ಹಾವೇರಿ, (ಏ.05): ಹೆಗಲ ಮೇಲೆ ಕೈಹಾಕಿದ್ದಕ್ಕೆ ಕಾಂಗ್ರೆಸ್ ಮುಖಂಡನಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ.
ಶನಿವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಪರ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಶಿವಕುಮಾರ್ ಅವರ ಕಾರಿನ ಮುಂದೆ ಜಮಾಯಿಸಿದ್ದರು.
ಡಿಕೆ ಶಿವಕುಮಾರ್ ಪರ ಜೋರಾಗಿ ಘೋಷಣೆಗಳನ್ನು ಕೂಗುತ್ತಿದ್ದರು. ಆಗ ಶಿವಕುಮಾರ್ ಕಾರಿನಿಂದ ಇಳಿದು ಮುಂದೆ ಸಾಗಲು ಪ್ರಯತ್ನಿಸಿದ್ದಾರೆ. ಕಾರಿನಿಂದ ಶಿವಕುಮಾರ್ ಕೆಳಗಿಳಿಯುತ್ತಿದ್ದಂತೆ ಮುಖಂಡರೊಬ್ಬರು ಹೆಗಲ ಮೇಲೆ ಕೈಹಾಕಿ ಪೋಸ್ ನೀಡಲು ಮುಂದಾಗಿದ್ದಾರೆ.
ಇದರಿಂದ ಕೋಪಿಸಿಕೊಂಡ ಶಿವಕುಮಾರ್, ಕಪಾಳಕ್ಕೆ ಬಾರಿಸಿದ್ದಾರೆ. ಪುರಸಬೆ ಸದಸ್ಯ ಅಲ್ಲಾವುದ್ದೀನ್ ಮನಿಯಾರ್ ಕಪಾಳಕ್ಕೆ ಶಿವಕುಮಾರ್ ಹೊಡೆದಿದ್ದಾರೆ. ನಂತರ ಸ್ಥಳದಲ್ಲಿದ್ದ ಪೊಲೀಸರು ಮುಖಂಡರು ಆತನ ಹಿಂದೆಕ್ಕೆ ತಳ್ಳಿದ್ದಾರೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
politics
sports
others
literature
sports
literature
sports
agriculture
crime
politics
politics
politics
crime
politics
health
education
education
crime
politics
crime
crime
others
politics
crime
others
others
others
politics
crime
politics