ಬೆಳಗಾವಿಯಲ್ಲಿಂದು ಅಬ್ಬರಿಸಿದ ಪ್ರಧಾನಿ ಮೋದಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ| ವಿಡಿಯೋ ನೋಡಿ
ಬೆಳಗಾವಿಯಲ್ಲಿಂದು ಅಬ್ಬರಿಸಿದ ಪ್ರಧಾನಿ ಮೋದಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ| ವಿಡಿಯೋ ನೋಡಿ

ಬೆಳಗಾವಿ, (ಏ.28); ನಗರದ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಭಾಗಿಯಾದ ಮೋದಿ, ಕನ್ನಡದಲ್ಲಿ ಭಾಷಣ ಆರಂಭಿಸಿದರು.

ತಾಯಿ ಭುವನೇಶ್ಚರಿ, ಸವದತ್ತಿ ಯಲ್ಲಮ್ಮ ದೇವಿ ಸ್ಮರಿಸಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಬೆಳಗಾವಿ ಮತದಾರರಿಗೆ ಅಭಿನಂದನೆ ಸಲ್ಲಿಸಿದರು. ನಾನು ರಾಜ್ಯದ ಯಾವುದೇ ಮೂಲೆಗೆ ಹೋದರು, ಪಿರ್ ಏಕ್ ಬಾರ್ ಮೋದಿ ಘೋಷಣೆ ಕೇಳುತ್ತೇನೆ. ನಾವು ಛತ್ರಪತಿ ಶಿವಾಜಿ ಮಹರಾಜ ಮತ್ತು ಜಗಜ್ಯೋತಿ ಬಸವೇಶ್ವರರ ಅನುಯಾಯಿಗಳು ಎಂದರು.

ನಾನು ನಿಮ್ಮ ಸೇವಕ. ಮಹಿಳೆಯರು, ಯುವಕರನ್ನು ಸಶಕ್ತ ಮಾಡುವ ಮೂಲಕ ದೇಶ ಅಭಿವೃದ್ಧಿ ಮಾಡುತ್ತಿದ್ದಾನೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ನಿಮ್ಮ ಆಸ್ತಿ, ಖಜಾನೆ, ಮಹಿಳೆಯರ ಬಳಿ ಎಷ್ಟು ಹಣ ಇದೆ, ಬಂಗಾರ ಎಷ್ಟಿದೆ, ಮಂಗಳ ಸೂತ್ರ ಎಲ್ಲಿದೆ ಅಂತ ತಪಾಸಣೆ ಮಾಡುತ್ತದೆ. 

ಕಾಂಗ್ರೆಸ್ ನಿಮ್ಮ ಆಸ್ತಿಯನ್ನು ಹಂಚಲು ಹೊರಟಿದೆ. ನಿಮ್ಮ ಮಂಗಳ ಸೂತ್ರದ ಮೇಲೆ ಕೈ ಹಾಕಲು ಬಿಡುತ್ತೀರಾ? ನಿಮ್ಮ ಹಣ, ಬಂಗಾರ ಮತ್ತು ಆಸ್ತಿಯನ್ನು ಲೂಟಿ ಮಾಡಲು ಬಿಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕರ್ತರನ್ನು ಮತದಾರರನ್ನು ಪ್ರಶ್ನಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಅಪಮಾನ ಮಾಡಲಾಯಿತು. ಚಿಕ್ಕೋಡಿಯಲ್ಲಿ ಜೈನ ಮುನಿಯ ಹತ್ಯೆಯಾಯಿತು. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯಾಯಿತು. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಂಡಿತು. ಈ ಸ್ಫೋಟವನ್ನು ಕಾಂಗ್ರೆಸ್ ಸಿಲೆಂಡ‌ರ್ ಬ್ಲಾಸ್ಟ್ ಎಂದಿತು.

ಕಾಂಗ್ರೆಸ್ ಮತಕ್ಕಾಗಿ ತುಷ್ಟಿಕರಣ ರಾಜಕೀಯ ಮಾಡುತ್ತಿದೆ. ಇದರಿಂದ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಬರಬಾದ್ ಆಗಲಿದೆ. ದೇಶವಿರೋಧಿ ಪಿಎಫ್‌ಐ ಸಂಘಟನೆ ಕಾಂಗ್ರೆಸ್‌ಗೆ ಬೆಂಬಲ ನೀಡಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರನ್ನು ಹಾಳು ಮಾಡಿದೆ. ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತುಷ್ಟಿಕರಣ ಮಾಡುತ್ತಿದೆ. ಕಾಂಗ್ರೆಸ್ ದೇಶದ ರಾಜ-ಮಹರಾಜರಿಗೆ ಅಪಮಾನ ಮಾಡುತ್ತಿದೆ. ಔರಂಗಜೇಬನನ್ನು ಗುಣಗಾನ ಮಾಡುವ ಪಕ್ಷದೊಂದಿಗೆ ಕಾಂಗ್ರೆಸ್ ಘಟಬಂದನ್ ಮಾಡಿಕೊಂಡಿದೆ.

