ಕೋಳಿ ಜಗಳ.. ಮರ್ಮಾಂಗಕ್ಕೆ ಒದ್ದು ಮಹಿಳೆಯರಿಂದ ಕೊಲೆ..!| Murder

ತಿ.ನರಸೀಪುರ: ಸಾಕಿದ್ದ ಕೋಳಿಗಳು ಮನೆಗೆ ನುಗ್ಗಿ ಗಲೀಜು ಮಾಡುವ ವಿಚಾರಕ್ಕೆ ಆರಂಭವಾದ ಜಗಳ ಒಬ್ಬನ ಕೊಲೆಯಲ್ಲಿ (Murder) ಅಂತ್ಯಗೊಂಡಿರುವ ಘಟನೆ ತಾಲೂಕಿನ ದೊಡ್ಡಬಾಗಿಲು ಗ್ರಾಮದಲ್ಲಿ ಸಂಭವಿಸಿದೆ.

ದೊಡ್ಡಬಾಗಿಲು ಗ್ರಾಮದ ವಾಸಿ ಮಹದೇವಸ್ವಾಮಿ ಕೊಲೆಯಾದ ದುರ್ದೈವಿ.

ನಿನ್ನೆ ಬೆಳಗ್ಗೆ ಮನೆಯ ಮುಂದೆ ಮಹದೇವಸ್ವಾಮಿ ಅವರ ಪತ್ನಿ ಪಾತ್ರೆ ತೊಳೆಯುತ್ತಿದ್ದಾಗ, ಇವರ ದಾಯಾದಿ ನಂಜಮ್ಮನವರು ಮಾತನಾಡುತ್ತ ಮನೆಯ ಮುಂದೆ ನಿಂತಿದ್ದರು.

ಈ ವೇಳೆ ಎದುರು ಮನೆಯ ರಾಜಮ್ಮ ಮತ್ತು ಇವರ ತಾಯಿ ಸಿದ್ದಮ್ಮನವರು ನಿಮ್ಮ ಮನೆಯ ಕೋಳಿಗಳು ನಮ್ಮ ಮನೆಗೆ ಬಂದು ಗಲೀಜು ಮಾಡುತ್ತಿವೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತ ನಂಜಮ್ಮನವರ ತಲೆ ಜುಟ್ಟು ಹಿಡಿದು ಎಳೆದಾಡ ತೊಡಗಿದ್ದಾರೆ.

ಇದನ್ನು ಕಂಡ ಮಹದೇವಸ್ವಾಮಿಯವರ ಪತ್ನಿ ಪಾತ್ರೆ ತೊಳೆಯುವುದನ್ನು ಬಿಟ್ಟು ಜಗಳ ಬಿಡಿಸಲು ಮುಂದಾಗಿದ್ದಾರೆ. ಆಗ ಸಿದ್ದಮ್ಮ ಜಗಳ ಬಿಡಿಸಲು ಬಂದವರ ತಲೆಗೂದಲನ್ನು ಹಿಡಿದು ಎಳೆದಾಡಿದ್ದಾರೆ.

ಇದೇ ವೇಳೆ ರಾಜಮ್ಮ ಅಲ್ಲೆ ಬಿದ್ದಿದ್ದ ಕಲ್ಲಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿದಾಗ ಎಡಗಣ್ಣಿಗೆ ಪೆಟ್ಟು ಬಿದ್ದಿದೆ. 00

ಇದೇ ಸಂದರ್ಭದಲ್ಲಿ ತನ್ನ ಪತ್ನಿ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಕಂಡು ಮಹದೇವಸ್ವಾಮಿ ಜಗಳ ಬಿಡಿಸಲು ಬಂದಾಗ ರಾಜಮ್ಮ ಮತ್ತು ಸಿದ್ದಮ್ಮ ಇಬ್ಬರೂ ಮಹದೇವಸ್ವಾಮಿಯನ್ನು ಎಳೆದಾಡಿ ಮರ್ಮಾಂಗಕ್ಕೆ ಒದ್ದು ಕೆಳಗೆ ಬೀಳಿಸಿದ್ದಾರೆ ಎನ್ನಲಾಗಿದೆ.

ನಂತರ ಜಗಳ ಬಿಟ್ಟು ಮನೆಯವರೆಲ್ಲ ಮಹದೇವಸ್ವಾಮಿಯನ್ನು ಎಬ್ಬಿಸಲು ಯತ್ನಿಸಿದಾಗ ಇಡೀ ದೇಹ ತಣ್ಣಗಾಗಿ ಸಾವನ್ನಪ್ಪಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ನನ್ನ ಗಂಡನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿರುವ ರಾಜಮ್ಮ ಮತ್ತು ಸಿದ್ದಮ್ಮ ಅವರ ಮೇಲೆ ಕ್ರಮ ಜರುಗಿಸಬೇಕು. ತಮಗೆ ನ್ಯಾಯ ಒದಗಿಸುವಂತೆ ಪತ್ನಿ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ವಿಷಯ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಡಿಷನಲ್ ಎಸ್ಪಿ ನಾಗೇಶ್, ಡಿವೈಎಸ್ಪಿ ರಘು ಹಾಗೂ ಸರ್ಕಲ್ ಇನ್‌ಸೆಕ್ಟರ್ ಧನಂಜಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಘಟನೆ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಕೀಯ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ತೀವ್ರ ವಿರೋಧ

[ccc_my_favorite_select_button post_id="105751"]
ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಘೋಷಿಸಿದರು.

[ccc_my_favorite_select_button post_id="105742"]
ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಆದಿಚುಂಚನಗಿರಿ ಮಠದ ಪೀಠಾಧಿಕಾರಿ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji), 'ಉಗ್ರರಿಗೆ ಜಾತಿ ಮತ್ತು ಧರ್ಮದ ಬಣ್ಣ ಹಚ್ಚದೇ ಉಗ್ರರನ್ನು ಮಟ್ಟ ಹಾಕಿ'.

[ccc_my_favorite_select_button post_id="105711"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!