ದೊಡ್ಡಬಳ್ಳಾಪುರ, (ಏ.29): ಗುಂಜೂರು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎನ್.ಬೈರೇಗೌಡ (58 ವರ್ಷ) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ತಾಲೂಕಿನ ದೊಡ್ಡಹೆಜ್ಜಾಜಿ ಮೂಲದ ಬೈರೇಗೌಡ ಅವರು ದೊಡ್ಡಬಳ್ಳಾಪುರದಲ್ಲಿ ವಾಸವಿದ್ದು, ಗುಂಜೂರು ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಕಳೆದ ಒಂದು ವಾರದ ಹಿಂದೆ ಬೈರೇಗೌಡ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದು, ಸ್ವಗ್ರಾಮ ದೊಡ್ಡಹೆಜ್ಜಾಜಿಯಲ್ಲಿ ಇಂದು ಸಂಜೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಮೃತ ಕಣ್ಣುಗಳನ್ನು ದಾನ ಮಾಡುವ ಮೂಲಕ ಕುಟುಂಬಸ್ಥರು, ಶಿಕ್ಷಕ ಬೈರೇಗೌಡ ಅವರ ಸಾವಿನ ನೋವಲ್ಲು ಸಾರ್ಥಕತೆ ಮೆರೆದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
politics
others
literature
crime
crime
politics
politics
politics
politics
education
crime
crime
education
literature
crime
politics
art
literature
literature
crime
politics
economy
art
politics
politics
economy
crime
crime
politics
education