Vidya siri| ವಿದ್ಯಾಸಿರಿ ಯೋಜನೆಯಡಿ ನೀಡುವ ಮೊತ್ತ ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ವಿದ್ಯಾಸಿರಿ (Vidya siri) ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನವನ್ನು 1500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಅವರು ಸಂತ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಿತಿ, ಸಿದ್ದಾರ್ಥನಗರ, ಮೈಸೂರು ಇವರ ವತಿಯಿಂದ ಸಿದ್ದಾರ್ಥನಗರದ ಕನಕಭವನದಲ್ಲಿ ಆಯೋಜಿಸಿದ್ದ ‘ಶ್ರೀ ಭಕ್ತ ಕನಕದಾಸರ 537ನೇ ಜಯಂತ್ಯುತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಜೀವನದ ಅನುಭವದಿಂದ ಮೂಡಿಬಂದ ಯೋಜನೆಗಳು. ಈ ಕಾರ್ಯಕ್ರಮಗಳು ಜೀವನದ ಅನುಭವದಿಂದ ಮೂಡಿಬಂದಿದ್ದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರೌಢಶಾಲೆಗೆ ಬರುವವರೆಗೂ ತಾವು ಚಪ್ಪಲಿಯನ್ನು ಹಾಕಿಕೊಳ್ಳುತ್ತಿರಲಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಎಲ್ಲಾ ಶಾಲಾ ಮಕ್ಕಳು ಶೂ ಹಾಕಬೇಕೆಂದು ಶೂಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು.

ರಾಜ್ಯದಲ್ಲಿ ಹೆಚ್ಚುವರಿ ಹಾಲು ಉತ್ಪಾದನೆಯಾದ ಸಂದರ್ಭದಲ್ಲಿ ಶಾಲೆ ಮಕ್ಕಳಿಗೆ ಹಾಲು ಕೊಡಲಾಯಿತು. ಪ್ರಸ್ತುತ ವಾರದಲ್ಲಿ ಆರು ದಿನಗಳು ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ ಎಂದರು.

ಬಡವರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬಲು ಗ್ಯಾರಂಟಿ ಯೋಜನೆಗಳು ಜಾರಿ
ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರೂ ಉಚಿತವಾಗಿ ಬಸ್ಸುಗಳಲ್ಲಿ ಓಡಾಡುತ್ತಾರೆ. ಗೃಹ ಲಕ್ಷ್ಮೀ ಯೋಜನೆಯಡಿ 1.ಕೋಟಿ 22 ಲಕ್ಷ ಕುಟುಂಬಗಳ ಮನೆ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ವರ್ಷಕ್ಕೆ 32 ಸಾವಿರ ಕೋಟಿ ಒದಗಿಸಲಾಗುತ್ತಿದೆ ಎಂದರು.

ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಬಡವರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬಲು ಈ ಯೋಜನೆಗಳು ಜಾರಿಯಾಗಿವೆ. ವರ್ಷಕ್ಕೆ 50-60 ಸಾವಿರ, ತಿಂಗಳಿಗೆ 4-5 ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ನಾನು ಹಳ್ಳಿಯಿಂದ ಬಂದು ನನ್ನ ಹಾಗೆ ಕಷ್ಟ ಪಡಬಾರದೆಂದು ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಕನಕದಾಸರ ಪ್ರತಿಮೆ ಸ್ಥಾಪಿಸುವುದಾಗಿ ಭರವಸೆ
ಕನಕದಾಸರ ಪ್ರತಿಮೆಯನ್ನು ಮೈಸೂರು ನಗರದಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಶಿಕ್ಷಣ ಹಾಗೂ ಪ್ರತಿಭೆ ಯಾರ ಅಥವಾ ಯಾವ ಜಾತಿ ಸ್ವತ್ತು ಅಲ್ಲ

ಶೇಕಡ 90 ಅಂಕಗಳನ್ನು ಪಡೆಯುವುದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ಸಾಧ್ಯ. ಅದಕ್ಕಾಗಿ ಅವರು ಸಾಕಷ್ಟು ಶ್ರಮವಹಿಸಿರುತ್ತಾರೆ. ನಾನು ಕೂಡಾ ಹತ್ತನೇ ತರಗತಿವರೆಗೆ ವಿದ್ಯಾವರ್ಧಕ ಶಾಲೆಯಲ್ಲಿ ಮೊದಲಿಗನಾಗಿದ್ದೆ. ನಂತರ ಪಿಯುಸಿ ತರಗತಿಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಆಯ್ದುಕೊಂಡಿದ್ದರಿಂದ ಸ್ವಲ್ಪ ಶ್ರಮ ವಹಿಸಬೇಕಾಯಿತು. ಪಿಯುಸಿ ಹಾಗೂ ಬಿ ಎಸ್ ಸಿ ಮತ್ತು ಲಾ ವ್ಯಾಸಂಗವನ್ನು ಸೆಕೆಂಡ್ ಕ್ಲಾಸಿನಲ್ಲಿ ಪಾಸ್ ಮಾಡಿದೆ.ಆದರೆ ವಿದ್ಯಾರ್ಥಿ ಜೀವನದಲ್ಲಿ ಒಮ್ಮೆಯೂ ಫೇಲ್ ಆಗಲಿಲ್ಲ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು

