ಅಪಘಾತ; ಹಿರಿಯ ಪತ್ರಕರ್ತನ ದುರ್ಮರಣ
ಅಪಘಾತ; ಹಿರಿಯ ಪತ್ರಕರ್ತನ ದುರ್ಮರಣ

ನಾಗಮಂಗಲ, (ಜುಲೈ .26): ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಿರಿಯ ಪತ್ರಕರ್ತ ಮೃತಪಟ್ಟ ಘಟನೆ ಪಟ್ಟಣದ ಹೊರವಲಯ ಚಾಮರಾಜನಗರ - ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯ ತೊಳಲಿ ಗ್ರಾಮದ ಸಮೀಪ ಶುಕ್ರವಾರ ಸಂಜೆ ನಡೆದಿದೆ.

ತಾಲೂಕಿನ ಕಸಬಾ ಹೋಬ ಳಿಯ ಬ್ಯಾಡರ ಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಸಿ.ಚಂದ್ರಪ್ಪ ಅವರ ಪುತ್ರ 49 ವರ್ಷದ ಮೋಹನ್ ಕುಮಾರ್ ಮೃತ ದುರ್ದೈವಿ.

ಬೆಳ್ಳೂರಿನಿಂದ ನಾಗಮಂಗಲಕ್ಕೆ ತಮ್ಮ ಕಾರಿನಲ್ಲಿ ಬರುವಾಗ ಮೈಸೂರಿನಿಂದ ಬೆಳ್ಳೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರು ಚಲಾಯಿಸುತ್ತಿದ್ದ ಬಿ.ಸಿ.ಮೋಹನ್ ಕುಮಾರ್ ತಲೆಗೆ ತೀವ್ರ ಪೆಟ್ಟು ಬಿದ್ದು, ಬಿ.ಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಯಿ ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಮೃತರು ತಾಯಿ, ಪತ್ನಿ ಹಾಗೂ ಸಹೋ ದರ, ಸಹೋದರಿ ಅಪಾರ ಬಂಧು ಗಳನ್ನು ಅಗಲಿದ್ದಾರೆ.

ಪತ್ರಿಕಾ ರಂಗದ ಸೇವೆ: ಮೃತರು ಪ್ರಜಾವಾಣಿ, ವಿಜಯವಾಣಿ, ಆಂದೋಲನ ಸೇರಿದಂತೆ ಹಲವು ದಿನಪತ್ರಿ ಕೆಗಳಲ್ಲಿ ಸೇವೆ ಕಾರ್ಯ ನಿರ್ವಹಿಸಿದ್ದರು. ನಾಗಮಂಗಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ತಾಲೂಕು ಹೇಮಾವತಿ ನೀರು ಬಳಕೆದಾರರ ಸಂಘದ ಅಧ್ಯಕ್ಷರಾಗಿದ್ದರು. ಕನ್ನಡಪರ ಹಲವು ಹೋರಾಟಗಳಲ್ಲಿ ಪಾಲ್ಗೊಂಡಿದ್ದರು.

ಇಂದು ಅಂತ್ಯಕ್ರಿಯೆ: ಮೃತರ ಹುಟ್ಟೂರಾದ ಬ್ಯಾಡರಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ 11.30ಕ್ಕೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime