ದೊಡ್ಡಬಳ್ಳಾಪುರ| ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆ ಆರೋಪ; ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರ ಪ್ರತಿಭಟನೆ
ದೊಡ್ಡಬಳ್ಳಾಪುರ| ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆ ಆರೋಪ; ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರ ಪ್ರತಿಭಟನೆ

ದೊಡ್ಡಬಳ್ಳಾಪುರ, (ಜುಲೈ.04); ತಾಲ್ಲೂಕಿನ ಸಾಸಲು ಹೋಬಳಿಯ ಬೈಯ್ಯಪ್ಪನ ಗ್ರಾಮದಲ್ಲಿ ನಕಲಿ ದಾಖಲೆ ಸೃಷ್ಠಿಸಿ ನೂರಾರು ಎಕರೆ ಭೂಮಿ ಕಬಳಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ದೂರು ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಗುರುವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ವಿಜಯಕುಮಾರ್, ಉಪಾಧ್ಯಕ್ಷ ಮುನಿರಾಜಪ್ಪ, ಗೌರವ ಅಧ್ಯಕ್ಷ ಶಿವಣ್ಣ, ಜಿಲ್ಲಾ ಮುಖಂಡ ಸಿ.ಎಚ್.ರಾಮಕೃಷ್ಣ, ಬೈಯ್ಯಪ್ಪನಹಳ್ಳಿ ಗ್ರಾಮದಲ್ಲಿ ರೈತರು ಐದಾರು ದಶಕಗಳಿಂದಲು ಉಳುಮೆ ಮಾಡಿಕೊಂಡು ಬರುತ್ತಿದ್ದ ಕೃಷಿ ಜಮೀನಿಗೆ ಭೂ ಮಾಫಿಯಾದವರು ನಕಲಿ ದಾಖಲೆಗಳನ್ನು ಸೃಷ್ಠಿಸಿ ಕಬಳಿಸಲು ಮುಂದಾಗಿದ್ದಾರೆ. ನಕಲಿ ದಾನಪತ್ರ ಮಾಡಿಕೊಟ್ಟಿರುವ ವ್ಯಕ್ತಿಯ ವಿಳಾಸ, ದಾನಪತ್ರ ಮಾಡಿಕೊಟ್ಟಿರುವ ವ್ಯಕ್ತಿಯ ಸಂಬಂಧಿಗಳು ಎಲ್ಲರೂ ನಕಲಿಯೇ ಆಗಿದ್ದಾರೆ.

ದಾನ ಪತ್ರ ನೋಂದಣಿ ಮಾಡಿಕೊಟ್ಟಿರುವ ವ್ಯಕ್ತಿಯು ದಾನ ಪತ್ರ ಮಾಡಿಕೊಟ್ಟ ಮೂರೇ ದಿನದಲ್ಲಿ ಮೃತಪಟ್ಟಿದ್ದಾರೆ ಎನ್ನುವ ಸುಳ್ಳನ್ನು ಸಹ ಸೃಷ್ಠಿಸಲಾಗಿದೆ ಎಂದು ದೂರಿದರು.  

ರೈತರ ಮನವಿ ಸ್ವೀಕರಿಸಿದ ತಹಶೀಲ್ದಾರ್ ವಿಭಾವಿದ್ಯಾರಾಥೋಡ್ ಶನಿವಾರ ಈ ವಿವಾದ ಕುರಿತಂತೆ ರೈತರ ಸಭೆ ನಡೆಸಲಾಗುವುದು. ಮನವಿ ಪತ್ರದೊಂದಿಗೆ ನೀಡಲಾಗಿರುವ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಿ ನಕಲಿ ಮಾಡಿರುವುದು ಸಾಭೀತಾದರೆ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಲಾಗುವುದು ಎಂದರು.

ಪತ್ರಿಭಟನೆಯಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ, ಬೆಳವಂಗಲ ಪ್ರಭಾ ಸೇರಿದಂತೆ ವಂಚನೆಗೆ ಒಳಗಾಗಿರುವ ರೈತರು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

health

HL

others

HL

politics

HL

crime

HL

crime

HL

politics

HL

crime

HL

crime

HL

others

HL

economy

HL

economy

HL

travel

HL

health

HL

others

HL

politics

HL

others

HL

health

HL

crime

HL

others

HL

others

HL

politics

HL

others

HL

others

HL

politics

HL

others

HL

crime

HL

others

HL

others

HL

politics