ಮಳೆಗಾಗಿ ಪ್ರಾರ್ಥಿಸಿ ದೊಡ್ಡಬಳ್ಳಾಪುರದಲ್ಲಿ ಸಾಮೂಹಿಕ ನಮಾಜ್..!
ಮಳೆಗಾಗಿ ಪ್ರಾರ್ಥಿಸಿ ದೊಡ್ಡಬಳ್ಳಾಪುರದಲ್ಲಿ ಸಾಮೂಹಿಕ ನಮಾಜ್..!

ದೊಡ್ಡಬಳ್ಳಾಪುರ, (ಮೇ.03); ಮುಂಗಾರು ಪ್ರಾರಂಭವಾಗಿ ತಿಂಗಳು ಕಳೆದಿದ್ದರೂ ತಾಲೂಕಿನಲ್ಲಿ ಮಳೆ ಬಾರದೇ ಇರುವುದರಿಂದ  ನಗರದ ಹೊಸ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಮಳೆಗಾಗಿ ಪ್ರಾರ್ಥಿಸಿ ಸಾಮೂಹಿಕ ನಮಾಜ್ ಸಲ್ಲಿಸಿ, ಮಳೆ ಬರುವಂತೆ ಪ್ರಾರ್ಥನೆ ಮಾಡಿದರು.

ಮುಸ್ಲಿಂ ಯೂತ್ ಅಸೋಸಿಯೇಷನ್ ವತಿಯಿಂದ ಈ ಸಾಮೂಹಿಕ ನಮಾಜ್ ಆಯೋಜನೆ ಮಾಡಲಾಗಿದ್ದು, ಈ ಕುರಿತು ಮಾಹಿತಿ ನೀಡಿರುವ ಮುಸ್ಲಿಂ ಸಮುದಾಯದ ಮುಖಂಡರು, ಮಳೆಗಾಲ ಆರಂಭವಾಗಿ ತಿಂಗಳು ಮುಗಿಯುತ್ತಿದ್ದರೂ ತಾಲೂಕಿನಲ್ಲಿ ಉತ್ತಮ ಮಳೆಯಾಗದೇ ಇರುವುದರಿಂದ ಕೆರೆ, ಹಳ್ಳ, ಕೊಳ್ಳಗಳು ಬತ್ತಿ ಹೋಗಿದ್ದು, ಜಾನುವಾರುಗಳಿಗೆ ನೀರು, ಮೇವು ದೊರಕುತ್ತಿಲ್ಲ.

ಅಲ್ಲದೆ ರಾಜ್ಯದಲ್ಲಿ ಕಾಡುತ್ತಿರುವ ಬರದಿಂದಾಗಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತಮವಾದ ಮಳೆ ಕರುಣಿಸುವಂತೆ ದೇವರನ್ನು ಪ್ರಾರ್ಥಿಸಲಾಗಿದೆ ಎಂದರು.

ನಮಾಜ್ ನಲ್ಲಿ ಸುಮಾರು 700 ಹೆಚ್ಚು ಮಂದಿ ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

politics

HL

crime

HL

others

HL

others

HL

others

HL

politics

HL

crime

HL

politics

HL

politics

HL

crime

HL

politics

HL

crime

HL

crime

HL

literature

HL

crime

HL

crime

HL

politics

HL

literature

HL

politics

HL

others

HL

literature

HL

crime

HL

crime

HL

politics

HL

politics

HL

politics

HL

politics

HL

education

HL

crime

HL

crime