ರಾಜ್ಯ ಸರ್ಕಾರದಿಂದ ರೈತರಿಗೆ ರೂ 628 ಕೋಟಿ ಅನುದಾನ ಬಿಡುಗಡೆ.. ಶ್ರೀಮಂತರ ಸಾಲ ಮನ್ನಾ ಬಿಟ್ಟಿ ಭಾಗ್ಯವಲ್ಲವೆ.? ಎಂದು ಕೃಷ್ಣ ಬೈರೇಗೌಡ ತಿರುಗೇಟು
ರಾಜ್ಯ ಸರ್ಕಾರದಿಂದ ರೈತರಿಗೆ ರೂ 628 ಕೋಟಿ ಅನುದಾನ ಬಿಡುಗಡೆ.. ಶ್ರೀಮಂತರ ಸಾಲ ಮನ್ನಾ ಬಿಟ್ಟಿ ಭಾಗ್ಯವಲ್ಲವೆ.? ಎಂದು ಕೃಷ್ಣ ಬೈರೇಗೌಡ ತಿರುಗೇಟು

ಬೆಂಗಳೂರು, (ಫೆ.11): ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ ರೂ 2000 ಕೋಟಿ ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ರೂ 628 ಕೋಟಿ ಹಣವನ್ನು ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಡನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗಳಿಗೂ ಬರ ಪರಿಹಾರದ ಹಣವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು ಎಂದರು. 

ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಯೋಜನೆ ಎನ್ನುವ ಕುರಿತು ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಶ್ರೀಮಂತರು ಕಟ್ಟ ಬೇಕಾದ ರೂ.1.75 ಲಕ್ಷ ಕೋಟಿಯಷ್ಟು ಸಾಲವನ್ನು ಕೇಂದ್ರ ಬಿಜೆಪಿ ಸರ್ಕಾರ ಪ್ರತಿ ವರ್ಷ ಮನ್ನಾ ಮಾಡುತ್ತಿದೆ. ಇದೂ ಕೂಡ ಬಿಟ್ಟಿ ಭಾಗ್ಯವಲ್ಲವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

'ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಈವರೆಗೆ ಅಂಬಾನಿ, ಅದಾನಿಯಂತಹ ಕೆಲವೇ ಮಂದಿ ಶ್ರೀಮಂತರ ರೂ.20 ಲಕ್ಷ ಕೋಟಿಯಷ್ಟು ಸಾಲವನ್ನು ಮನ್ನಾ ಮಾಡಲಾಗಿದೆ. ಇದು ಯಾವ ಭಾಗ್ಯ ಎಂಬುದನ್ನು ಬಿಜೆಪಿ ನಾಯಕರು ಹೇಳಬೇಕು' ಎಂದರು.

ದೊಡ್ಡ ಶ್ರೀಮಂತರಿಗೆ ಸಾಲ ಮನ್ನಾದ ಜತೆಗೆ ತೆರಿಗೆ ವಿನಾಯ್ತಿಗಳನ್ನೂ ಕೇಂದ್ರ ಸರ್ಕಾರ ನೀಡುತ್ತಿದೆ. ಆ ಹೊರೆಯನ್ನು ಹೊಸ ತೆರಿಗೆಗಳ ರೂಪದಲ್ಲಿ ಬಡವರ ಮೇಲೆ ಹೇರಲಾಗುತ್ತಿದೆ. ಇದರಿಂದ ಬಡವರು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ನಿಲ್ಲುವುದಕ್ಕಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಬಡವರ ಮೇಲಿನ ದ್ವೇಷದಿಂದ ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳನ್ನೂ ಟೀಕಿಸುತ್ತಿದ್ದಾರೆ ಎಂದು ದೂರಿದರು.

ಗ್ಯಾರಂಟಿ ಯೋಜನೆ ಎಂಬ ಪರಿಕಲ್ಪನೆ ಜನ್ಮ ತಳೆದಿರುವುದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿಯವರು ಗ್ಯಾರಂಟಿ ಪರಿಕಲ್ಪನೆಯನ್ನು ಕದ್ದು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ಹಾಗೂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಬರ ಪರಿಹಾರ ಬಿಡುಗಡೆ ಮಾಡಿರುವ ರೈತ ಪಟ್ಟಿಯನ್ನು ಪ್ರಕಟ ಮಾಡಬೇಕು ಎಂದು ಸೂಚನೆ ನೀಡಿರುವ ಹಿನ್ನೆಲೆ, ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಿಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ  ರೈತರ ಹೆಸರು ಬಿಟ್ಟು ಹೋಗಿದ್ದಲ್ಲಿ, ಅಂತಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ ಭೇಟಿ ನೀಡಿ, ಹೆಸರು ಸೇರ್ಪಡಿಕೊಳ್ಳಬೇಕು ಎಂದು ಸಚಿವರು ರೈತರಲ್ಲಿ ಕೋರಿದರು. 