ದೇಶದ ರಾಜ - ಮಹಾರಜರ ಕೊಡುಗೆ ಕಾಂಗ್ರೆಸ್‌ಗೆ ನೆನಪಾಗುವುದಿಲ್ಲವೇ? ನವಾಬರ್, ಸುಲ್ತಾನರ ವಿರುದ್ಧ ಒಂದೇ ಒಂದು ಶಬ್ದ ಆಡುವ ತಾಕತ್ತು ಕಾಂಗ್ರೆಸ್‌ಗೆ ಇಲ್ಲ. ಮತಕ್ಕಾಗಿ ತುಷೀಕರಣ ರಾಜಕೀಯ ಮಾಡುತ್ತಿದೆ. 

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಕುಂಟಿತವಾಗುತ್ತದೆ. ಕರ್ನಾಟಕದಲ್ಲಿ ಇದೇ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಸ್ತೆ ನಿರ್ಮಾಣ, ವಿದ್ಯುತ್ ಸಮಸ್ಯೆ ಉದ್ಯೋಗ ಸಮ್ಯಸ್ಯೆ ಉದ್ಭವಿಸಿದೆ. ಹೀಗಾಗಿ ಎಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಆ ದೇಶ ಅಥವಾ ರಾಜ್ಯ ಬರಬಾದ್ ಆಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಸುಳ್ಳು ಹೇಳುತ್ತಾ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಮಹತ್ವದ ವಿಚಾರಗಳ ಬಗ್ಗೆ ಸುಳ್ಳು ಹೇಳುತ್ತಾ ದೇಶದ ಲೋಕತಂತ್ರವನ್ನು ಹಾಳು ಮಾಡುತ್ತಿದೆ ಎಂದು ಜನರು ಹೇಳುತ್ತಿದ್ದಾರೆ. ಕಾಂಗ್ರೆಸಿಗರು ಮಾನಸಿಕವಾಗಿ ಆಂಗ್ಲರ ಗುಲಾಮಿತನ ಭಾವದಿಂದ ಜೀವಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ವಾಗ್ದಾಳಿ ಮಾಡಿದರು.

ಭಾರತ ಅಭಿವೃದ್ಧಿ ಹೊಂದುತ್ತಿದರೇ, ಪ್ರತಿ ಭಾರತೀಯನು ಸಂತೋಷ ಪಡುತ್ತಾನೆ. ಆದರೆ ಕಾಂಗ್ರೆಸ್ ಎಂದೂ ಸಂತಸ ಪಡುವುದಿಲ್ಲ. ಕಾಂಗ್ರೆಸ್ ಕೊರೊನಾ ವ್ಯಾಕ್ಸಿನ್ ಅನ್ನು ವಿರೋಧ ಮಾಡುತ್ತಿದೆ. ಬಿಜೆಪಿ ವ್ಯಾಕ್ಸಿನ್ ಅಂತ ಹೇಳಿತು. ಭಾರತದ ಸಫಲತೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ.

ದೇಶದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತದಾನ ಮಾಡಿ. ಬೆಳಗಾವಿ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹಾಗೂ ಚಿಕ್ಕೋಡಿ ಅಭ್ಯರ್ಥಿ ಅಣ್ಣಾಸಾಹೆಬ್ ಜೊಲ್ಲೆ ಅವರಿಗೆ ಮತ ನೀಡಿ. ಅಧಿಕ ಮತದಾನ ಮಾಡಿ. ಬೆಳಿಗ್ಗೆ 10 ಗಂಟೆಯೊಳಗೆ ಎಲ್ಲರೂ ಮತದಾನ ಮಾಡಲು ಹೋಗಿ ಎಂದು ಜನರಿಗೆ ಮನವಿ ಮಾಡಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

crime

HL

politics

HL

literature

HL

literature

HL

literature

HL

education

HL

education

HL

crime

HL

politics

HL

crime

HL

health

HL

agriculture

HL

politics

HL

literature

HL

literature

HL

literature

HL

literature

HL

politics

HL

politics

HL

crime

HL

politics

HL

crime

HL

literature

HL

crime

HL

literature

HL

literature

HL

crime

HL

crime

HL

politics