಳೆಯಲಾಗುತ್ತಿದ್ದ ತೋಗರಿ, ಅವರೆ, ಹಳಸಂದೆ, ರಾಗಿ ಜೊತೆಗೆ ಸಾಲಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಇದನ್ನೂ ಓದಿ: ದೊಡ್ಡಬೆಳವಂಗಲ ಪೊಲೀಸರ ಕಾರ್ಯಾಚರಣೆ.. ಗಾಂಜಾ ಬೆಳೆದಿದ್ದ ವ್ಯಕ್ತಿಯ ಬಂಧನ
ಆರೋಪಿ ನಾರಾಯಣ ಸ್ವಾಮಿ ಹಾಗೂ ಸುಮಾರು 92 ಸಾವಿರ ರೂ. ಮೌಲ್ಯದ 8 ಕೆಜಿ 700 ಗ್ರಾಂ ತೂಕದ, ಒಟ್ಟು 568 ಗಾಂಜಾ ಸೊಪ್ಪಿನ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇನ್ಸ್ಪೆಕ್ಟರ್ ಸಾದಿಕ್ ಪಾಷಾ ತಿಳಿಸಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.