ರಾಜ್ಯ ಸರ್ಕಾರವು ರಾಜ್ಯದ 223 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿದ್ದು, ಕುಡಿಯುವ ನೀರು, ಮೇವು ಹಾಗೂ ಇತರೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ, ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಗಳ ಖಾತೆಗಳಿಗೆ ರೂ 870 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಪರಿಹಾರದ ಹಣವನ್ನು ಸಮರ್ಪಕವಾಗಿ ಬಳಸಲು, ಶಾಸಕರ  ಅಧ್ಯಕ್ಷತೆಯಲ್ಲಿ 223 ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದ್ದು, ರಾಜ್ಯಾದ್ಯಂತ ಇಲ್ಲಿಯವರೆಗೆ, 431 ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಲಾಗಿದೆ ಎಂದ ಕಂದಾಯ ಸಚಿವರು, ಜಿಲ್ಲಾ ಮಟ್ಟದಲ್ಲಿ 236 ಟಾಸ್ಕ್ ಫೋರ್ಸ್ ಸಮಿತಿಯ ಸಭೆಗಳು ನಡೆದಿದೆ ಎಂದು ಹೇಳಿದರು. 

ರಾಜ್ಯದ 156 ಹಳ್ಳಿಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ಬಾಡಿಗೆ ಆಧಾರದಮೇಲೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಅಲ್ಲದೇ 46 ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದಲ್ಲಿನ 46 ವಾರ್ಡ್ ಗಳಲ್ಲಿ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಕಳೆದ ಐದು ವರ್ಷದ ಅಂಕಿಅಂಶಗಳ ಆಧಾರದಮೇಲೆ, ಮುಂಜಾಗ್ರತಾ ಕ್ರಮವಾಗಿ, ಮುಂಬರುವ ದಿನಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ 782 ಗ್ರಾಮಗಳು ಹಾಗೂ 1193 ವಾರ್ಡ್ ಗಳನ್ನು ಗುರುತಿಸಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಸಹ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕ್ರಮವನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ಸಮಸ್ಯೆಯ ನಿರ್ವಹಣೆಗೆ ಹೊಸ ಕೊಳವೆ ಬಾವಿಗಳ ಕೊರೆಯುವ ಅವಶ್ಯಕತೆ ಇದ್ದಲ್ಲಿ, ಕೊಳವೆ ಬಾವಿಗಳನ್ನು ಕೊರೆಯಲು ಕ್ರಮವಹಿಸುವಂತೆ ಮುಖ್ಯಮಂತ್ರಿಯವರು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಮೇವಿನ ಸಮಸ್ಯೆ ನೀಗಿಸಲು 2023ರ ನವೆಂಬರ್ ತಿಂಗಳಲ್ಲಿ ಮೊದಲ ಹಂತದ ಕ್ರಮವಾಗಿ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ಗಳನ್ನು ರೈತರಿಗೆ ನೀಡಲಾಗಿದ್ದು, ಎರಡನೇ ಹಂತವಾಗಿ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ಗಳನ್ನು ರೈತರಿಗೆ ವಿತರಿಸಲು ಪಶುಸಂಗೋಪನೆ ಇಲಾಖೆಗೆ ಹಣವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ ವಿವಿಧೆಡೆ 3 ಗೂಶಾಲೆಗಳನ್ನು‌ ಸ್ಥಾಪಿಸಲಾಗಿದ್ದು, ಇದರ ಜೊತೆಗೆ ಮೇವಿನ ದಾಸ್ತಾನಿಗೆ ಹಲವು ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ  ಕೈಗೊಂಡಿದೆ ಎಂದು ಹೇಳಿದರು.

ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ರೂ 18,178 ಕೋಟಿ ಬರ ಪರಿಹಾರ ಅನುದಾನವನ್ನು ಬಿಡುಗಡೆ ಮಾಡಲು ಮನವಿಯನ್ನು ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಯವರು ಸಹ ಪ್ರಧಾನಮಂತ್ರಿಯವರನ್ನು ಖುದ್ದು ಭೇಟಿಯಾಗಿ ಬರ ಪರಿಹಾರದ ಅನುದಾನ ಬಿಡುಗಡೆಗೆ ಮಾಡಲು ಮನವಿ ಮಾಡಿದ್ದಾರೆ. 

ಕೇಂದ್ರ ಗೃಹ ಸಚಿವರನ್ನು ಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯ ಸರ್ಕಾರದ ಹಲವು ಸಚಿವರು ಖುದ್ದು ಭೇಟಿ ಮಾಡಿ, ಬರ ಪರಿಹಾರ ನೀಡಲು ಮನವಿಯನ್ನು ಮಾಡಿದ್ದಾರೆ. ಈಗಾಗಲೇ ಬರ ಪರಿಹಾರಕ್ಕೆ ಮನವಿಯನ್ನು ಸಲ್ಲಿಸಿ ನಾಲ್ಕು ತಿಂಗಳು ಕಳೆದಿದ್ದು, ಕೇಂದ್ರ ಗೃಹ ಸಚಿವರು ರಾಜ್ಯ ಪ್ರವಾಸದಲ್ಲಿರುವ, ಈ ಸಂದರ್ಭದಲ್ಲಿ, ಬರ ಪರಿಹಾರ ಘೋಷಿಸಿದರೆ ರಾಜ್ಯದ ರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics

HL

crime

HL

education

HL

others

HL

economy