ಪ್ರತಿದಿನ ಅಭ್ಯಾಸ ಮಾಡಲು ಸಲಹೆ
ಆದ್ದರಿಂದ ಶಿಕ್ಷಕರು ಮಾಡುವ ಪಾಠವನ್ನು ಆಯಾಯ ದಿನದಂದೇ ಅಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪ್ರತಿದಿನ ಐದಾರು ಗಂಟೆಗಳ ಕಾಲ ಅಭ್ಯಾಸ ಮಾಡಲು ಹೇಳಿದರು. ಶಿಕ್ಷಣ ಹಾಗೂ ಪ್ರತಿಭೆ ಯಾರ ಅಥವಾ ಯಾವ ಜಾತಿ ಸ್ವತ್ತು ಅಲ್ಲ . ವಿವೇಕಾನಂದರು ಹೇಳಿದಂತೆ ಸುಪ್ತವಾದ ಪ್ರತಿಭೆಯನ್ನು ವಿಕಸನಗೊಳಿಸುವುದೇ ಶಿಕ್ಷಣ ಎಂದರು.

ನೀತಿ ಮತ್ತು ಶಿಸ್ತು ರೂಢಿಸಿಕೊಳ್ಳುವುದೇ ನಿಜವಾದ ಶಿಕ್ಷಣ

ಹಿಂದುಳಿದ ವರ್ಗಗಳು 2ಎ ಕೆಟಗರಿಗೆ ಸೇರುತ್ತವೆ ಆದರೆ ಇದನ್ನು ಮೀರಿ ಮೆರಿಟ್ ನಲ್ಲಿ ಅಂಕ ಗಳಿಸಿ ಸೀಟ್ ಪಡೆಯಲು ಪ್ರಯತ್ನಿಸಬೇಕು ಅದಕ್ಕಾಗಿ ಶ್ರಮವಹಿಸಬೇಕು. ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಲ್ಲಿ ಅವರು ಹೆಚ್ಚು ಅಂಕಗಳನ್ನು ತೆಗೆಯಲು ಸಹಕಾರಿಯಾಗುತ್ತದೆ.

ಜೀವನದಲ್ಲಿ ಮೇಲೆ ಬಂದ ಮೇಲೆ ನಡೆದು ಬಂದ ಹಾದಿಯನ್ನು ಮರೆಯಬಾರದು ಸಮಾಜದಲ್ಲಿ ತುಳಿತಕ್ಕೊಳಗಾದವರ ಅವಕಾಶ ವಂಚಿತರ ಸೇವೆ ಮಾಡಬೇಕು. ಹುಟ್ಟು ಆಕಸ್ಮಿಕ ಸಾವು ನಿಶ್ಚಿತ ಇವೆರಡರ ನಡುವಿನ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.

ವಿಶ್ವಮಾನವರಾಗಲು ಪ್ರಯತ್ನಿಸೋಣ
ಕುವೆಂಪು ಹೇಳುತ್ತಾರೆ ‘ಹುಟ್ಟುವಾಗ ಎಲ್ಲರೂ ವಿಶ್ವಮಾನವರು ಬೆಳೆಯುತ್ತಾ ಬೆಳೆಯುತ್ತಾ ಜಾತಿ ಇತ್ಯಾದಿಗಳನ್ನು ರೂಢಿಸಿ ಕೊಂಡು ಅಲ್ಪಮಾನವರಾಗಿ ಬಿಡುತ್ತಾರೆ ನಾವು ವಿಶ್ವಮಾನವರಾಗಲು ಪ್ರಯತ್ನಿಸೋಣ. ಅಲ್ಪ ಮಾನವರಾಗುವುದು ಬೇಡ. ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡೋಣ ಶಿಕ್ಷಣದ ಮೂಲ ಧ್ಯೇಯವು ಅದೇ ಎಂದರು.

