R Ashoka| ಮಹಿಳೆಯರ ಉಚಿತ ಬಸ್ ಪ್ರಯಾಣದಿಂದ ರಾಜ್ಯ ಸರ್ಕಾರಕ್ಕೆ ನಷ್ಟ: ಆರ್.ಅಶೋಕ ಆಕ್ರೋಶ

ಬೆಂಗಳೂರು: ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವ ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ.

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟು ನಷ್ಟ ಉಂಟಾಗಿದೆ. ಸಾರಿಗೆ ನೌಕರರು ಧರಣಿ ಮಾಡುತ್ತಿದ್ದು, ಅವರಿಗೆ 4 ಸಾವಿರ ಕೋಟಿ ರೂ. ನೀಡಬೇಕು. ರೈತರಿಗೆ ಒಂದೂವರೆ ಸಾವಿರ ಕೋಟಿ ಸಬ್ಸಿಡಿ ನಾಮ ಹಾಕಿದ್ದಾರೆ ಎಂದರು.

ನಾಮ ಹಾಕುವುದರಲ್ಲಿ ಕಾಂಗ್ರೆಸ್ ನವರು ಪಳಗಿದವರು. ಹಾಗಾಗಿ ಈ ವರ್ಷ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಮುಂದಿನ ವರ್ಷ ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿ 2 ಲಕ್ಷ ಕೋಟಿ ರೂ. ಸಾಲ ಮಾಡಿದರೆ ಕರ್ನಾಟಕ ಜನ್ಮದಲ್ಲಿ ಮುಂದೆ ಬರಲು ಸಾಧ್ಯವಿಲ್ಲ ಎಂದು ದೂರಿದರು.

ರಸ್ತೆಗೆ ಹೆಸರು ಸರಿಯಲ್ಲ

ಕರ್ನಾಟಕಕ್ಕೆ ಕೃಷ್ಣರಾಜಸಾಗರ ಅಣೆಕಟ್ಟನ್ನು ನೀಡಿದ ಮನೆತನದವರ ಹೆಸರನ್ನು ತೆಗೆದು ಕೆ.ಆರ್.ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಇಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಹಾಗೇನಾದರೂ ಹೆಸರು ಇಡಬೇಕು ಎಂದಿದ್ದರೆ ಹೊಸ ರಸ್ತೆಯೊಂದನ್ನು ನಿರ್ಮಿಸಿ ಅವರ ಹೆಸರು ಅಥವಾ ಅವರ ಕುಟುಂಬದವರ ಹೆಸರನ್ನು ಇಡಲಿ.

ಮಹಾರಾಜರ ಕುಟುಂಬ ಈ ನಾಡಿಗೆ ಸೇವೆ ಸಲ್ಲಿಸಿದೆ, ಅನ್ನ-ನೀರು ಕೊಟ್ಟಿದೆ. ಮಾರಿ ಕಣ್ಣು ಹೋರಿ ಮೇಲೆ ಎನ್ನುವಂತೆ ಆ ಕುಟುಂಬವನ್ನು ಗುರಿ ಮಾಡಬಾರದು. ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಅವರು ಇಂತಹ ಕೆಲಸಕ್ಕೆ ಕೈ ಹಾಕುತ್ತಾರೆಂದರೆ ಜನರಿಗೆ ಅವರ ಬಗ್ಗೆ ಇರುವ ಭಾವನೆ ಬದಲಾಗುತ್ತದೆ ಎಂದರು.

ಸರ್ಕಾರ ಹುಚ್ಚರ ಸಂತೆಯಾಗಿದೆ. ಸಿ.ಟಿ.ರವಿ ಮೇಲೆ ಸುಮಾರು ನಲ್ವತ್ತು- ಐವತ್ತು ಜನ ಹಲ್ಲೆ ಮಾಡಿ ಕೊಲೆ ಯತ್ನ ನಡೆದಿದೆ. ಇದರಲ್ಲಿ ಸಚಿವರು ಮತ್ತು ಅವರ ಪಿಎ ಪಾತ್ರ ಇದೆ. ಈ ಪ್ರಕರಣದಲ್ಲಿ ಅದೇ ಠಾಣೆಯಲ್ಲಿ ಎಫ್ಐಆರ್ ಮಾಡಬೇಕೆಂದು ಆಗ್ರಹಿಸಿದ್ದೆವು. ನಮ್ಮನ್ನು ಖಾನಾಪುರ ಪೊಲೀಸ್ ಠಾಣೆಯಲ್ಲಿ ಸುಮಾರು ಐದು ಗಂಟೆಗಳ ಕಾಲ ಕಾಯಿಸಿ,‌ ನಂತರ ದೂರು ಸ್ವೀಕರಿಸಿದ್ದಾರೆ.

ಈ ಸರ್ಕಾರಕ್ಕೆ ಬುದ್ಧಿ ಭ್ರಮಣೆಯಾಗಿದೆ. ಪೊಲೀಸ್ ಠಾಣೆಗಳು ಸುರಕ್ಷಿತ ಅಲ್ಲ. ಯಾರಾದರೂ ಅಪರಾಧಿಯನ್ನು ಬಂಧಿಸಿದರೆ ಅವರನ್ನು ಕಬ್ಬಿನಗದ್ದೆಯಲ್ಲಿ ಇರಿಸಬೇಕು ಎಂದು ರೂಲ್ಸ್ ಮಾಡಿದ್ದಾರೆ. ಗೃಹ ಸಚಿವರನ್ನು ಏನೂ ಕೇಳಿದರೂ ನನಗೆ ಗೊತ್ತಿಲ್ಲ ಎನ್ನುತ್ತಿದ್ದಾರೆ ಎಂದು ದೂರಿದರು.

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಸಂಸದರಾದ ಡಾ.ಕೆ ಸುಧಾಕರ್ (Dr.K Sudhakar)

[ccc_my_favorite_select_button post_id="105198"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!