ಬೆಂಗಳೂರು, (ಫೆ.12); ಬಜೆಟ್ ಅಧಿವೇಶನದ ರಾಜ್ಯಪಾಲರ ಭಾಷಣ ಅತ್ಯಂತ ನೀರಸವಾಗಿದ್ದು, ಸುಳ್ಳುಗಳ ಕಂತೆಯನ್ನೇ ತುರುಕಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ಯಾರಂಟಿ ಸುತ್ತ ಗಿರಕಿ ಹೊಡೆಯುವುದನ್ನು ಬಿಟ್ಟರೆ ಇನ್ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎನ್ನುವುದು ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾಗಿ ಗೋಚರವಾಗಿದೆ.
ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಮಾಡಲಾಗದೆ ಗೊಂದಲದಲ್ಲಿ ಮುಳುಗಿರುವ ಸರ್ಕಾರ ಭವಿಷ್ಯದಲ್ಲಾದರೂ ಹೊಸ ಭರವಸೆ ಮೂಡಿಸುವ ಮಾತುಗಳನ್ನು ರಾಜ್ಯಪಾಲರಿಂದ ಹೇಳಿಸಿಲ್ಲ.
ಬಡವರು, ರೈತರು, ನಿರುದ್ಯೋಗಿಗಳ ಪಾಲಿಗೆ ಕಂಟಕವಾಗಿರುವ ಈ ಸರ್ಕಾರ ಉದ್ಯಮಿಗಳು ಹಾಗೂ ಸ್ವಾವಲಂಬಿಗಳಿಗೆ ಹಾಗೂ ಸ್ವಂತ ಮನೆ ಹೊಂದುವ ಸೂರು ರಹಿತರಿಗೆ, ತೆರಿಗೆ ಹಾಗೂ ಮುದ್ರಾಂಕ ಶುಲ್ಕಗಳನ್ನು ಏರಿಸುವ ಮೂಲಕ ಆರ್ಥಿಕ ವ್ಯವಹಾರಗಳಿಗೆ ಧಕ್ಕೆ ತಂದೊಡ್ಡಿರುವುದು, ಮುಂದಿನ ದಿನಗಳಲ್ಲಿ ಕರ್ನಾಟಕದ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ.
ಸದ್ಯ ಮಂಡಿಸಲಿರುವ ಬಜೆಟ್ ನಲ್ಲಿ ಯಾವ ವರ್ಗದ ಜನರೂ ಕನಿಷ್ಠ ನಿರೀಕ್ಷೆಗಳನ್ನೂ ಇಟ್ಟುಕೊಳ್ಳದ ಸುಳಿವು ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾಗಿ ಗೋಚರವಾಗಿದೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
crime
politics
economy
economy
economy
crime
others
others
others
others
others
politics
others
sports
others
others
education
politics
economy
politics
sports
others
economy
others
others
crime
education
others
politics
crime