ನವದೆಹಲಿ, (ಜೂ.10): ಭಾನುವಾರವಷ್ಟೇ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರೆ ಎಂಬ ಮಾದ್ಯಮಗಳ ವರದಿಗೆ ಸ್ಪಷ್ಟನೆ ನೀಡಿದ್ದು, ಅದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಮೋದಿ ಸರಕಾರದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ಕೆಲವು ಮಾಧ್ಯಮಗಳು ತಪ್ಪು ಸುದ್ದಿಯನ್ನು ಹರಡುತ್ತಿವೆ. ಇದು ಸಂಪೂರ್ಣ ಸುಳ್ಳು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಕೇರಳದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದಕ್ಕೂ ಮುನ್ನ, ಕೇರಳದ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್, ದಕ್ಷಿಣ ರಾಜ್ಯದ ಪಕ್ಷದ ಘಟಕದಲ್ಲಿ ಸಿಬ್ಬಂದಿ ಬದಲಾವಣೆಯಾಗಲಿದೆ ಎಂಬ ವರದಿಗಳನ್ನೂ ಕೂಡ ಸುರೇಶ್ ಗೋಪಿ ತಳ್ಳಿಹಾಕಿದ್ದಾರೆ.
ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ನಟ-ರಾಜಕಾರಣಿ ಸುರೇಶ್ ಗೋಪಿ ಅವರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕ್ಯಾಬಿನೆಟ್ ಅಥವಾ MoS (ಸ್ವತಂತ್ರ) ಉಸ್ತುವಾರಿ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಸದನಾಗಿ ಇರ್ತೇನೆ, ನಾ ಸಿನಿಮಾ ರಂಗದಲ್ಲಿ ಮುಂದುವರೆಯುತ್ತೇ ಎಂಬ ವರದಿಗಳು ಹರಿದಾಡಿತ್ತು. ಆದರೆ ಅವರು ಇದು "ನಕಲಿ ಸುದ್ದಿ" ಎಂದು ತಳ್ಳಿಹಾಕಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
crime
politics
economy
economy
economy
crime
others
others
others
others
others
politics
others
sports
others
others
education
politics
economy
politics
sports
others
economy
others
others
crime
education
others
politics
crime