ಸಮಾವೇಶದಲ್ಲಿ ನಿಮ್ಮ ಸಮುದಾಯವ ರಕ್ಷಿಸಲ್ಲ ಅಂತಾರೇನು..?; ಸಿಎಂ ಪರ ದ್ವನಿ ಎತ್ತಿದ ಜಗದೀಶ್ ಶೆಟ್ಟರ್
ಸಮಾವೇಶದಲ್ಲಿ ನಿಮ್ಮ ಸಮುದಾಯವ ರಕ್ಷಿಸಲ್ಲ ಅಂತಾರೇನು..?; ಸಿಎಂ ಪರ ದ್ವನಿ ಎತ್ತಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ, (ಡಿ.06): ಮುಸ್ಲಿಂ ಸಮುದಾಯದ ಸಮಾವೇಶದಲ್ಲಿ ನಿಮ್ಮ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ, ಮಾಡಲ್ಲ ಅನ್ನೋಕ್ ಸಾಧ್ಯವೆ..? ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲವೆಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂತಹ ವಿಚಾರ ದೊಡ್ಡದು ಮಾಡುವಂತದ್ದಲ್ಲವೇ ಅಲ್ಲಾ. ನನಗೆ ಅರ್ಥನೇ ಆಗ್ತಿಲ್ಲ, ಅವರು ಹೇಳಿದ ಹೇಳಿಕೆ ನಾನು ನೋಡಿದ್ದೀನಿ. ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಹೇಳಿದ್ದಾರೆ. 

ಲಿಂಗಾಯತ ಸಮಾವೇಶ ಇರುತ್ತೆ, ಗಾಣಿಗರ ಸಮಾವೇಶ, ಎಸ್‌ಸಿ, ಎಸ್ಟಿ ಸಮಾವೇಶ ವಾಲ್ಮೀಕಿ ಸಮಾವೇಶಕ್ಕೆ ಹೋದಾಗ ನಿಮ್ಮ ಹಿತರಕ್ಷಣೆ ಮಾಡುತ್ತೀನಿ ಅಂತ ಹೇಳೋದು ಸಹಜ. ಇಲ್ಲ ನಿಮ್ಮ ಹಿತ ರಕ್ಷಣೆ ಮಾಡುವುದಿಲ್ಲ ಅಂತ ಹೇಳ್ತಾರೇನು? ಅದನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಅದನ್ನು ಬಿಟ್ಟು ಬಿಡಿ, ಸಿದ್ದರಾಮಯ್ಯ ಅವರೇ ಸಮರ್ಥರಿದ್ದಾರೆ. ಅವರೇ ಅದರಲ್ಲಿ ಉತ್ತರ ಕೊಡ್ತಾರೆ ಎಂದರು.

ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರ, ಅದರ ಬಗ್ಗೆ ಚರ್ಚೆ ಆಗಲೇಬೇಕು. ವಿರೋಧ ಪಕ್ಷದವರ ಮೇಲೆ ಕೂಡ ಸಾಕಷ್ಟು ಜವಾಬ್ದಾರಿ ಇದೆ, ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಪ್ರತಿಪಕ್ಷದವರು ದ್ವನಿ ಎತ್ತಿದರೆ ಖಂಡಿತವಾಗಿ ಚರ್ಚೆ ಆಗುತ್ತೆ. ಉತ್ತರ ಕರ್ನಾಟಕ ಅಭಿವೃದ್ಧಿ ಅಂತ ಬಂದರೆ ಮಹದಾಯಿ ಕಳಸ ಬಂಡೂರಿ ಸೇರಿ ಎಲ್ಲ ವಿಷಯಗಳು ಒಳಗೊಳ್ಳುತ್ತವೆ ಎಂದರು.

ರಾಜ್ಯಾಧ್ಯಕ್ಷ ನೇಮಕ ನಂತರ ಯತ್ನಾಳ್ ಅಸಮಾಧಾನ ವಿಚಾರ,ಅವರವರೇ ಅದರ ಬಗ್ಗೆ ಮಾತನಾಡಬೇಕು. ನಾನು ಅದರ ಬಗ್ಗೆ ಏನು ಮಾತನಾಡಲಿ? ನಾನು ಹಿಂದೆಯೂ ಸಾಕಷ್ಟು ಬಾರಿ ಹೇಳಿದ್ದೇನೆ. ಪದೇ ಪದೇ ಹೇಳುವುದರಲ್ಲಿ ಅರ್ಥವಿಲ್ಲ ಎಂದು  ಜಗದೀಶ್ ಶೆಟ್ಟರ್ ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics