ದೊಡ್ಡಬಳ್ಳಾಪುರ, (ಏ.24); ಕನ್ನಡ ರಂಗಭೂಮಿಯಿಂದ ಚಲನಚಿತ್ರ ರಂಗಕ್ಕೆ ಬಂದ ಬಹುಮುಖಿ ಪ್ರತಿಭೆಯ ಮೇರು ಕಲಾವಿದ ಡಾ.ರಾಜ್ ಕುಮಾರ್ ಆಗಿದ್ದಾರೆ. ಕನ್ನಡ ಚಲನಚಿತ್ರ ನಟರಾಗಿ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದ ಡಾ.ರಾಜ್ ಕುಮಾರ್ ಗಾಯಕರಾಗಿ ರಾಷ್ಟ್ರಪ್ರಶಸ್ತಿಯನ್ನು ಪಡೆದಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ನಡೆದ ಡಾ.ರಾಜ್ ಕುಮಾರ್ ಜನ್ಮದಿನಾಚರಣೆಯನ್ನು ಕನ್ನಡ ಅಭಿಮಾನ ದಿನ ಆಚರಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಡಾ.ರಾಜ್ ಕುಮಾರ್ ಕನ್ನಡಿಗರ ಮೇಲೆ ಬೀರಿದ ಪ್ರಭಾವ ಅಪಾರವಾಗಿದೆ. ಚಲನಚಿತ್ರಗಳಲ್ಲಿ ಡಾ.ರಾಜ್ ಕುಮಾರ್ ನಿರ್ವಹಿಸಿದ ಪಾತ್ರಗಳು ವೈವಿಧ್ಯಮಯವಾಗಿವೆ. ಜನಸಾಮಾನ್ಯರ ಬದುಕಿಗೆ ಸ್ಪಂದಿಸುವ ಅವರ ಪಾತ್ರಗಳು ಪ್ರೇಕ್ಷಕರ ಮನಸ್ಸಿನಲ್ಲಿ ಬಹುಕಾಲ ಉಳಿಯುವಂತಾಯಿತು.
ಕನ್ನಡ ನಾಡು ನುಡಿಯ ವಿಚಾರದಲ್ಲೂ ಡಾ.ರಾಜ್ ಕುಮಾರ್ ಮುಂಚೂಣಿಯಲ್ಲಿದ್ದರು ಎಂಬುದಕ್ಕೆ ಗೋಕಾಕ್ ಚಳುವಳಿ ಸಾಕ್ಷಿಯಾಗಿ ಎಂದರು.
ಕನ್ನಡ ನಾಡಿನ ಸಾಂಸ್ಕೃತಿಕ ನಾಯಕರಾಗಿರುವ ಡಾ.ರಾಜ್ ಕುಮಾರ್ ರಾಜಕುಮಾರ ಅವರ ವ್ಯಕ್ತಿತ್ವ ಮತ್ತು ಕಲಾ ಪ್ರತಿಭೆ ಒಂದು ವಿಶ್ವವಿದ್ಯಾಲಯವಿದ್ದಂತೆ. ಅಭಿಮಾನಿಗಳನ್ನು ದೇವರೆಂದು, ನಿರ್ಮಾಪಕರನ್ನು ಅನ್ನದಾತರೆಂದು ಕರೆಯುವ ಮೂಲಕ ಸರಳ ಮತ್ತು ಸಜ್ಜನಿಕೆಗೆ ಹೆಸರಾಗಿದ್ದರು. ಇಂತಹ ಮೇರು ವ್ಯಕ್ತಿಗೆ ಭಾರತರತ್ನ ಪುರಸ್ಕಾರ ದೊರೆಯದಿರುವು ವಿಷಾದನೀಯ ಸಂಗತಿಯಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಡಾ.ರಾಜ್ ಕುಮಾರ್ ತಾವು ಅಭಿನಯ ಮಾಡುವ ಪಾತ್ರಗಳಿಗೆ ಸಾಕಷ್ಟು ಪೂರ್ವ ಸಿದ್ದತೆ ಮಾಡುತ್ತಿದ್ದರು ಎಂಬ ವಿಚಾರ ಗಮನಾರ್ಹವಾಗಿದೆ. ಮೊದಲು ಕಲಿಕೆ ನಂತರ ಅಭಿನಯ ಮಾಡುತ್ತಿದ್ದರು. ಅವರು ಕನ್ನಡ ಚಿತ್ರರಂಗಕ್ಕೆ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು.
ನಟನೆ ಮತ್ತು ಗಾಯನದ ಮೂಲಕ ಕನ್ನಡ ಚಿತ್ರರಂಗವನ್ನು ಉನ್ನತಮಟ್ಟಕ್ಕೆ ಏರಿಸಿದರು. ಇದು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡುವ ವ್ಯಕ್ತಿಗಳಿಗೆ ದಾರಿದೀಪವಾಗಿದೆ ಎಂದರು.
ಕನ್ನಡ ಅಭಿಮಾನ ದಿನ ಕಾರ್ಯಕ್ರಮದಲ್ಲಿ ಕನ್ನಡ ಹಿರಿಯ ಹೋರಾಟಗಾರ ಡಿ.ಎಲ್.ಚೌಡಪ್ಪ, ಮುಖ್ಯಶಿಕ್ಷಕ ಕೆ.ವಿ.ವೆಂಕಟರೆಡ್ಡಿ, ಕನ್ನಡಪರ ಹೋರಾಟಗಾರ ಗುರುರಾಜಪ್ಪ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಪ್ರಮಿಳಾ ಮಹದೇವ್, ಪ್ರತಿನಿಧಿ ಚಿಕ್ಕತುಮಕೂರು ಮುನಿರಾಜು, ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ, ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ ನಾಗರಾಜು, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್, ಬಾಶೆಟ್ಟಿ ಪ್ರೇರಣಾ ಸಂಸ್ಥೆಯ ನೇತ್ರಾವತಿ, ಮುನಿರತ್ನಮ್ಮ, ದರ್ಗಾಜೋಗಿಹಳ್ಳಿ ಮಲ್ಲೇಶ್, ಷಫೀರ್, ಕಲಾವಿದ ಹಿತೇಶ್ ಮೊದಲಾದವರು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
politics
politics
crime
politics
health
literature
politics
politics
health
politics
others
politics
crime
politics
crime
literature
crime
education
crime
literature
politics
politics
crime
crime
politics
literature
crime
crime
others
crime