ದೊಡ್ಡಬಳ್ಳಾಪುರ, (ಮೇ.06); ಪ್ರಕರಣವೊಂದರ ಹಿನ್ನೆಲೆಯಲ್ಲಿ ತನಿಖೆ ನಡೆಸಿ ತೆರಳುತ್ತಿದ್ದ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರ ಜೀಪ್ ಅಪಘಾತಕ್ಕೀಡಾಗಿರುವ ಘಟನೆ ನಗರದ ಹೊರವಲಯದಲ್ಲಿರುವ ಪಾಲನಜೋಗಿಹಳ್ಳಿ ಬಳಿ ಸಂಭವಿಸಿದೆ.
ಭಾನುವಾರ ರಾತ್ರಿ ಜಮೀನಿನಲ್ಲಿ ಅಳವಡಿಸಿದ್ದ ಸ್ಟಾರ್ಟರ್ ಹಾಗೂ ಕೇಬಲ್ ಕಳ್ಳತನ ಮಾಡಲು ಬಂದಿದ್ದ ಮಹಿಳೆಯನ್ನು ಕಲ್ಲುಕುಂಟೆ ರೈತರು ಹಿಡಿದು ಹೊಸಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದರು.
ಈ ಪ್ರಕರಣದ ತನಿಖೆ ನಡೆಸಿ ಬಂಧಿತ ಮಹಿಳೆಯನ್ನು ಸಾಂತ್ವಾನ ಕೇಂದ್ರಕ್ಕೆ ಬಿಟ್ಟು ಬಂದು, ಮರಳಿ ಬೆಳಗ್ಗಿನ ಜಾವ ಮನೆಗೆ ತೆರಳುತ್ತಿದ್ದ ವೇಳೆ, ಜೀಪ್ ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಇನ್ಸ್ಪೆಕ್ಟರ್ ರಾಚದ ಗಣೇಶ್ ಜನಾರ್ಧನ್ ಹಾಗೂ ಚಾಲಕ ವೆಂಕಟೇಶ್ ಅವರಿಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.
ನಗರದ ಹೊರವಲಯದಲ್ಲಿರುವ ಪಾಲನಜೋಗಿಹಳ್ಳಿ ಬಳಿ ಅಡ್ಡಬಂದ ನಾಯಿಯನ್ನು ರಕ್ಷಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
politics
sports
crime
crime
politics
sports
others
politics
sports
others
literature
sports
literature
sports
agriculture
crime
politics
politics
politics
crime
politics
health
education
education
crime
politics
crime
crime
others
politics