ದೊಡ್ಡಬಳ್ಳಾಪುರ, (ಜ.24): ಕಾಂಗ್ರೆಸ್ ಪ್ರಜಾದ್ವನಿ ಸಮಾವೇಶದ ಪ್ರಚಾರಕ್ಕಾಗಿ ಪಾದಚಾರಿಗಳ ಮಾರ್ಗಕ್ಕೆ ಅಳವಡಿಸಿದ್ದ ಸಿಮೆಂಟ್ ಟೈಲ್ಸ್ ಗಳಿಗೆ ಹಾನಿ ಮಾಡಿರುವುದು ಸಾರ್ವನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯಲಿರುವ ಕಾಂಗ್ರೆಸ್ನ ಪ್ರಜಾಧ್ವನಿ ಯಾತ್ರೆಯ ಸಮಾವೇಶದ ಪೂರ್ವಸಿದ್ದತೆಗಳು ಭರದಿಂದ ಸಾಗುತ್ತಿವೆ.
ಪ್ರಜಾಧ್ವನಿ ಯಾತ್ರೆಯ ಸಮಾವೇಶಕ್ಕೆ ವಿಶಾಲವಾದ ಗಣ್ಯರ ವೇದಿಕೆ, ಕಾರ್ಯಕರ್ತರಿಗಾಗಿ 50 ಸಾವಿರ ಆಸನಗಳ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯ ವ್ಯವಸ್ಥೆ ಸೇರಿದಂತೆ ಇತರೆ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ.
ಆದರೆ. ಆಯೋಜಕರು ಪೊಲೀಸ್ ಇಲಾಖೆಯ ಮಾರ್ಗದರ್ಶನ ಪಾಲಿಸುತ್ತಿಲ್ಲ ಎಂಬ ಆರೋಪದ ಬೆನ್ನಲ್ಲೇ ಪ್ರಚಾರಕ್ಕಾಗಿ ಪಾದಚಾರಿಗಳ ಮಾರ್ಗಕ್ಕೆ ಅಳವಡಿಸಿದ್ದ ಸಿಮೆಂಟ್ ಟೈಲ್ಸ್ ಹಾನಿ ಮಾಡಿರುವುದು ಸಾರ್ಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳವಾರ ಬೆಳಗ್ಗೆಯಷ್ಟೆ ಕಿಡಿಗೇಡಿಗಳು ಸ್ವಾಗತ ಕೋರಲು ಅಳವಡಿಸಿದ್ದ ಬ್ಯಾನರ್ ಹರಿದಿದ್ದರು. ಇದರ ಕುರಿತು ವರದಿ ಮಾಸುವ ಮುನ್ನವೇ ಸಿಮೆಂಟ್ ಟೈಲ್ಸ್ ಹಾನಿ ಮಾಡುವ ಮೂಲಕ ಕಾಂಗ್ರೆಸ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
-->Latest News
others
others
economy
others
crime