ದೊಡ್ಡಬಳ್ಳಾಪುರದ ಟಿಎಂಸಿ ಬ್ಯಾಂಕ್‌ಗೆ 40.66 ಲಕ್ಷ ರೂಗಳ ನಿವ್ಹಳ ಲಾಭ: ಮಗ್ಗದ ಮೇಲೆ ಸಾಲ ನೀಡುವ ಏಕೈಕ ಬ್ಯಾಂಕ್
ದೊಡ್ಡಬಳ್ಳಾಪುರದ ಟಿಎಂಸಿ ಬ್ಯಾಂಕ್‌ಗೆ 40.66 ಲಕ್ಷ ರೂಗಳ ನಿವ್ಹಳ ಲಾಭ: ಮಗ್ಗದ ಮೇಲೆ ಸಾಲ ನೀಡುವ ಏಕೈಕ ಬ್ಯಾಂಕ್

ದೊಡ್ಡಬಳ್ಳಾಪುರ, (ಜುಲೈ.22): ನಗರದ ಗಾಂಧಿನಗರದಲ್ಲಿರುವ ಟೆಕ್ಸ್‌ಟೈಲ್ ಮ್ಯಾನುಫ್ಯಾಕ್ಚರ್‍ಸ್ ಕೋ ಆಪರೇಟಿವ್ ಬ್ಯಾಂಕ್ ಲಿ.,ನ 60ನೇ ವಾರ್ಷಿಕ ಹಾಗೂ 2023-24 ನೇ ಸಾಲಿನ ಸರ್ವ ಸದಸ್ಯರ ಮಹಾಸಭೆ ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕ್‌ನ ಅಧ್ಯಕ್ಷ ಕೆ.ಪಿ.ವಾಸುದೇವ್ ಮಾತನಾಡಿ, ಟಿಎಂಸಿ ಬ್ಯಾಂಕ್ ಮಾರ್ಚ್ 2024ರ ಅಂತ್ಯಕ್ಕೆ 40.66 ಲಕ್ಷ ರೂಗಳ ನಿವ್ಹಳ ಲಾಭ ಗಳಿಸಿದ್ದು, ಬ್ಯಾಂಕ್ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದೆ.

ಟಿಎಂಸಿ ಬ್ಯಾಂಕ್ 60 ವರ್ಷಗಳನ್ನು ಪೂರೈಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಗ್ಗಗಳ ಮೇಲೆ ಸಾಲ ನೀಡುವಲ್ಲಿ ದೇಶದಲ್ಲಿಯೇ ನಮ್ಮದು ಏಕೈಕ ಬ್ಯಾಂಕ್ ನಮ್ಮದಾಗಿದ್ದು, ನೇಕಾರರಿಗೆ ಈಗ ಕಂಪ್ಯೂಟರ್ ಜಾಕಾರ್ಡ್ ಹಾಕಿಕೊಳ್ಳಲು ಸಾಲ ನೀಡಲಾಗುತ್ತಿದೆ. ಮಗ್ಗಗಳ  3 ಲಕ್ಷದಿಂದ ಮೇಲೆ 5 ಲಕ್ಷ ರೂವರೆಗೆ ಸಾಲ ನೀಡಲಾಗುತ್ತಿದೆ.

ಇದರೊಂದಿಗೆ ಶೈಕ್ಷಣಿಕ ಸಾಲ ಹೊರತುಪಡಿಸಿ  ಉದ್ಯೋಗಸ್ಥ ಮಹಿಳೆಯರಿಗೆ ಸಾಲ, ಬೆಳ್ಳಿ, ಚಿನ್ನದ ಸಾಲ, ವಾಹನಗಳ ಮೇಲಿನ ಸಾಲ ಸೇರಿದಂತೆ ನೀಡಲಾಗುವ ವಿವಿಧ ಸಾಲಸೌಲಭ್ಯ ನೀಡಲಾಗುತ್ತಿದೆ. ಬ್ಯಾಂಕ್‌ನ ಡಿಜಿಟಲೀಕರಣ ಮಾಡಲು ಒತ್ತು ನೀಡಲಾಗುತ್ತಿದ್ದು,  ನವೆಂಬರ್ ವೇಳೆಗೆ ಯುಪಿಐ ಪಾವತಿ, ಕೋರ್ ಬ್ಯಾಂಕಿಂಗ್ ಮೊದಲಾದ ಸೌಲಭ್ಯಗಳನ್ನು ನೀಡಲು ಪ್ರಯತ್ನಿಸಲಾಗುವುದು ಎಂದರು.

ಶೇ.10ರಷ್ಟು ಡಿವಿಡೆಂಡ್: ಮಾರ್ಚ್ 2024ರ ಪ್ರಗತಿಯಂತೆ ಶೇರು ಮೊತ್ತ 55.83ಲಕ್ಷ ರೂ. ಠೇವಣಿ ಮೊತ್ತ 13.84 ಕೋಟಿ ರೂ ದಾಟಿದ್ದು, 4.64 ಕೋಟಿ ರೂ ಸಾಲ ವಸೂಲಾತಿಯಾಗಿದೆ.

ಅನುತ್ಪಾದಕ ಆಸ್ತಿಗಳು ಈಗ ಶೇ.0.41ಕ್ಕೆ ಇಳಿಕೆಯಾಗಿದ್ದು, ಆಡಿಟ್ ವರದಿಯಲ್ಲಿ ಎ ಶ್ರೇಣಿ ಪಡೆದಿದೆ. ಶೇ.99.9ರಷ್ಟು ಸಾಲ ವಸೂಲಾಗುತ್ತಿದೆ. ಸದಸ್ಯರಿಗೆ  ಈ ಬಾರಿಯೂ ಶೇ.10ರಷ್ಟು ಡಿವಿಡೆಂಡ್ ನೀಡಲಾಗುತ್ತಿದೆ. ಸಹಕಾರ ಸಂಘಗಳ ನಿಯಮದಂತೆ ಸದಸ್ಯರು ಮತದಾನದ ಹಕ್ಕು ಪಡೆಬೇಕಾದರೆ, ಬ್ಯಾಂಕಿನಲ್ಲಿ ಕನಿಷ್ಟ 2500 ಠೇವಣಿ ಅಥವಾ, 500 ರೂಗಳ ಆರ್.ಡಿ ಖಾತೆ ಅಥವಾ ಉಳಿತಾಯ ಖಾತೆಯಲ್ಲಿ 12 ವ್ಯವಹಾರಗಳು ಮತ್ತು ಸರ್ವ ಸದಸ್ಯರ 5 ಸಭೆಗಳಲ್ಲಿ 2 ಕ್ಕೆ ಕಡ್ಡಾಯ ಭಾಗವಹಿಸುವಿಕೆ ಇದನ್ನು ಸದಸ್ಯರು ಪಾಲಿಸಬೇಕು. ಸದಸ್ಯರು ಹೆಚ್ಚಿನ ಹಣವನ್ನು ಬ್ಯಾಂಕ್‌ನ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬ್ಯಾಂಕ್ ಮತ್ತಷ್ಟು ಏಳಿಗೆಯಾಗುವಂತೆ ಸಹಕರಿಸುವಂತೆ ಮನವಿ ಮಾಡಿದರು.

ಕಾರ್‍ಯಕ್ರಮದಲ್ಲಿ ಬ್ಯಾಂಕ್‌ನ 60ನೇ ವಾರ್ಷಿಕೋತ್ಸವದ ಅಂಗವಾಗಿ 50 ವರ್ಷ ವೈವಾಹಿಕ ಜೀವನ ಪೂರೈಸಿರುವ ಬ್ಯಾಂಕಿನ ಸದಸ್ಯ ದಂಪತಿಗಳನ್ನು ಸನ್ಮಾನಿಸಲಾಯಿತು.  

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಸಭೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಜಿ.ಮಂಜುನಾಥ್, ನಿರ್ದೇಶಕರಾದ ಪಿ.ಸಿ.ವೆಂಕಟೇಶ್, ಎ.ಆರ್.ಶಿವಕುಮಾರ್, ಎ.ಎಸ್.ಕೇಶವ, ಕೆ.ಜಿ.ಗೋಪಾಲ್, ಡಿ.ಪ್ರಶಾಂತ್ ಕುಮಾರ್, ಬಿ.ಆರ್.ಉಮಾಕಾಂತ್, ನಾರಾಯಣ್.ಎನ್.ನಾಯ್ಡು, ಎ.ಗಿರಿಜಾ, ಡಾ.ಆರ್.ಇಂದಿರಾ, ವೃತ್ತಿಪರ ನಿರ್ದೇಶಕರಾದ ಎ.ಆರ್.ನಾಗರಾಜನ್, ಕೆ.ಎಂ.ಕೃಷ್ಣಮೂರ್ತಿ, ಪ್ರಭಾರಿ ವ್ಯವಸ್ಥಾಪಕರಾದ ಎ.ಎಸ್.ಪುಷ್ಪಲತಾ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others