ಮೋದಿ ಪ್ರಧಾನಿಯಾಗಲು ಯಾರ್ ಯಾರೋ ಅಲ್ಲ.. ನನ್ನಂತ ಹಿಂದುತ್ವವಾದಿ ಕೈ ಎತ್ತಬೇಕು: ಕೆ.ಎಸ್.ಈಶ್ವರಪ್ಪ
ಮೋದಿ ಪ್ರಧಾನಿಯಾಗಲು ಯಾರ್ ಯಾರೋ ಅಲ್ಲ.. ನನ್ನಂತ ಹಿಂದುತ್ವವಾದಿ ಕೈ ಎತ್ತಬೇಕು: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, (ಏ.02): ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕಾದರೆ ಯಾರ್ಯಾರೋ ಹೋಗಿ ಕೈ ಎತ್ತಬಾರದು. ನಮ್ಮಂತಹ ಪ್ರಖರ ಹಿಂದುತ್ವವಾದಿ ಕೈ ಎತ್ತಬೇಕು ಎಂದು ಕೆ.ಎಸ್.ಈಶ್ವರಪ್ಪ  ಹೇಳಿದರು.

ಸೋಮವಾರ ಮಾತನಾಡಿದ ಅವರು, ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಬೇಕಾದರೆ ಯಾರ್ಯಾರೋ ಹೋಗಿ ಕೈ ಎತ್ತಬಾರದು. ಹೀಗಾಗಿ ಈ ನಾನು ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಯಾವ ದೇವರ ಮೇಲೆ ಬೇಕಾದರೂ ಪ್ರಮಾಣ ಮಾಡಲು ಸಿದ್ಧನಿದ್ದೇನೆ ಎಂದರು.

ಈಗಾಗಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಸೋಲಿನ ಭಯ ಆವರಿಸಿದೆ. ಆದ್ದರಿಂದಲೇ ನಾನು ಚುನಾವಣೆಯಿಂದ ಹಿಂದೆ ಸರಿಯುತ್ತೇನೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. 

ಇನ್ನು ಕೆಲವರು ಏ.12ರ ನಾಮಪತ್ರ ಸಲ್ಲಿಕೆ ನಂತರ ನಿಮ್ಮ ಜೊತೆ ಬರುತ್ತೇವೆ ಎಂದು ಹೇಳಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಾದ್ಯಂತ ಉತ್ತಮ ಸ್ಪಂದನೆ ಸಿಗುತ್ತದೆ. ಹಿಂದುತ್ವ ಪ್ರತಿಪಾದಕರು, ಸಂಘ ಪರಿವಾರದ ಪ್ರಮುಖರು, ಬಿಜೆಪಿ ಪ್ರಮುಖರು ನನ್ನ ಜೊತೆ ನಿಂತಿದ್ದಾರೆ ಎಂದರು.

ಬಿಜೆಪಿ ನನ್ನ ತಾಯಿ ಇದ್ದಂತೆ. ಕೆಲವರು ಕೆಜೆಪಿಗೆ ಹೋಗಿ ಬಂದಿದ್ದಾರೆ. ನಾನು ಎಂತಹ ಸಂಕಷ್ಟ ಸಂದರ್ಭದಲ್ಲೂ ಬಿಜೆಪಿಯನ್ನು ತೊರೆದಿಲ್ಲ. ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಅಭಿವೃದ್ಧಿಯನ್ನು ಯಾವ ರೀತಿ ಮಾಡಬಹುದು ಎಂದು ತೋರಿಸಿ ಕೊಟ್ಟಿದ್ದೇನೆ. 

ಈಗ ಲೋಕಸಭಾ ಚುನಾವಣೆಯಲ್ಲಿ ರಾಘವೇಂದ್ರ ಹಾಗೂ ಕಾಂಗ್ರೆಸ್‌ನವರು ಸುಳ್ಳು ಭರವಸೆಯ ಪ್ರಣಾಳಿಕೆಯನ್ನು ಜನರ ಎದುರಿಗೆ ಇರಿಸುತ್ತಿದ್ದಾರೆ. ಆದರೆ ನಾನು ಪ್ರಣಾಳಿಕೆ ಇರಿಸುವುದಿಲ್ಲ. ಬದಲಾಗಿ ಗೆದ್ದು ಬಂದ ನಂತರ ಅಭಿವೃದ್ಧಿ ಹೇಗೆ ಮಾಡಬಹುದು ಎನ್ನುವುದನ್ನು ತೋರಿಸಿ ಕೊಡುತ್ತೇನೆ ಎಂದು ಹೇಳಿದರು.

ಏ.12ಕ್ಕೆ ದೊಡ್ಡ ಪ್ರಮಾಣದಲ್ಲಿ ಅಭಿಮಾನಿಗಳು, ಕಾರ್ಯಕರ್ತರನ್ನು ಸೇರಿಸಿ ರಾಮಣ್ಣ ಶ್ರೇಷ್ಟಿ ಪಾರ್ಕಿನಿಂದ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸುತ್ತೇವೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics

HL

crime

HL

education

HL

others

HL

economy

HL

others