1988ರಲ್ಲಿ 37 ವರ್ಷಗಳ ಹಿಂದೆ ನಾನು ಸಾರಿಗೆ ಮಂತ್ರಿಯಾಗಿದ್ದಾಗ ಕನಕದಾಸ ಜಯಂತಿಯ 500ನೇ ವರ್ಷಾಚರಣೆಯನ್ನು ಆಚರಿಸಲಾಯಿತು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು,
ಕನಕದಾಸರ ಒಬ್ಬ ಕವಿ, ಸಂತ, ದಾರ್ಶನಿಕ ಎಂದು ಜೀವನವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಕನಕದಾಸರು ಹಿಂದುಳಿದ ಜಾತಿಗೆ ಸೇರಿದ್ದರಿಂದ ಅನೇಕ ಅಪಮಾನಗಳನ್ನು ಎದುರಿಸಬೇಕಾಯಿತು. ಅದನ್ನೆಲ್ಲಾ ಮೀರಿ ಅವರು ಸಂತರಾದ ಬಗೆಯನ್ನು ವಿದ್ಯಾರ್ಥಿಗಳಿಗೆ ಕತೆಗಳ ಮೂಲಕ ವಿವರಿಸಿದರು.

ರಾಮಧಾನ್ಯ ಚರಿತೆ

ಅಕ್ಕಿಗೂ ರಾಗಿಗೂ ಒಮ್ಮೆ ಯಾರು ಶ್ರೇಷ್ಠ ಎನ್ನುವ ಪೈಪೋಟಿ ಶುರುವಾಯಿತು. ಎರಡೂ ಶ್ರೀರಾಮನ ಬಳಿ ಹೋದವು. ಆಗ ಒಂದು ಹಗೆಯಲ್ಲಿ ರಾಗಿ ಮತ್ತೊಂದರಲ್ಲಿ ಭತ್ತ ಹಾಕಲಾಯಿತು ಮತ್ತು ಅದನ್ನು ಆರು ತಿಂಗಳ ನಂತರ ಪರೀಕ್ಷಿಸಲು ತೀರ್ಮಾನಿಸಲಾಯಿತು. ಆರು ತಿಂಗಳ ನಂತರ ಪರೀಕ್ಷಿಸಲಾಗಿ ಭತ್ತವು ಬೂದಿ ಹಿಡಿದು ಹಾಳಾಗಿತ್ತು , ಅದೇ ರಾಗಿ ಘಮಘಮಿಸುತ್ತಿತ್ತು ಇದರಿಂದ ಬಡವರ ಆಹಾರವಾದ ರಾಗಿಯು ಸರ್ವಶ್ರೇಷ್ಠ ಎಂದು ಸಾಬೀತಾಯಿತ್ತು ಮಾತ್ರವಲ್ಲ ಸತ್ವವುಳ್ಳ ಆಹಾರ ಎಂದು ಸಾಬೀತಾಯಿತು.

ಇದರಿಂದ ರಾಗಿ ಕಳಪೆಯಲ್ಲ ಅಕ್ಕಿಯನ್ನು ಶ್ರೀಮಂತರು ಉಪಯೋಗಿಸುತ್ತಾರೆ ಎಂದು ಅದು ಮೇಲಲ್ಲ ಎಂದು ಮಕ್ಕಳಿಗೆ ರಾಮಧಾನ್ಯ ಚರಿತೆ ಕತೆ ಹೇಳಿದರು.

ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಅನ್ನಭಾಗ್ಯ ಸಿಗಲಿ ಎನ್ನುವ ಉದ್ದೇಶದಿಂದಲೇ ಆ ಯೋಜನೆ ಶುರು ಮಾಡಿದ್ದಾಗಿ ಹೇಳಿದರು.

ರಾಜಕೀಯ

BJP ತಟಸ್ಥ ಬಣದ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ..!

BJP ತಟಸ್ಥ ಬಣದ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ..!

ಇವೆಲ್ಲ ಸರಿಪಡಿಸಲು ಪಕ್ಷದ ರಾಷ್ಟ್ರೀಯ ನಾಯಕರೇ ಬರಬೇಕಾ, ಇವರಿಗೆ ಜವಾಬ್ದಾರಿ ಇಲ್ಲವಾ? ಅಡ್ರೆಸ್ ಗೆ ಇಲ್ಲದವರೂ ಯಡಿಯೂರಪ್ಪ ಅವರಿಂದಲೇ ಮೇಲೆ ಬಂದಿದ್ದಾರೆ ಎಂದು ವಿಜಯೇಂದ್ರ ಹೇಳಿದರು. BJP

[ccc_my_favorite_select_button post_id="102343"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!