ಅರ್ಕಾವತಿಯಲ್ಲಿ ಶ್ರೀ ಸೀತಾರಾಮಚಂದ್ರಸ್ವಾಮಿಯ ರಥೋತ್ಸವ
ಅರ್ಕಾವತಿಯಲ್ಲಿ ಶ್ರೀ ಸೀತಾರಾಮಚಂದ್ರಸ್ವಾಮಿಯ ರಥೋತ್ಸವ

ದೊಡ್ಡಬಳ್ಳಾಪುರ, (ಜ.24): ತಾಲೂಕಿನ ಕಸಬಾ ಹೋಬಳಿಯ ಕೊನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಕಾವತಿ ಕ್ಷೇತ್ರದಲ್ಲಿ 69ನೇ ವರ್ಷದ ಶ್ರೀ ಸೀತಾರಾಮಚಂದ್ರಸ್ವಾಮಿಯ ಬ್ರಹ್ಮ ರಥೋತ್ಸವವು ಸಂಭ್ರಮದಿಂದ ನೆರವೇರಿತು.

ರಥೋತ್ಸವದ ಅಂಗವಾಗಿ ಸೋಮವಾರ ಸಂಜೆ ಸೀತಾರಾಮ ಕಲ್ಯಾಣೋತ್ಸವ, ಹಾಗೂ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. 

ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತಾದಿಗಳು ರಥಕ್ಕೆ ಹೂವು ಹಣ್ಣು ಸಮರ್ಪಿಸಿ, ಶ್ರೀ ಸೀತಾರಾಮಚಂದ್ರಸ್ವಾಮಿಯ ದರ್ಶನ ಪಡೆದರು.

ರಥೋತ್ಸವದ ಹೋಮದ ಪೂರ್ಣಾಹುತಿ ಕಾರ್ಯಕ್ರಮದದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಭಾಗವಹಿಸಿದ್ದರು.

ರಥೋತ್ಸವದ ಅಂಗವಾಗಿ ಹಮಾಮ್, ಶಿವಪುರ, ಮುತ್ಸಂದ್ರ ಗ್ರಾಮಸ್ಥರಿಂದ ಪ್ರಸಾದ ವಿನಿಯೋಗ ನಡೆಯಿತು.

ಅರ್ಕಾವತಿ ಕ್ಷೇತ್ರದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಸೀತಾರಾಮಚಂದ್ರಸ್ವಾಮಿಯ ದೇವಾಲಯದಲ್ಲಿ ಕಳೆದ 68 ವರ್ಷಗಳಿಂದ ಸೀತಾರಾಮಚಂದ್ರಸ್ವಾಮಿಯ ಬಹ್ಮ ರಥೋತ್ಸವ ನಡೆಯುತ್ತಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--