ಬೆಂಗಳೂರು: ಕಿರುತೆರೆಯ ಬಿಗ್ಬಾಸ್ (Bigboss) ಸೀಸನ್- 11ರ ಸ್ಪರ್ಧಿಯಾಗಿರುವ ಚೈತ್ರಾ ಕುಂದಾಪುರ ಅವರು ಏಕಾಏಕಿ ಹೊರಬಂದಿದ್ದಾರೆ.
BJPಯಿಂದ ಎಂಎಎಲ್ಎ ಟಿಕೆಟ್ ಕೊಡಿಸುವುದಾಗಿ ಬೈಂದೂರು ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂ ವಂಚಿಸಿದ ಆರೋಪ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಕುಂದಾಪುರ ಸೇರಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿತ್ತು.
ನೋಟಿಸ್ ಬಂದ ಹಿನ್ನೆಲೆ ಬಿಗ್ಬಾಸ್ ಮನೆಯಿಂದ ಹೊರಬಂದ ಚೈತ್ರಾ, ನಗರದ 1ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರಾಗಿ ವಾಪಾಸ್ ತೆರಳಿದ್ದಾರೆಂದು ವರದಿಯಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದ ಆರೋಪದಡಿ ಚೈತ್ರಾ ಅವರನ್ನು ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿತ್ತು.
ಬಳಿಕ ಜಾಮೀನು ಪಡೆದಿದ್ದ ಚೈತ್ರಾ, ಬಿಗ್ಬಾಸ್ ಸ್ಪರ್ದಿಯಾಗಿ ಮನೆ ಪ್ರವೇಶಿಸಿದ್ದರು.