ಉತ್ತರಾಖಂಡ, (ಏ.29): ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ರಯಾಣಿಕನೋರ್ವ ಜಾರಿ ಬಿದ್ದಿದ್ದು ತಕ್ಷಣ ಅಲ್ಲೇ ಇದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಆತನನ್ನು ರಕ್ಷಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದು, ವ್ಯಾಪಕ ಪ್ರಶಂಸೆಗೆ ಕಾರಣರಾಗಿದ್ದಾರೆ.
ಉತ್ತರಾಖಂಡದ ಲಸ್ಕರ್ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೋಲ್ಕತ್ತಾ-ಜಮ್ಮುಟವಿ ಎಕ್ಸ್ಪ್ರೆಸ್ ರೈಲಿಗೆ ಹತ್ತಲು ತೆರಳುತ್ತಿದ್ದ ವ್ಯಕ್ತಿ ಫ್ಲಾಟ್ಫಾರ್ಮ್ ಮತ್ತು ರೈಲಿನ ನಡುವಿನ ಸಂದಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ಜಿಆರ್ಪಿ ಕಾನ್ಸ್ಟೇಬಲ್ ಉಮಾ, ಆಪದ್ಭಾಂಧವರಂತೆ ಬಂದು ಆತನನ್ನು ರಕ್ಷಿಸಿದ್ದಾರೆ.
ರೈಲ್ವೆ ಫ್ಲಾಟ್ ಫಾರ್ಮ್ ನಲ್ಲಿ ತಿಂಡಿಯನ್ನು ತೆಗೆದುಕೊಳ್ಳೋಕೆ ಆ ವ್ಯಕ್ತಿ ರೈಲಿನಿಂದ ಇಳಿದಿದ್ದು, ತಕ್ಷಣ ರೈಲು ಹೊರಡುತ್ತಿದ್ದನ್ನು ಗಮನಿಸಿದ ಆತ ಓಡಿ ಹೋಗಿ ಹತ್ತಿದ್ದಾನೆ ಎನ್ನಲಾಗಿದೆ.
ಕೈನಲ್ಲಿ ಆಹಾರ ಪೊಟ್ಟಣಗಳು ಇದ್ದ ಕಾರಣ ಆತನಿಗೆ ಸುಲಭವಾಗಿ ಹತ್ತಲು ಸಾಧ್ಯವಾಗಿಲ್ಲ. ಹೀಗಾಗಿ ಆಯ ತಪ್ಪಿ ಕೆಳಗೆ ಬಿದ್ದಿದ್ದಾನೆ.
ಸದ್ಯ ಮಹಿಳಾ ಪೊಲೀಸ್ ಕರ್ತವ್ಯ ಪ್ರಜ್ಞೆಯಿಂದಾಗಿ ವ್ಯಕ್ತಿ ಸುರಕ್ಷಿತವಾಗಿದ್ದು, ಆಕೆಯ ದೈರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
crime
education
literature
crime
politics
art
literature
literature
crime
politics
economy
art
politics
politics
economy
crime
crime
politics
education
literature
literature
education
crime
politics
education
politics
crime
literature
politics
crime