ಬೆಂಗಳೂರು, (ಜೂ.11); ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಹತ್ಯೆ ಪ್ರಕರಣದ ಆರೋಪದಡಿ ಕನ್ನಡದ ಓರ್ವ ನಟನನ್ನ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.
ಜೂನ್ 9ರಂದು ಅಪರಿಚಿತ ಶವ ಪತ್ತೆಯಾಗಿತ್ತು. ಮೃತದೇಹದ ಮೇಲಿದ್ದ ಗಾಯಗಳನ್ನ ಗಮನಿಸಿ ಹತ್ಯೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ನಂತರ ತಾಂತ್ರಿಕ ಅಂಶಗಳ ಆಧಾರದಲ್ಲಿ ಮೃತನ ವಿವರ ಕಲೆಹಾಕಲಾಗಿತ್ತು.
ಮೃತ ವ್ಯಕ್ತಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (33 ವರ್ಷ) ಎಂಬುದು ತಿಳಿದು ಬಂದಿತ್ತು. ತನಿಖೆಯ ಕಾಲದಲ್ಲಿ ನಟ ಹಾಗೂ ಆತನ ಸಹಚರರ ಸಹಿತ 10 ಜನರನ್ನ ವಶಕ್ಕೆ ಪಡೆಯಲಾಗಿದೆ.
ಹತ್ಯೆಯಾದ ವ್ಯಕ್ತಿ ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ಮೆಸೇಜ್ಗಳನ್ನ ಕಳುಹಿಸುತ್ತಿದ್ದ ಎಂಬ ಪ್ರಾಥಮಿಕ ಮಾಹಿತಿ ದೊರೆತಿದೆ. ಹೆಚ್ಚಿನ ವಿಚಾರಣೆ ಮುಂದುವರೆದಿದೆ ಎಂದು ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.
ನಟ ದರ್ಶನ್, ವಿನಯ್, ಕಿರಣ್, ಮಧು, ಲಕ್ಷ್ಮಣ್, ಆನಂದ್, ರಾಘವೇಂದ್ರ ಸೇರಿದಂತೆ 10 ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಇದೀಗ ವಿಚಾರಣೆ ನಡೆಸಿದ್ದಾರೆ.
ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್, ಎಸಿಪಿ ಚಂದನ್ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದಾರೆ.
ಮತ್ತೊಂದೆಡೆ ಅನ್ನಪೂರ್ಣ ನಗರ ಠಾಣೆ ಪೊಲೀಸರು, ದರ್ಶಙ್ ಅಪ್ತೆ ಪವಿತ್ರ ಗೌಡ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
crime
politics
economy
economy
economy
crime
others
others
others
others
others
politics
others
sports
others
others
education
politics
economy
politics
sports
others
economy
others
others
crime
education
others
politics
crime