ಚನ್ನಪಟ್ಟಣ, (ಮೇ.06); ಮದುವೆ ಊಟದ ನಂತರ ಐಸ್ ಕ್ರೀಂ ಸೇವಿಸಿದ ಸುಮಾರು 50ಕ್ಕೂ ಹೆಚ್ಚು ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡು ತೀವ್ರ ಅಸ್ವಸ್ಥರಾದ ಘಟನೆ ಭಾನುವಾರ ಚನ್ನಪಟ್ಟಣದಲ್ಲಿ ನಡೆದಿದೆ.
ಅವಧಿ ಮುಗಿದ ಐಸ್ಕ್ರೀಂ ಸೇವಿಸಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅಸ್ವಸ್ಥರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಸಾತನೂರು ಸರ್ಕಲ್ ಬಳಿ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಮದುವೆಯಲ್ಲಿ ಪಾಲ್ಗೊಂಡಿದ್ದ ನೂರಾರು ಮಂದಿ ಊಟದ ನಂತರ ಐಸ್ ಕ್ರೀಂ ಸೇವಿಸಿದ್ದು, ಐಸ್ ಕ್ರೀಂ ಸೇವಿಸಿದ ಅರ್ಧ ಗಂಟೆಯಲ್ಲೇ ಅವರಿಗೆ ವಾಂತಿ, ಭೇದಿ ಶುರುವಾಗಿದೆ.
ಅಸ್ವಸ್ಥಗೊಂಡವರೆಲ್ಲ ಚನ್ನಪಟ್ಟಣದ ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳಾಗಿದ್ದಾರೆ. ಅಸ್ವಸ್ಥರಾದವರಲ್ಲಿ 40 ಮಂದಿ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಉಳಿದವರು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮದುವೆ ರದ್ದು: ಮತ್ತೊಂದು ಪ್ರಕರಣದಲ್ಲಿ ಮದುವೆ ಹಿಂದಿನ ದಿನದ ರಾತ್ರಿಯ ಊಟಕ್ಕೆ ಸಿಹಿ ತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಕೊಡಗಿನ ಸೋಮವಾರಪೇಟೆಯ ಕಲ್ಯಾಣಮಂಟಪವೊಂದರಲ್ಲಿ ನಡೆದಿದೆ.
ಹಾನಗಲ್ಲು ಗ್ರಾಮದ ಯುವತಿಯ ವಿವಾಹ ತುಮಕೂರುಜಿಲ್ಲೆಯ ಯುವಕನೊಂದಿಗೆ ನಿಶ್ಚಯವಾಗಿತ್ತು.
ಊಟದಲ್ಲಿ ಸಿಹಿ ತಿಂಡಿ ಇಲ್ಲ ಎಂಬ ಕಾರಣಕ್ಕೆ ಎರಡೂ ಕಡೆಯವರ ಮಧ್ಯೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆಯಿತು. ಮದುವೆಯೇ ಬೇಡ ಎಂದು ವರ ಉಂಗುರ ಕಳಚಿ ಕೊಟ್ಟಿದ್ದ.
ಭಾನುವಾರ ಬೆಳಗ್ಗೆ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತು. ವರ, 'ನಾನು ಈ ಹುಡುಗಿಯನ್ನೇ ಮದುವೆಯಾಗುತ್ತೇನೆ' ಎಂದು ಹೊಸ ವರಸೆ ಶುರು ಮಾಡಿದ. ಆದರೆ, ಈ ಘಟನೆಯಿಂದ ಬೇಸತ್ತ ವಧು 'ನನಗೆ ಈ ಮದುವೆಯೇ ಬೇಡ' ಎಂದು ಪೊಲೀಸರೆದುರು ಹೇಳಿಕೆ ನೀಡಿದಳು. ಇದರಿಂದಾಗಿ ಮದುವೆ ಮುರಿದು ಬಿತ್ತು ಎನ್ನಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
crime
crime
politics
sports
others
politics
sports
others
literature
sports
literature
sports
agriculture
crime
politics
politics
politics
crime
politics
health
education
education
crime
politics
crime
crime
others
politics
crime
others