ದೊಡ್ಡಬಳ್ಳಾಪುರ, (ಜುಲೈ.05); ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷ, ಅಂತರರಾಷ್ಟ್ರೀಯ ಛಾಯಾಗ್ರಾಹಕ ಜಿ.ರಾಜು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ (ರಿ.)" ಮತ್ತು “ ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೇಟ್ ಲಿಮಿಟೆಡ್ಜ್ " ಸಹಯೋಗದೊಂದಿಗೆ, ಬೆಂಗಳೂರಿನ ಅರಮನೆ ಮೈದಾನದ "ತ್ರಿಪುರ ವಾಸಿನಿ" ನಲ್ಲಿ ಆಯೋಜಿಸಿರುವ ಅಂತರಾಷ್ಟ್ರೀಯ ಮಟ್ಟದ ಪೋಟೋ ಟುಡೇ " ವಸ್ತು ಪ್ರದರ್ಶನದಲ್ಲಿ "ಕರ್ನಾಟಕ ಛಾಯಾರತ್ನ ಪ್ರಶಸ್ತಿಯನ್ನು ರಾಜು ಅವರಿಗೆ ಕನ್ನಡ ಚಿತ್ರರಂಗದ ನಟ ಪ್ರತಮ್ ಅವರು ವಿತರಿಸಿ, ಗೌರವಿಸಿದರು.
ಇಂದು ನಡೆದ ಮೊದಲ ದಿನದ ವಸ್ತು ಪ್ರದರ್ಶನದಲ್ಲಿ ಒಟ್ಟು ಏಳು ಮಂದಿ ಮಹಿಳಾ ಛಾಯಾಗ್ರಾಹಕಿಯರು ಸೇರಿ 52ಮಂದಿ ಛಾಯಾಗ್ರಾಹಕರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕಿರುತೆರೆ ನಟ ವಿಕ್ರಂ ಸೂರಿ, ಸಿನಿಮಾಟೋಗ್ರಾಫರ್ ಜಿಜಿ ಕೃಷ್ಣ, ನಿಕಾನ್ ಮುಖ್ಯಸ್ಥ ಸಜ್ಜನ್, ಕೆವಿಪಿಎ ಅಧ್ಯಕ್ಷ ಬೆಂಜಮಿನ್, ಪದಾಧಿಕಾರಿಗಳಾದ ಕೃಷ್ಣಪ್ಪ, ಜಗದೀಶ್ ಮತ್ತಿತರರಿದ್ದರು.
ದೊಡ್ಡಬಳ್ಳಾಪುರ ನಗರದ ಹೊರವಲಯದ ಬಾಶೆಟ್ಟಿಹಳ್ಳಿಯ ಮಂಜುನಾಥ್ ಸ್ಟುಡಿಯೋ ಮಾಲೀಕರಾದ ಜಿ.ರಾಜು ಅವರು ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕರ್ನಾಟಕ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶ್ನಿಸ್ತಿ ಸ್ವೀಕರರಾಜು ಅವರು, ಮಾತನಾಡಿದ ರಾಜು ಛಾಯಾಗ್ರಹಣ ಕಲೆಯನ್ನು ಕಲಿಸಿದ ಗುರುಗಳಿಗೆ ಹಾಗೂ ಬಾಶೆಟ್ಟಿಹಳ್ಳಿಯ ಶ್ರೀ ಮಂಜುನಾಥ ಸ್ಟುಡಿಯೋ ಗ್ರಾಹಕರಿಗೆ ಈ ಪ್ರಶಸ್ತಿಯನ್ನು ಅರ್ಪಿಸಲಾಗುವುದೆಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
health
others
politics
crime
crime
politics
crime
crime
others
economy
economy
travel
health
others
politics
others
health
crime
others
others
politics
others
others
politics
others
crime
others
others
politics
politics