ದೊಡ್ಡಬಳ್ಳಾಪುರ: ರಾವಣ ದಹನ ಕಣ್ತುಂಬಿಕೊಂಡ ಜನ
ದೊಡ್ಡಬಳ್ಳಾಪುರ: ರಾವಣ ದಹನ ಕಣ್ತುಂಬಿಕೊಂಡ ಜನ

ದೊಡ್ಡಬಳ್ಳಾಪುರ, (ಮಾ.27): ವಿಶ್ವಹಿಂದೂಪರಿಷತ್ ಬಜರಂಗದಳ ದೊಡ್ಡಬಳ್ಳಾಪುರ ಪ್ರಖಂಡವತಿಯಿಂದ ಆಯೋಜಿಸಲಾಗಿದ್ದ ಶ್ರೀರಾಮ ಶೋಭಾ ಯಾತ್ರೆ ಅಂಗವಾಗಿ ರಾವಣ ಪ್ರತಿಕೃತಿ ದಹನ ಮಾಡಲಾಯಿತು.

ಭಾನುವಾರ ಸಂಜೆ ಶೋಭಾಯಾತ್ರೆ ಮುಗಿದ ನಂತರ, ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿದ್ದ 25 ಅಡಿ ಎತ್ತರದ ರಾವಣ ಪ್ರತಿಕೃತಿಯನ್ನು ವಿಶ್ವಹಿಂದೂಪರಿಷತ್ ಬಜರಂಗದಳ ದೊಡ್ಡಬಳ್ಳಾಪುರ ಪ್ರಖಂಡದ ಕಾರ್ಯಕರ್ತರು ದಹಿಸಿದರು.

ಇದೇ ವೇಳೆ ಸಿಡಿಮದ್ದು ಪ್ರದರ್ಶನ ನಡೆಯಿತು. ಸಾವಿರಾರು ಜನ ಪಾಲ್ಗೊಂಡಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->