ದೊಡ್ಡಬಳ್ಳಾಪುರ, (ನ.20); ತಾಲೂಕು ವಕೀಲರ ಸಂಘಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಸಂಘದ ವಿವಿಧ ಹುದ್ದೆಗಳಿಗಾಗಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.
ಅಧ್ಯಕ್ಷ ಸ್ಥಾನಕ್ಕೆ ಡಿ.ಎಂ.ರೇಣುಕಾಮೂರ್ತಿ, ಎಂ.ರವಿ ಮತ್ತು ಸಿ.ಪ್ರಕಾಶ್ ಸೇರಿ 3 ಮಂದಿ ಕಣದಲ್ಲಿದ್ದಾರೆ.
ಉಳಿದಂತೆ ಉಪಾಧ್ಯಕ್ಷ ಸ್ಥಾನಕ್ಕೆ 2, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ 2, ಖಜಾಂಚಿ ಸ್ಥಾನಕ್ಕೆ 2, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ 3 ಹಾಗೂ ನಿರ್ದೇಶಕರ ಸ್ಥಾನಕ್ಕೆ ಒಟ್ಟು 32 ನಾಮಪತ್ರ ಸಲ್ಲಿಕೆಯಾಗಿವೆ ಎಂದು ತಿಳಿದು ಬಂದಿದೆ.
ಇಂದು ನಗರದ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಕಚೇರಿಯಲ್ಲಿ, ಸೂಕ್ತ ಭದ್ರತೆಯೊಂದಿಗೆ ಮತದಾನ ನಡೆಯುತ್ತಿದ್ದು, ಇತ್ತೀಚಿನ ಮಾಹಿತಿ ಅನ್ವಯ ಸುಮಾರು 200 ಮಂದಿ ಮತದಾನ ಪೂರ್ಣಗೊಳಿಸಿದ್ದಾರೆ ಎನ್ನಲಾಗುತ್ತಿದೆ.
ಸಂಜೆ ಐದು ಗಂಟೆಯ ವರೆಗೆ ಮತದಾನ ನಡೆಯಲಿದ್ದು, ನಂತರ ಎಣಿಕೆ ಕಾರ್ಯ ಆರಂಭವಾಗಲಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
agriculture
others
others
politics
politics