ಬೆಂಗಳೂರು, (ಜುಲೈ.04): ಅಶ್ಲೀಲ ಸಂದೇಶ ಕಳಿಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ ಆರೋಪದಡಿಯಲ್ಲಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಕೋರ್ಟ್, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ. ಇದರನ್ವಯ ಜುಲೈ 18ರವರೆಗೆ ದರ್ಶನ್ ಅವರಿಗೆ ನ್ಯಾಯಾಂಗ ಬಂಧನ ಮುಂದುವರಿಯಲಿದೆ.
ದರ್ಶನ್, ನಟಿ ಪವಿತ್ರಾ ಗೌಡ ಮುಂತಾದವರಿಗೆ ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.
ರೇಣುಕಾಸ್ವಾಮಿ ಕೊಲೆ ಕೇಸ್ನ ಪ್ರಕರಣದ ಎ2 ಆರೋಪಿ ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್ಗೆ ಹಾಜರಾಗಿದ್ದರು.
ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನ ಹಾಜರುಪಡಿಸಲಾಗಿತ್ತು. ಮಹಿಳಾ ಎ1 ಆರೋಪಿ ಪವಿತ್ರಾ ಗೌಡ ಪ್ರತ್ಯೇಕವಾಗಿ ಕೋರ್ಟ್ಗೆ ಹಾಜರಾಗಿದ್ದರು.
ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಜುಲೈ 18ರವರೆಗೆ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
health
others
politics
crime
crime
politics
crime
crime
others
economy
economy
travel
health
others
politics
others
health
crime
others
others
politics
others
others
politics
others
crime
others
others
politics