ದೊಡ್ಡಬಳ್ಳಾಪುರ, (ಜೂ.11): ತಾಲೂಕನ್ನು ಸುತ್ತುವರಿಯುತ್ತಿರುವ ಟೋಲ್ ಕೇಂದ್ರಗಳು ಇಲ್ಲಿನ ಜನತೆ ಎತ್ತ ಸಾಗಬೇಕೇಂದರು.. ದುಡ್ ಕಟ್ಟಿಯೇ ಸಾಗಬೇಕಾದ ಅನಿವಾರ್ಯತೆಗೆ ಜನರನ್ನು ಸಿಲುಕಿಸಿವೆ.
ರಾಷ್ಟ್ರೀಯ ಹೆದ್ದಾರಿ ರಸ್ತೆಯ ದಾಬಸ್ ಪೇಟೆ ಮತ್ತು ದೊಡ್ಡಬಳ್ಳಾಪುರ ಟೋಲ್ ರಸ್ತೆ ಪೂರ್ಣಗೊಂಡಿದ್ದು, ಹುಲಿಕುಂಟೆ ಗ್ರಾಮದಲ್ಲಿನ ಟೋಲ್ ಫ್ಲಾಜಾದಲ್ಲಿ ಟೋಲ್ ಸುಂಕ ಸಂಗ್ರಹ ಕಾರ್ಯ ಜೂನ್ 14ರಿಂದ ಪ್ರಾರಂಭವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.
ಜೂನ್ 14 ರಿಂದ ಎಲ್ಲ ರೀತಿಯ ಖಾಸಗಿ ಮತ್ತು ವಾಣಿಜ್ಯ ವಾಹನಗಳು ದರಪಟ್ಟಿ ಪ್ರಕಾರ ಸುಂಕ ಪಾವತಿಸಬೇಕಿದೆ. ದ್ವಿಚಕ್ರ ವಾಹನಗಳಿಗೆ ಮಾತ್ರ ಟೋಲ್ ಸುಂಕದಿಂದ ವಿನಾಯಾತಿ ನೀಡಲಾಗಿದೆ ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ದರಪಟ್ಟಿಯನ್ನು ಸಹ ಪ್ರಕಟಿಸಿದೆ.
ದಿನದ 24 ಗಂಟೆಯಲ್ಲಿ ಕಾರಿನ ಒಂದು ಕಡೆ ಸಂಚಾರಕ್ಕೆ 105 ರೂಪಾಯಿ, ವಾಪಸ್ ಬರಲು 155 ರೂಪಾಯಿ ನಿಗದಿ ಮಾಡಿದೆ. ಮಾಸಿಕ ಪಾಸ್ನಲ್ಲಿ 50 ಸಲ ಒನ್ ವೇ ಪ್ರಯಾಣಕ್ಕೆ ಅವಕಾಶ ಇದ್ದು, 3,470 ರೂಪಾಯಿ ನಿಗದಿ ಮಾಡಿದೆ. ಅಲ್ಲದೇ ಭಾರಿ ವಾಹನ ಸೇರಿದಂತೆ ವಿವಿಧ ವಾಹನಗಳಿಗೆ ಬೇರೆ ಬೇರೆ ಶುಲ್ಕ ನಿಗದಿಪಡಿಸಿದೆ.
ನೆಲ್ಲೂರು-ದೇವನಹಳ್ಳಿಯ 34.15 ಕಿ.ಮೀ ಟೋಲ್ ಸುಂಕ ಸಂಗ್ರಹ ನವೆಂಬರ್ 17ರ 2023ರಿಂದ ಪ್ರಾರಂಭವಾಗಿದೆ.
ಬೆಂಗಳೂರು ನಗರಕ್ಕೆ ಪ್ರಮುಖ ನಗರಗಳನ್ನು ಸಂಪರ್ಕಿಸುವ ಕಾರಣಕ್ಕೆ ಉಪನಗರದ ಹೊರವರ್ತುಲ ರಸ್ತೆ (STRR) ನಿರ್ಮಾಣ ಮಾಡಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ 101 ಕಿ.ಮೀಗಳ ದಾಬಸ್ಪೇಟ್-ಹೊಸಕೋಟೆ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಈಗಾಗಲೇ ಒಂದು ಕಡೇ ಟೋಲ್ ಸುಂಕ ಸಂಗ್ರಹ ಪ್ರಾರಂಭವಾಗಿದೆ. ಜೂನ್ 14ರಿಂದ ಎರಡನೇ ಟೋಲ್ ಬೂತ್ನಲ್ಲಿ ಟೋಲ್ ಸುಂಕ ಸಂಗ್ರಹ ಪ್ರಾರಂಭವಾಗಲಿದೆ.
ಡಾಬಸ್ಪೇಟೆ - ದೊಡ್ಡಬಳ್ಳಾಪುರ ಮಾರ್ಗ ಸಂಚಾರಕ್ಕೆ ಮುಕ್ತವಾದ ಬಳಿಕ ತುಮಕೂರು ರಸ್ತೆಯಿಂದ ಬೆಂಗಳೂರು ನಗರಕ್ಕೆ ಬರುವ ಭಾರೀ ವಾಹನಗಳ ಪ್ರಮಾಣ ತಗ್ಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಆದರೂ ಗುಂಜೂರು, ಮಾರಸಂದ್ರ ಈಗ ಹುಲಿಕುಂಟೆ ಸೇರಿದಂತೆ ದೊಡ್ಡಬಳ್ಳಾಪುರ ಸುತ್ತುವರಿಯುತ್ತಿರುವ ಟೋಲ್ ಕೇಂದ್ರಗಳು ತಾಲೂಕಿನ ಜನರ ಜೇಬಿಗೆ ಕತ್ತರಿಹಾಕಲಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
economy
crime
others
others
others
others
others
politics
others
sports
others
others
education
politics
economy
politics
sports
others
economy
others
others
crime
education
others
politics
crime
education
others
economy
others