ಮೈಸೂರು, (ಮೇ.03); ಅಶ್ಲೀಲ ವಿಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಸಿಲುಕಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ವಿರುದ್ಧ ಈಗ ಅಪಹರಣದ ಆರೋಪ ಕೂಡ ಕೇಳಿ ಬಂದಿದ್ದು ಮತ್ತೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ಮನೆಯ ಕೆಲಸದವಳನ್ನು ಅಪಹರಣ ಮಾಡಿರುವ ಆರೋಪದ ಮೇಲೆ ಕೇಸ್ ದಾಖಲಿಸಲಾಗಿದ್ದು ಈ ಹಿನ್ನೆಲೆ ಸಿಟಿ ಸಿವಿಲ್ ಕೋರ್ಟ್ನಲ್ಲಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಇದೇ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಸಂಬಂಧಿ, ಆರೋಪಿ ಸತೀಶ್ ಬಾಬು ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ,
ಮೈಸೂರಿನಲ್ಲಿ ತಾಯಿ ಕಿಡ್ನಾಪ್ ಬಗ್ಗೆ ಪುತ್ರ ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೆ. ಆರ್ ನಗರತಾಲೂಕು ನ್ಯಾಯಾಲಯ ಆದೇಶ ನೀಡಿದೆ. ಆರೋಪಿ ಸತೀಶ್ ಬಾಬುಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಹೇಳಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ವಿವಾದದಲ್ಲಿ ತನ್ನ ತಾಯಿಯ ಚಿತ್ರವೂ ಇದೆ. ವಿಡಿಯೋ ಬಹಿರಂಗದ ಬಳಿಕ ಸತೀಶ್ ಬಾಬು ಎಂಬವರು ರೇವಣ್ಣ ಕರೆಯುತ್ತಿದ್ದಾರೆ ಎಂದು ಅವರನ್ನು ಕರೆದೊಯ್ದಿದ್ದಾರೆ. ಆಗಿನಿಂದ ತಾಯಿ ನಾಪತ್ತೆಯಾಗಿದ್ದಾರೆ. ಹುಡುಕಿಕೊಂಡುವಂತೆ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ಯುವಕನೊಬ್ಬ ದೂರು ದಾಖಲಿಸಿದ್ದ.
ಈ ದೂರಿನನ್ವಯ ರೇವಣ್ಣ ಸಂಬಂಧಿ ಸತೀಶ್ ಬಾಬು ಹಾಗೂ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಆರೋಪಿ ಸತೀಶ್ ಬಾಬುರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ಕೋರ್ಟ್ಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ನೀಡಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
politics
crime
others
others
others
politics
crime
politics
politics
crime
politics
crime
crime
literature
crime
crime
politics
literature
politics
others
literature
crime
crime
politics
politics
politics
politics
education
crime