ಚಲಿಸುವ ರೈಲಿಗೆ ಅಡ್ಡ ಮಲಗಿ ಆತ್ಮಹತ್ಯೆ..!: ಚಕ್ರ ಹರಿದು ರುಂಡ-ಮುಂಡ ತುಂಡು
ಚಲಿಸುವ ರೈಲಿಗೆ ಅಡ್ಡ ಮಲಗಿ ಆತ್ಮಹತ್ಯೆ..!: ಚಕ್ರ ಹರಿದು ರುಂಡ-ಮುಂಡ ತುಂಡು

ಬೆಂಗಳೂರು, (ಜುಲೈ.26); ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು (ಕೆಎಸ್ ಆರ್) ನಿಲ್ದಾಣದಲ್ಲಿ ಚಲಿಸುವ ರೈಲಿಗೆ ಅಡ್ಡಮಲಗಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಮೃತ ದುರ್ದೈವಿಯನ್ನು ಪಶ್ಚಿಮ ಬಂಗಾಳ ಮೂಲದ 40 ವರ್ಷದ ಸುಶಾಂತ್ ಎಂದು ಗುರುತಿಸಲಾಗಿದೆ.

ಗುರುವಾರ ಮಧ್ಯಾಹ್ನ ಕೆಎಸ್‌ಆರ್ ರೈಲು ನಿಲ್ದಾಣದದಲ್ಲಿ ಈ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಶ್ಚಿಮ ಬಂಗಾಳದಲ್ಲಿರುವ ಮೃತನ ಕುಟುಂಬಕ್ಕೆ ಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬೇರ್ಪಟ್ಟ ರುಂಡ-ಮುಂಡ: ಮೃತ ಸುಶಾಂತ್ ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಗುರುವಾರ ಮಧ್ಯಾಹ್ನ ಕೆಎಸ್‌ಆರ್ ರೈಲು ನಿಲ್ದಾಣದ 8ನೇ ಅಂಕಣಕ್ಕೆ ಬಂದಿದ್ದ.

ಇದೇ ಸಮಯಕ್ಕೆ ಬೆಂಗಳೂರಿನಿಂದ ಮೈಸೂರು ಕಡೆಗೆ ಒಡೆಯ‌ರ್ ಎಕ್ಸ್‌ಪ್ರೆಸ್ ರೈಲು ಹೊರಟ್ಟಿದೆ. ಈ ವೇಳೆ ಏಕಾಏಕಿ ಓಡಿ ಬಂದಿರುವ ಸುಶಾಂತ್ ಹಳಿಗೆ ಅಡ್ಡಲಾಗಿ ಮಲಗಿದ್ದಾನೆ. ಈ ವೇಳೆ ರೈಲು ಚಕ್ರ ಆತನ ಕುತ್ತಿಗೆ ಮೇಲೆ ಹರಿದ ಪರಿಣಾಮ ರುಂಡ ಮತ್ತು ಮುಂಡ ಬೇರ್ಪಟ್ಟು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿಷಯ ತಿಳಿದು ಕೆಎಸ್‌ಆರ್ ರೈಲು ನಿಲ್ದಾಣದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಆಸತ್ರೆಗೆ ರವಾನಿಸಿದ್ದಾರೆ.

ಪಶ್ಚಿಮ ಬಂಗಾಳದಿಂದ ಮೃತನ ಕುಟುಂಬದವರು ನಗರದಕ್ಕೆ ಬಂದ ಬಳಿಕ ಮರಣೋತ್ತರ ಪರೀಕ್ಷೆ ಮಾಡಿಸಿ, ಮೃತದೇಹ ಹಸ್ತಾಂತರಿಸಲಾಗುವುದು. ಈ ಸಂಬಂಧ ಕೆಎಸ್‌ಆರ್ ರೈಲು ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others