HD Kumaraswamy| ಜೆಡಿಎಸ್ – ಬಿಜೆಪಿ ಮೈತ್ರಿ ಸರಕಾರ ಬಂದೇ ಬರುತ್ತದೆ; ನಮ್ಮ Unfinished ಅಜೆಂಡಾ ಪೂರ್ಣಗೊಳಿಸುತ್ತೇವೆ: ಹೆಚ್‌.ಡಿ.ಕುಮಾರಸ್ವಾಮಿ

ಸಕಲೇಶಪುರ: ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದರು.

ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; 2006ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರಕಾರ ರಚನೆಯಾದಾಗ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಅನೇಕ ಜನಪರ ಕಾರ್ಯಕ್ರಮಗಳ ಜಾರಿ ಬಾಕಿ ಉಳಿದಿದೆ. ಅವೆಲ್ಲವನ್ನೂ ಅನುಷ್ಠಾನಕ್ಕೆ ತರಬೇಕಾದರೆ ಮತ್ತೊಮ್ಮೆ ಮೈತ್ರಿ ಸರಕಾರ ಬರಬೇಕಿದೆ. ಶೀಘ್ರದಲ್ಲಿಯೇ ಬಂದೇ ಬರುತ್ತದೆ ಎಂದು ಹೇಳಿದರು.

ಮುಂದೆ ನಿಮ್ಮೆಲ್ಲರ ಆಶೀರ್ವಾದದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಬರುವ ಆಶಯವಿದೆ. ನನ್ನ ಕನಸಿನ ಕೆಲವು ಶಾಶ್ವತ ಯೋಜನೆಗಳು ಹಾಗೆಯೇ ಉಳಿದಿವೆ. ಅವುಗಳನ್ನೆಲ್ಲಾ ಸಾಕಾರಗೊಳಿಸಬೇಕಿದೆ. ರೈತರ ಬದುಕನ್ನು ಕಟ್ಟಿಕೊಡುತ್ತೇವೆ ಎಂದು ಕೇಂದ್ರ ಸಚಿವರು ನುಡಿದರು.

ಕಾಫಿ ಬೆಳೆಗಾರರಿಗೆ ಸಚಿವರ ಅಭಯ

ಪ್ರಾಕೃತಿಕ ಕಾರಣ ಹಾಗೂ ಪ್ರತಿಕೂಲಕರ ಹವಾಮಾನದಿಂದ ಕಾಫಿ ಬೆಳೆಗಾರರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜಾಗತಿಕ ಮಾರುಕಟ್ಟೆ ತಲ್ಲಣಗಳಿಂದ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. 1991ರಲ್ಲಿ ದೇವೇಗೌಡರು ಸಂಸದರಾಗಿದ್ದರು.

ಸಕಲೇಶಪುರದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಅಂದಿನ ಕೇಂದ್ರ ಸಚಿವರಾಗಿದ್ದ ಐ.ಕೆ.ಗುಜ್ರಾಲ್ ಅವರು ಭಾಗವಹಿಸಿದ್ದರು. ಅಂದು ಗುಜ್ರಾಲ್ ಅವರಿಗೆ ದೇವೇಗೌಡರು ಕಾಫಿ ಬೆಳೆಗಾರರ ಸಮಸ್ಯೆ ವಿವರಿಸಿದ್ದರು. ಅವರನ್ನು ಬಿಟ್ಟರೆ ನಲವತ್ತು ವರ್ಷಗಳ ನಂತರ ಸಕಲೇಶಪುರಕ್ಕೆ ಬಂದಿರುವ ಕೇಂದ್ರ ಸಚಿವರು ಅಂದರೆ ಫಿಯುಷ್ ಗೋಯೆಲ್ ಅವರು ಮಾತ್ರ. ಅದಕ್ಕಾಗಿ ನಾನು ಗೋಯಲ್ ಅವರಿಗೆ ಆಭಾರಿ ಆಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪಿಯೂಷ್ ಗೋಯಲ್ ಅವರು ಸಕಲೇಶಪುರಕ್ಕೆ ಬಂದಿರುವ ಕಾರಣಕ್ಕೆ ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಸಕಲೇಶಪುರ ಜನರು ಆನೆ ಹಾವಳಿಗೆ ತುತ್ತಾಗಿ ಬಹಳಷ್ಟು ಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಚರ್ಚೆಗಳು ನಡೆದಿವೆ. ನಾನೂ ಮನವಿ ಮಾಡಿದ್ದೇನೆ. ಕೇಂದ್ರದಲ್ಲಿ ಪರಿಸರ ಇಲಾಖೆ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅವರ ಗಮನಕ್ಕೆ ಮತ್ತೊಮ್ಮೆ ಈ ವಿಷಯ ತರುತ್ತೇನೆ. ಪಿಯೂಷ್ ಗೋಯಲ್ ಮತ್ತು ನಾನು ಭೇಟಿ ಮಾಡಿ ಮನವಿ ಮಾಡುತ್ತೇವೆ. ಆನೆ ಕಾರಿಡಾರ್ ನಿರ್ಮಾಣ ಮಾಡಲು ಅರಣ್ಯ ಇಲಾಖೆ ಹದಿನೈದು ಸಾವಿರ ಎಕರೆ ಗುರುತಿಸಿದೆ. ರೈತರು ಮೂರು ಸಾವಿರ ಎಕರೆ ಬಿಟ್ಟುಕೊಡಲು ಸಿದ್ದರಿದ್ದಾರೆ. ಆದರೆ ಆ ಯೋಜನೆ ನೆನೆಗುದಿಗೆ ಬಿದ್ದಿದೆ. ನಾನು ಮುಖ್ಯಮಂತ್ರಿಯಾದಾಗ ತಡೆಗೋಡೆ ನಿರ್ಮಾಣ ಮಾಡಲು ನೂರು ಕೋಟಿ ಬಿಡುಗಡೆ ಮಾಡಿದ್ದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ಕಸ್ತೂರಿ ರಂಗನ್ ವರದಿ ಬಗ್ಗೆ ಎಲ್ಲರಲ್ಲೂ ಆತಂಕ ಇದೆ. ಹೇಮಾವತಿ ನದಿಯ ನೀರು ಮಲೆನಾಡು ಭಾಗದ ಜನರ ತ್ಯಾಗದ ಫಲ. ಎತ್ತಿನಹೊಳೆ ಯೋಜನೆ ಹೆಸರಿನಲ್ಲಿ ರಸ್ತೆ ಅಭಿವೃದ್ಧಿ ಮಾಡಲು ಅನುಕೂಲವಾಗಿದೆ ಎಂದು ಅವರು ಹೇಳಿದರು.

ದೇವೇಗೌಡರ ಮೇಲೆ ಅಪಾರ ಗೌರವ ಇಟ್ಟಿರುವ ನರೇಂದ್ರಮೋದಿ ಅವರು ತಮ್ಮ ಸಂಪುಟದಲ್ಲಿ ನನಗೊಂದು ಅವಕಾಶ ಮಾಡಿಕೊಟ್ಟಿದ್ದಾರೆ. ಅವರ ಕನಸಿನ ವಿಕಸಿತ ಭಾರತ್ ಸೇರಿದಂತೆ ಅನೇಕ ಯೋಜನೆಗಳನ್ನು ಸಾಕಾರಗೊಳಿಸಬೇಕು. ಆ ನಿಟ್ಟಿನಲ್ಲಿ ನಾವು ವೇಗವಾಗಿ ಕೆಲಸ ಮಾಡುತ್ತಿದ್ದೇವೆ ಎಂದರು ಸಚಿವರು.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರು ಕಾಫಿ ಬೆಳೆಗಾರರನ್ನು ಉದ್ದೇಶಿಸಿ ಮಾತನಾಡಿದರು.

ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ, ಮೋಟಮ್ಮ, ಕರ್ನಾಟಕ ಗ್ರೋವರ್ಸ್ ಫೆಡರೇಶನ್ ಅಧ್ಯಕ್ಷ ಡಾ.ಹೆಚ್.ಟಿ. ಮೋಹನ್ ಕುಮಾರ್, ಸಂಸದರಾದ ತೇಜಸ್ವಿ ಸೂರ್ಯ, ಶ್ರೇಯಸ್ ಪಟೇಲ್, ಶಾಸಕರಾದ ಎಸ್.ಮಂಜುನಾಥ್, ಹೆಚ್.ಕೆ. ಸುರೇಶ್, ಮಂಥರ್ ಗೌಡ, ಸ್ವರೂಪ್ ಪ್ರಕಾಶ್, ಕಾಫಿ ಮಂಡಳಿ ಅಧ್ಯಕ್ಷ ಡಿ.ಜೆ.ದಿನೇಶ್ ಸೇರಿದಂತೆ ಅನೇಕ ಗಣ್ಯರು, ಕಾಫಿ ಬೆಳೆಗಾರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಸಂಸದರಾದ ಡಾ.ಕೆ ಸುಧಾಕರ್ (Dr.K Sudhakar)

[ccc_my_favorite_select_button post_id="105198"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!