ಗಂಡನಿಂದಲೇ ಹೆಂಡತಿಯ ಅಮಾನುಷ ಹತ್ಯೆ..!: ದೊಡ್ಡಬಳ್ಳಾಪುರದಲ್ಲಿ ಆಕೆ.. ಆತ್ಮಹತ್ಯೆ
ಗಂಡನಿಂದಲೇ ಹೆಂಡತಿಯ ಅಮಾನುಷ ಹತ್ಯೆ..!: ದೊಡ್ಡಬಳ್ಳಾಪುರದಲ್ಲಿ ಆಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ, (ಮೇ.04); ತಾಲ್ಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಸಮೀಪದ ಅರಣ್ಯದಲ್ಲಿ  ಕೊಳೆತ ಸ್ಥಿತಿಯಲ್ಲಿ ದೊರೆತಿದ್ದ ಅಪರಿಚಿತ ಮಹಿಳೆಯ ಮೃತ ದೇಹದ ಗುರುತು ಪತ್ತೆಯಾಗಿದ್ದು, ಮೃತಳನ್ನು ನಗರದ ಕರೇನಹಳ್ಳಿ ನಿವಾಸಿ ವೀಣಾ (22 ವರ್ಷ) ಎಂದು ಗುರುತಿಸಲಾಗಿದೆ. 

ಈಕೆಯ ಗಂಡ ರವಿಚಂದ್ರ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ರವಿಚಂದ್ರ ಇತರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎನ್ನುವ ಅನುಮಾನದೊಂದಿಗೆ ಸದಾ ಮನೆಯಲ್ಲಿ ನಡೆಯುತ್ತಿದ್ದ ಜಗಳದಿಂದ ಬೇಸತ್ತು ವೀಣಾಳನ್ನು ಅರಣ್ಯಕ್ಕೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಮಾಡಿ ಸುಟ್ಟಿರುವುದಾಗಿ ತನಿಖೆ ವೇಳೆ ತಿಳಿಸಿದ್ದಾನೆ ಎಂದರು.

ಒಂದು ವಾರಗಳಿಂದ ಈಚೆಗೆ ವಿವಿಧ ಠಾಣೆಗಳಲ್ಲಿ ಮಹಿಳೆ ಕಾಣೆಯಾಗಿರುವ ದೂರುಗಳನ್ನು ಪರಿಶೀಲಿಸಿದಾಗ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ರವಿಚಂದ್ರ ತನ್ನ ಪತ್ನಿ ವೀಣಾ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದ.

ಈ ಬಗ್ಗೆ ವೀಣಾ ಸಂಬಂಧಿಕರನ್ನು ಕರೆಸಿ ಮೃತದೇಹದ ಸಮೀಪ ದೊರೆತಿದ್ದ ವಿವಿಧ ವಸ್ತುಗಳನ್ನು ತೋರಿಸಿದಾಗ ಮೃತ ಮಹಿಳೆ ವೀಣಾ ಎಂಬುದು ಪತ್ತೆಯಾಗಿದೆ ಎಂದರು. 

ಮಹಿಳೆ ಆತ್ಮಹತ್ಯೆ: ವೀಣಾ ಕೊಲೆ ಆರೋಪದಲ್ಲಿ ರವಿಚಂದ್ರ ಎಂಬಾತನ ಬಂಧನ ಮಾಡಿರುವ ವಿಚಾರ ತಿಳಿದು ಈತನೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಕರೇನಹಳ್ಳಿ ನಿವಾಸಿ ಕಲ್ಪನ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಈ ಕುರಿತಂತೆಯು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

politics

HL

politics

HL

politics

HL

crime

HL

politics

HL

health

HL

education

HL

education

HL

crime

HL

politics

HL

crime

HL

crime

HL

others

HL

politics

HL

crime

HL

others

HL

others

HL

others

HL

politics

HL

crime

HL

politics

HL

politics

HL

crime

HL

politics

HL

crime

HL

crime

HL

literature

HL

crime

HL

crime

HL

politics