ಆಂಬುಲೆನ್ಸ್‌ ತಡೆಗಟ್ಟಿ ಚಾಲಕನ ಮೇಲೆ ಹಲ್ಲೆ ಆರೋಪಿಗಳ ಬಂಧನ! VIDEO
ಆಂಬುಲೆನ್ಸ್‌ ತಡೆಗಟ್ಟಿ ಚಾಲಕನ ಮೇಲೆ ಹಲ್ಲೆ ಆರೋಪಿಗಳ ಬಂಧನ! VIDEO

ನೆಲಮಂಗಲ, (ಜೂ.10): ಖಾಸಗಿ ಆಂಬ್ಯುಲೆನ್ಸ್ ಅಡ್ಡಗಟ್ಟಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ನೆಲಮಂಗಲ ಟೋಲ್ ಬಳಿ ಚಾಲಕನ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಯಲಚೇನಹಳ್ಳಿ ಮೂಲದ ಯುವರಾಜ್ ಸಿಂಗ್, ಮಂಜುನಾಥ್, ಲತೀಶ್ ಎನ್ನುವ ಆರೋಪಿಗಳನ್ನು ಬಂಧಿಸಲಾಗಿದೆ.

ಭಾನುವಾರ ಸಂಜೆ ರೋಗಿಯನ್ನು ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸುವ ವೇಳೆ ಕ್ಷುಲ್ಲಕ ವಿಚಾರದಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಇವರು ಕಾರಿನಲ್ಲಿ ಬರುವಾಗ ಆಂಬ್ಯುಲೆನ್ಸ್ ಬಂದಿತ್ತು. ಆಂಬ್ಯುಲೆನ್ಸ್ ಅತಿ ವೇಗವಾಗಿ ಓಡಿಸ್ತಿದೀಯಾ ಎಂದು ಕಾರಿನಲ್ಲಿದ್ದ ಇವರು ನಾಲ್ವರು ಕುಡಿದ ನಶೆಯಲ್ಲಿಕ್ಯಾತೆ ತೆಗೆದಿದ್ದರು ಎನ್ನಲಾಗಿದೆ. ಅಲ್ಲದೆ ಚಾಲಕನ ಬಟ್ಟೆ ಹರಿದು ಹಾಕಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.

ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಖಾಸಗಿ ಆಂಬುಲೆನ್ಸ್ ಬರುತ್ತಿತ್ತು. ಐದು ತಿಂಗಳ ಮಗುವಿನ ತುರ್ತು ಚಿಕಿತ್ಸೆಗಾಗಿ, ಆಕ್ಸಿಜನ್ ಹಾಕಿಸಿ ಕರೆ ತರಲಾಗುತ್ತಿತ್ತು. ಚೇಸ್ ಮಾಡಿಕೊಂಡು ಬಂದು ಟೋಲ್ ಬಳಿ ಆಂಬುಲೆನ್ಸ್ ‌ನಿಂತಾಗ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics

HL

crime

HL

education